| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE | 20 JUNE 2023
SHIMOGA : ಕೇಂದ್ರದ ಅಕ್ಕಿ (Rice) ಅಂದರೆ ಅದು ಬಿಜೆಪಿಯ ಅಕ್ಕಿಯಲ್ಲ. ಅವರ ಅಪ್ಪನ ಮನೆಯದ್ದು ಅಲ್ಲ. ಅದರಲ್ಲಿ ನಮ್ಮ ಹಣವು ಇದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದರು.
![]()
ಕೇಂದ್ರ ಸರ್ಕಾರ ತನ್ನ ಬಳಿ ದಾಸ್ತಾನು ಇರುವ ಅಕ್ಕಿಯನ್ನು (Rice) ಕೊಡಲು ನಿರಾಕರಿಸಿದ್ದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕಿಮ್ಮನೆ ರತ್ನಾಕರ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಬಳಿ ಇರುವ ಅಕ್ಕಿ ಬಿಜೆಪಿ ಅಕ್ಕಿಯಲ್ಲ. ಅದು ಅವರ ಮನೆಯದ್ದಲ್ಲ. ನಮ್ಮ ಸರ್ಕಾರ ಹಣ ಕೊಟ್ಟು ಅಕ್ಕಿ ಖರೀದಿಸಲಿದೆ. ಆ ಅಕ್ಕಿಯಲ್ಲಿ ನಮ್ಮ ರಾಜ್ಯದ ಹಣವು ಇದೆ. ಈ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮನವರಿಕೆ ಮಾಡಬೇಕು. ಬಡವರಿಗೆ ಅಕ್ಕಿ ಕೊಡಲು ತೊಂದರೆ ಮಾಡಲಾಗುತ್ತಿದೆ. ಈ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ಬಿಪಿಎಲ್ ಕಾರ್ಡ್ದಾರರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಿಮ್ಮನೆ ರತ್ನಾಕರ್ ಎಚ್ಚರಿಸಿದರು.

ಯೋಜನೆಗಳನ್ನು ಘೋಷಿಸಿದ್ದೇವೆ ಅಂದ ಮಾತ್ರಕ್ಕೆ ಅಧಿಕಾರಕ್ಕೆ ಬಂದ ತಕ್ಷಣ ಕೊಡಲು ಸಾಧ್ಯವಿಲ್ಲ. ಅದೇನು ತಟ್ಟನೆ ಕತ್ತರಿಸಿ ಕೊಡಲು ಮೈಸೂರು ಪಾಕ್ ಅಲ್ಲ. ನಮ್ಮ ಪಕ್ಷ ನೀಡಿದ ಭರವಸೆಗಳೆಲ್ಲವನ್ನು ಈಡೇರಿಸಲಿದೆ. ಬಿಜೆಪಿಯವರು ಇಷ್ಟು ವರ್ಷ ಅಧಿಕಾರದಲ್ಲಿದ್ದರು ಈವರೆಗೆ 15 ಲಕ್ಷ ರೂ. ಕೊಟ್ಟಿಲ್ಲ. ಉಳಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದು ಗಂಟೆ ಸುರಿದ ಮಳೆ, ವಿವಿಧೆಡೆ ರಸ್ತೆಗಳು ಜಲಾವೃತ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು
ಪ್ರತಿಭಟನಾ ಸಭೆಗೂ ಮುನ್ನ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಗಾಂಧಿ ಬಜಾರ್ ಮೂಲಕ ಶಿವಪ್ಪನಾಯಕ ಪ್ರತಿಮೆವರೆಗೂ ಮೆರವಣಿಗೆ ನಡೆಸಲಾಯಿತು.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()