SHIVAMOGGA LIVE NEWS | 17 MARCH 2024
SHIMOGA : ಬೀದಿ ಬದಿ ವ್ಯಾಪಾರ ಮಾಡುತ್ತ ಬದುಕು ಕಟ್ಟಿಕೊಂಡಿದ್ದವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಬಿಸಿ ತಟ್ಟಿದೆ. ಬೀದಿ ಬದಿ ಅಂಗಡಿಗಳನ್ನು ತೆರವು ಮಾಡಿಸಲಾಗಿದೆ.
![]() |
ಶಿವಮೊಗ್ಗ ಎಂಆರ್ಎಸ್ ಸರ್ಕಲ್ನಲ್ಲಿ ಕಮಾನಿನ ಪಕ್ಕದಲ್ಲಿ ಮಹಿಳೆಯರು ತರಕಾರಿ ಮಾರಾಟ ಮಾಡುತ್ತಿದ್ದರು. ತರಕಾರಿ ಇಡಲು ಮತ್ತು ಮಳೆ, ಬಿಸಿಲಿನಿಂದ ರಕ್ಷಣೆಗೆ ಟಾರ್ಪಲ್ ಕಟ್ಟಿಕೊಂಡಿದ್ದರು. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಈ ಅಂಡಿಗಳನ್ನು ತೆರವುಗೊಳಿಸಲಾಗಿದೆ. ಇದೇ ದಾರಿಯಲ್ಲಿ ರಸ್ತೆ ಪಕ್ಕದಲ್ಲಿ ಹಣ್ಣು ಮಾರಾಟಗಾರರನ್ನು ಕೂಡ ತೆರವುಗೊಳಿಸಲಾಗಿದೆ.
ಇನ್ನು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಈ ಭಾಗದಲ್ಲಿ ಭದ್ರತೆ ದೃಷ್ಟಿಯಿಂದ ಅಂಗಡಿಗಳನ್ನು ತೆರೆಯದಂತೆ ಸೂಚನೆ ನೀಡಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ನಗರ ಕೇಸರಿಮಯ, ಮೋದಿ ಸಾಗುವ ರಸ್ತೆಗಳಲ್ಲಷ್ಟೇ ಗುಂಡಿಗಳು ಮಾಯ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200