SHIMOGA NEWS, 20 OCTOBER 2024 : ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ವಾರ್ಷಿಕ ಪಥ ಸಂಚಲನ ನಡೆಯಿತು. ಜೋರು ಮಳೆಯ ಮಧ್ಯೆ ಪಥ ಸಂಚಲನ ನಡೆಯಿತು.
ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘದ ಪಕ್ಕದ ತಾನಾಜಿ ಸಂಘ ಸ್ಥಾನದಿಂದ ಪಥ ಸಂಚಲನ ಆರಂಭವಾಯಿತು. ಗಾಂಧಿ ಬಜಾರ್, ಅಶೋಕ ರಸ್ತೆ, ಬಿ.ಹೆಚ್.ರಸ್ತೆ ಮೂಲಕ ಮೈಲಾರೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಯಿತು.
ಇದನ್ನೂ ಓದಿ » ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್ ರೌಂಡ್ಸ್
ಆರ್ಎಸ್ಎಸ್ ಕಾರ್ಯಕರ್ತರು ಗಣವೇಷಧಾರಿಗಳಾಗಿ ಪಥ ಸಂಚಲನದಲ್ಲಿ ಭಾಗಹಿಸಿದ್ದರು. ಬ್ಯಾಂಡ್ ತಂಡ ಮೆರವಣಿಗೆಯಲ್ಲಿ ಭಾಗವಹಿಸಿತ್ತು. ಜೀಪ್ನಲ್ಲಿ ಆರ್ಎಸ್ಎಸ್ ಸಂಸ್ಥಾಪಕರು, ಭಾರತ ಮಾತೆಯ ಭಾವಚಿತ್ರಗಳ ಮೆರವಣಿಗೆ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಗಣವೇಷಧಾರಿಗಳಾಗಿ ದಂಡ ಹಿಡಿದು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ, ರಸ್ತೆಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200