ಶಿವಮೊಗ್ಗ: ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ನಗರದಲ್ಲಿ ಇವತ್ತು ರೂಟ್ ಮಾರ್ಚ್ (route march) ನಡೆಸಲಾಯಿತು.
ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ಸಾಗಿತು.
ಎಲ್ಲೆಲ್ಲಿ ಸಾಗಿತು ಪಥಸಂಚಲನ?
ಡಿ.ಎ.ಆರ್ ಪೊಲೀಸ್ ಮೈದಾನದಿಂದ ಅರಂಭವಾದ ಪಥಸಂಚಲನ ಅಶೋಕ ವೃತ್ತ, ಎ.ಎ. ವೃತ್ತ, ಎಸ್. ಎನ್ ವೃತ್ತ, ಕರ್ನಾಟಕ ಸಂಘ, ಡಿ.ವಿ.ಎಸ್ ವೃತ್ತ, ಮಹಾವೀರ ವೃತ್ತ, ಗೋಪಿ ವೃತ್ತದ ಮೂಲಕ ಡಿ.ಎ.ಆರ್.ಮೈದಾನ ತಲುಪಿತು.
ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗ ಜಿಲ್ಲೆಯ ಫಲಿತಾಂಶದ ಟಾಪ್ ಪಾಯಿಂಟ್ಸ್ ಇಲ್ಲಿದೆ
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಡಿವೈಎಸ್ಪಿಗಳು, ಇನ್ಸ್ಪೆಕ್ಟರ್ಗಳು, ಸಬ್ ಇನ್ಸ್ಪೆಕ್ಟರ್ಗಳು, 6 ಕೆ.ಎಸ್.ಆರ್.ಪಿ ತುಕಡಿ, 5 ಡಿ.ಎ.ಆರ್ ತುಕಡಿ ಮತ್ತು 700 ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200