Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಇವತ್ತು ಅಮೃತಮಯಿ, ವಿವಿಧ ವಿಷಯಗಳ ಸಂವಾದ, ಸಂಜೆ ಅದ್ಧೂರಿ ಅಭಿನಂದನಾ ಸಮಾರಂಭ

ಶಿವಮೊಗ್ಗದಲ್ಲಿ ಇವತ್ತು ಅಮೃತಮಯಿ, ವಿವಿಧ ವಿಷಯಗಳ ಸಂವಾದ, ಸಂಜೆ ಅದ್ಧೂರಿ ಅಭಿನಂದನಾ ಸಮಾರಂಭ

27/01/2024 9:21 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 27 JANUARY 2024

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಕೈಗಾರಿಕೋದ್ಯಮಿ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡರಿಗೆ ಇಂದು ಅಮೃತಮಯಿ ಶೀರ್ಷಿಕೆಯಡಿ ಅಭಿನಂದನಾ ಕಾರ್ಯಕ್ರಮ ಹಾಗೂ ಅವರ ಬದುಕು-ಸಾಧನೆ ಕುರಿತ ದಿ ಐರನ್‌ ಮ್ಯಾನ್‌ ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ.

ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಶನ್‌ ಹಾಲ್‌ನಲ್ಲಿ ಬೆಳಗ್ಗೆ 10.30ರಿಂದ ಸಂವಾದ ಕಾರ್ಯಕ್ರಮ ನಡೆಯಲಿದೆ. ಪಕ್ಕದ ಮೈದಾನದಲ್ಲಿ ಸಂಜೆ 5.30ಕ್ಕೆ ಅಭಿನಂದನಾ ಸಮಾರಂಭ ನಡೆಯಲಿದೆ.  

ಯಾವೆಲ್ಲ ವಿಷಯದ ಸಂವಾದ ನಡೆಯಲಿದೆ?

ಬೆಳಗ್ಗೆ 10.30 ರಿಂದ ಶ್ರಮದಿಂದ ಸಾರ್ಥಕತೆಯೆಡೆಗೆ ಶೀರ್ಷಿಕೆಯಡಿ ಯವಕರಿಗೆ ಮಾರ್ಗದರ್ಶಿ ವಿಚಾರಗೋಷ್ಠಿ ನಡೆಯಲಿದೆ. ರುದ್ರೇಗೌಡರ ವ್ಯಕ್ತಿತ್ವದ ಭಾಗವಾದ ರಾಜಕಾರಣ, ಸಮಾಜಸೇವೆ, ಕೈಗಾರಿಕೆಗಳ ಕುರಿತು ಚರ್ಚೆಗಳನ್ನು ಯುವಕರಿಗಾಗಿ ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಮೂವರು ಹೆಸರಾಂತ ಸಂಪನ್ಮೂಲ ವ್ಯಕ್ತಿಗಳು ಯುವಕ-ಯುವತಿಯರೊಂದಿಗೆ ಸಾಕಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ಕಾರ್ಕಳ ಶಾಸಕರಾದ ವಿ.ಸುನಿಲ್‌ ಕುಮಾರ್‌ ಅವರು ಮೌಲ್ಯಾಧಾರಿತ ರಾಜಕಾರಣ ಕುರಿತು, ಬೆಂಗಳೂರು ಅದಮ್ಯ ಚೇತನ ಫೌಂಡೇಷನ್‌ನ ತೇಜಸ್ವಿನಿ ಅನಂತಕುಮಾರ್‌ ಅವರು ಪರಿಸರ ಪ್ರಜ್ಞೆಯೇ ಸಮಾಜ ಸೇವೆ ಕುರಿತು ಹಾಗೂ  ಕಿರ್ಲೋಸ್ಕರ್‌ ಫೆರುಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಮ್ಯಾನೇಜ್‌ಮೆಂಟ್‌ ಆಂಡ್‌ ಟೆಕ್ನಿಕಲ್‌ ಅಡ್ವೈಜರ್‌ ಬಿ.ಎಸ್‌.ಗೋವಿಂದ್‌ ಅವರು ಸಾಧನೆಗೊಂದು ಗುರಿ ವಿಷಯ ಕುರಿತು ವಿಚಾರ ಗೋಷ್ಟಿ ನಡೆಸಿಕೊಡಲಿದ್ದಾರೆ. ವಿಚಾರಗೋಷ್ಟಿಯ ಅಧ್ಯಕ್ಷತೆಯನ್ನು ಬೆಂಗಳೂರು ರಮಣಶ್ರೀ ಫೌಂಡೇಷನ್‌ನ ಅಧ್ಯಕ್ಷರಾದ ನಾಡೋಜ ಎಸ್‌.ಷಡಕ್ಷರಿ ಅವರು ವಹಿಸಲಿದ್ದಾರೆ.

