ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 NOVEMBER 2023
SHIMOGA : ದೀಪಾವಳಿ ಹಬ್ಬ ಮತ್ತು ಇತ್ತೀಚಿನ ಅಗ್ನಿ ಅವಘಡಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ರೈಲ್ವೆ ಮಂಡಳಿ, ಆರ್ಪಿಎಫ್ ಮುಖ್ಯ ಕಚೇರಿಯ ನಿರ್ದೇಶನದಂತೆ ಸುಲಭವಾಗಿ ಬೆಂಕಿ ಹರಡುವ ವಸ್ತುಗಳನ್ನು (crackers) ಸಾಗಿಸುವುದರ ವಿರುದ್ಧ ವಿಶೇಷ ಜಾಗೃತಿ ಅಭಿಯಾನವನ್ನು ಮಂಗಳವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಪೋಸ್ಟ್ ಕಮಾಂಡರ್, ರೈಲ್ವೆ ರಕ್ಷಣಾ ಪಡೆಯಿಂದ ನಡೆಸಲಾಯಿತು.
ರೈಲುಗಳಲ್ಲಿ ಅಥವಾ ರೈಲ್ವೆ ನಿಲ್ದಾಣ ಆವರಣದಲ್ಲಿ ಯಾವುದೆ ದಹನಕಾರಿ ವಸ್ತುಗಳು, ಪಟಾಕಿಗಳನ್ನು ಕೊಂಡೊಯ್ಯದಂತೆ ತಿಳಿವಳಿಕೆ ಮೂಡಿಸಲಾಯಿತು.
ಇದನ್ನೂ ಓದಿ- 12 ಸೆಕೆಂಡ್ನ ವಿಡಿಯೋ ಅಪ್ಲೋಡ್ ಮಾಡಿದ್ದವನ ವಿರುದ್ಧ ದಾಖಲಾಯ್ತು ಕೇಸ್
ರೈಲುಗಳಲ್ಲಿ ಪಟಾಕಿ, ಸಿಲಿಂಡರ್ ಇತರೆ ದಹನಕಾರಿ ವಸ್ತುಗಳನ್ನು ಸಾಗಿಸುವುದು ಕಂಡು ಬಂದರೆ ರೈಲ್ವೆ ಕಾಯಿದೆಯಂತೆ 3 ವರ್ಷ ಜೈಲು ಶಿಕ್ಷೆ ಅಥವಾ 1 ಸಾವಿರ ರೂ. ದಂಡ ಅಥವಾ ಎರಡನ್ನೂ ವಿಧಿಸಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಲಾಯಿತು. ಈ ವೇಳೆ ಆರ್ಪಿಎಫ್ ಇನ್ಸ್ಪೆಕ್ಟರ್ ಬಿ.ಎನ್. ಕುಬೇರಪ್ಪ, ಸಬ್ ಇನ್ಸ್ಪೆಕ್ಟರ್ ಸಂತೋಷ್ ಗಾಂಪ್ಟರ್ ಹಾಗೂ ಸಿಬ್ಬಂದಿ ಇದ್ದರು.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















