SHIVAMOGGA LIVE NEWS | 29 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಜೂನ್ 4ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಹಾಗೂ ವಾಹನಗಳ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ (Diversion) ಮಾಡಿ ಜಿಲ್ಲಾಧಿಕಾರಿ ಗುರದತ್ತ ಹೆಗಡೆ ಆದೇಶಿಸಿದ್ದಾರೆ.
ಯಾವ್ಯಾವ ಮಾರ್ಗದಲ್ಲಿ ವಾಹನ ಸಂಚಾರ ಬದಲು?
ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀ. ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.
ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ಗಳು ಹಾಗೂ ಕಾರು ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು.
ಚಿತ್ರದುರ್ಗ, ಹೊಳೆಹೊನ್ನೂರು ಕಡೆಯಿಂದ ಬಂದು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ಗಳು ಬಿ.ಹೆಚ್.ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣಕ್ಕೆ ಹೋಗಬೇಕು.

ಹೊನ್ನಾಳಿ ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್ಗಳನ್ನು 100 ಅಡಿರಸ್ತೆ, ವಿನೋಬನಗರ ಮಾರ್ಗವಾಗಿ ತೆರಳಬೇಕು.
ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್ಗಳು ಎ. ಎ. ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮೂಲಕ ತೆರಳಬೇಕು.
ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್. ಸರ್ಕಲ್ ಕಡೆಗೆ ಹೋಗುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಅಂಬುಲೆನ್ಸ್ ಹಾಗೂ ಮೂಲ ಸೌಕರ್ಯ ಒದಗಿಸುವ ವಾಹನಗಳ ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿದೆ.
ಎಲ್ಲೆಲ್ಲಿದೆ ಪಾರ್ಕಿಂಗ್ ವ್ಯವಸ್ಥೆ?
ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು ಮತ್ತು ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಹೆಚ್.ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ವಾಹನ ಪಾರ್ಕಿಂಗ್ಗೆ ಅನುಮತಿಸಿದೆ.
ಸಾರ್ವಜನಿಕ ವಾಹನಗಳಿಗೆ ಪಾರ್ಕಿಂಗ್
ಎಂ.ಆರ್.ಎಸ್. ಸರ್ಕಲ್ನ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ವಾಹನಗಳ ಪಾರ್ಕಿಂಗ್ಗೆ ಅನುಮತಿ ನೀಡಿದೆ. ಸಾರ್ವಜನಿಕರ ಕಾರು ಮತ್ತು ದ್ವಿಚಕ್ರ ವಾಹನಗಳ ನಿಲುಗಡೆ ಎಂಆರ್.ಎಸ್. ನಿಂದ ಎನ್.ಆರ್.ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಮಾಡುವುದು. ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ವೇಡಿಯಂ ಹತ್ತಿರ ಸಾರ್ವಜನಿಕರ ಎಲ್ಲಾ ವಾಹನಗಳ ಪಾರ್ಕಿಂಗ್ಗೆ ಅನುಮತಿ ನೀಡಿದೆ. ಎಂ.ಆರ್.ಎಸ್. ಸರ್ಕಲ್ನಿಂದ ಬಿ.ಹೆಚ್.ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ವರೆಗೆ ಸಾರ್ವಜನಿಕರ ವಾಹನಗಳು ಒಡಾಡದಂತೆ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗದ ATMನಲ್ಲಿ ಹಣ ಬಿಡಿಸುತ್ತಿದ್ದಾಗ ಒಳ ನುಗ್ಗಿದ ಯುವಕ, ದುಡ್ಡಿಗಾಗಿ ವ್ಯಕ್ತಿಯ ಅಟ್ಟಾಡಿಸಿ ಅಟ್ಯಾಕ್
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






