ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 MARCH 2024
SHIMOGA : ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಎಲ್ಲೆಡೆ ಕೇಸರಿ ಧ್ವಜಗಳು ರಾರಾಜಿಸುತ್ತಿವೆ. ಇನ್ನು, ಮೋದಿ ಕಾರು ಸಾಗುವ ಮಾರ್ಗದುದ್ದಕ್ಕು ಗುಂಡಿಗಳನ್ನು ಬಂದ್ ಮಾಡಲಾಗುತ್ತಿದೆ.

ರಾರಾಜಿಸುತ್ತಿವೆ ಕೇಸರಿ ಧ್ವಜ
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ (ಫ್ರೀಡಂ ಪಾರ್ಕ್) ರಸ್ತೆಯಲ್ಲಿ ಬಿಜೆಪಿ ಧ್ವಜಗಳನ್ನು ಹಾಕಲಾಗಿದೆ. ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗಿದೆ. ಪ್ರಧಾನಿ ಮೋದಿ ಮತ್ತು ರಾಘವೇಂದ್ರ ಭಾವಚಿತ್ರಗಳಿರುವ ಅಲಂಕೃತ ಫ್ಲೆಕ್ಸ್ಗಳನ್ನು ಹಾಕಲಾಗಿದೆ.

ಗುಂಡಿಗಳಿಗೆ ಸಿಗಲಿದೆ ಮುಕ್ತಿ
ಇನ್ನು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳನ್ನು ಬಂದ್ ಮಾಡಲಾಗುತ್ತಿದೆ. ಬಿ.ಹೆಚ್.ರಸ್ತೆಯಲ್ಲಿ ಡಾಂಬರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ರಸ್ತೆಯ ಇಕ್ಕೆಲಗಳಲ್ಲಿ ಇದ್ದ ಕಸ, ಮಣ್ಣು ತೆರವು ಮಾಡಲಾಗುತ್ತಿದೆ. ಇದಕ್ಕಾಗಿ ಜೆಸಿಬಿಗಳನ್ನು ಬಳಸಲಾಗುತ್ತಿದೆ. ಇನ್ನು, ಕಳೆದ ಎರಡು ದಿನದಿಂದ ಪೌರ ಕಾರ್ಮಿಕರು ನಿರಂತರವಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸಹ್ಯಾದ್ರಿ ಕಾಲೇಜು ಮುಂಭಾಗ ಇದ್ದ ಹಂಪ್ಗಳನ್ನು ತೆರವು ಮಾಡಲಾಗುತ್ತಿದೆ.

ಇದನ್ನೂ ಓದಿ – ‘ನನ್ನ ಹೃದಯದಲ್ಲಿ ರಾಮ, ಮೋದಿ, ಅವರ ಹೃದಯದಲ್ಲಿ ಮಕ್ಕಳು, ಶೋಭಾ’, ಈಶ್ವರಪ್ಪ ಕೆಂಡಾಮಂಡಲ
ಪ್ರಧಾನಿ ನರೇಂದ್ರ ಮೋದಿ ಅವರು ಮಾ.18ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






