ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020
ಮನೆ ದಾರಿಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ ಮಾಡಿರುವುದರಿಂದ ಮನೆಗೆ ಹೋಗಲು ದಾರಿಯಿಲ್ಲದೇ ಕುಟುಂಬವೊಂದು ಬೀದಿಗೆ ಬಿದ್ದಿದೆ.
ನವೆಂಬರ್ 23ರಿಂದ ಮನೆಗೆ ಹೋಗಲು ಸಾಧ್ಯವಾಗದೇ ಬಸ್ ನಿಲ್ದಾಣದಲ್ಲೇ ಆಶ್ರಯ ಪಡೆದುಕೊಂಡಿರುವ ಬಡ ಕುಟುಂಬದವರು ಇವತ್ತು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗುರುಪುರ ಇಂದಿರಾ ಬಡಾವಣೆಯ ಸಾಕಮ್ಮ ಕುಟುಂಬದವರು ಧರಣಿ ನಡೆಸಿದರು. ನಿದಿಗೆ ಹೋಬಳಿ ಇಸ್ಲಾಪುರ ಗ್ರಾಮದ ಸ.ನಂ.29ರಲ್ಲಿ ವಾಸವಾಗಿದ್ದಾರೆ. ತಹಶೀಲ್ದಾರ್ ಕಚೇರಿಯಿಂದ ಕರ್ನಾಟಕ ಭೂ ಕಂದಾಯ ಕಾಯ್ದೆ ನಿಗಮದ ಅನ್ವಯ ಹಕ್ಕುಪತ್ರ ನೀಡಲಾಗಿದೆ ಎಂದು ಧರಣಿ ನಿರತರು ತಿಳಿಸಿದರು.
ನವೆಂಬರ್ 22 ರಂದು ಮನೆಗೆ ಹೋಗುವ ದಾರಿಗೆ ಅಡ್ಡಲಾಗಿ ಲಕ್ಷ್ಮಮ್ಮ ಎಂಬುವರು ಕಾಂಪೌಂಡ್ ನಿರ್ಮಿಸಿದ್ದಾರೆ. 25 ವರ್ಷಗಳಿಂದ ವಾಸವಾಗಿರುವ ತಮಗೆ ಮನೆಗೆ ಹೋಗಲು ದಾರಿಯಿಲ್ಲದೇ ಸಮಸ್ಯೆಯಾಗಿದೆ. ಮನೆಗೆ ವಿದ್ಯುತ್, ನೀರು ಸಂಪರ್ಕವನ್ನು ಇದೇ ರಸ್ತೆಗೆ ಹೊಂದಿಕೊಂಡಂತೆ ಪಡೆಯಲಾಗಿದೆ. ಈ ಓಣಿ ರಸ್ತೆಯಲ್ಲದೇ ವಾಸದ ಮನೆಗೆ ಹೋಗಲು ಯಾವುದೇ ಮಾರ್ಗ ಇಲ್ಲ. ಆದ್ದರಿಂದ ತಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಧರಿಣನಿರತ ಸಾಕಮ್ಮ ಶೇಷಗಿರಿ ಕುಟುಂಬದವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