ವಿವಿಧ ಕ್ಷೇತ್ರಗಳ ಆಯ್ದ ಯುವಕರೊಂದಿಗೆ ರುದ್ರೇಗೌಡರ ಬದುಕು-ಸಾಧನೆ ಕುರಿತು “ಅಂತರಂಗ-ಬಹಿರಂಗ” ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅವರ ಬೆಳವಣಿಗೆ, ಕಷ್ಟಗಳನ್ನು ಅವಕಾಶಗಳನ್ನಾಗಿಸಿಕೊಂಡು ಸಾಧಿಸಿದ ರೀತಿ, ಉದ್ಯಮಗಳನ್ನು ಕಟ್ಟಿದ ಶ್ರಮ, ಎಲ್ಲರನ್ನೂ ಜೊತೆಯಾಗಿ ಬೆಳೆಸಿದ ಪರಿ, ಈ ಎಲ್ಲ ವಿಚಾರಗಳನ್ನೂ ಅವರೊಂದಿಗಿನ ಆತ್ಮೀಯ ಸಂವಾದದಲ್ಲಿ ಅವರ ಪುತ್ರಿ ಚೈತ್ರ ಅರುಣ್‌ ನಿರ್ವಹಿಸಲಿದ್ದಾರೆ.

ಅಭಿನಂದನಾ ಸಮಾರಂಭ

ಸುಪ್ರೀಂಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್‌ ವಿ. ಪಾಟೀಲ್‌ ಗೌರವ ಸಮರ್ಪಣೆ ಮಾಡುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಗೌಡರ ಬದುಕು-ಸಾಧನೆ ಕುರಿತ ‘ಎಸ್‌. ರುದ್ರೇಗೌಡ-ದಿ ಐರನ್‌ ಮ್ಯಾನ್‌ʼ ಪುಸ್ತಕವನ್ನು ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ವಿಧಾನ ಪರಿಷತ್‌ ಮಾಜಿ ಸಭಾಪತಿ ಬಿ.ಎಲ್‌ ಶಂಕರ್‌ ಅವರು ಗೌಡರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಎಸ್‌.ರುದ್ರೇಗೌಡರ ಕುರಿತ ಕಿರುಚಿತ್ರ ಕೂಡ ಲೋಕಾರ್ಪಣೆಗೊಳ್ಳಲಿದೆ.

ಇದನ್ನೂ ಓದಿ – ಶಿವಮೊಗ್ಗದ ಸವಳಂಗ ರಸ್ತೆಯ ರೈಲ್ವೆ ಮೇಲ್ಸೇತುವೆ ಮೇಲೆ ವಾಹನ ಸಂಚಾರ ಶುರು

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article bk-sangameshwara-and-beluru-gopalakrishna ಸಂಗಮೇಶ್ವರ, ಬೇಳೂರಿಗೆ ನಿಗಮದ ಅಧ್ಯಕ್ಷ ಸ್ಥಾನ, ಯಾವ ನಿಗಮ? ಅವುಗಳ ಜವಾಬ್ದಾರಿ ಏನು?
Next Article hamanuru-Shivashankarappa-and-BY-Raghavendra-with-Dr-Mallikarjuna-Murugarajendra-swamji ‘ಬಿಜೆಪಿಯಿಂದ ರಾಘವೇಂದ್ರಗೆ ಟಿಕೆಟ್‌, ಮತ್ತೆ ಆಯ್ಕೆ ಮಾಡಿ’, ಕಾಂಗ್ರೆಸ್‌ ಹಿರಿಯ ಶಾಸಕ ಬಹಿರಂಗ ಹೇಳಿಕೆ

ಇದನ್ನೂ ಓದಿ

hakti-cars-pvt-ltd-shimoga-Toyota-showroom
SHIVAMOGGA CITY

ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್‌ಚೇಂಜ್‌ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್‌ ಉದ್ಯೋಗಿಗಳಿಗೆ ಭರ್ಜರಿ ಆಫರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Tree-cuttion-row-in-Shimoga-city
SHIVAMOGGA CITY

ರಾತ್ರೋರಾತ್ರಿ ಕಾರಿನಲ್ಲಿ ಬಂದು ಫುಟ್‌ಪಾತ್‌ ಮೇಲಿದ್ದ ಮರಕ್ಕೆ ಗರಗಸ ಹಾಕಿದ ದುಷ್ಕರ್ಮಿಗಳು, ಒಬ್ಬ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Rain-in-Shimoga-city-today
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
-Monkey-catches-mobile-phone-at-Nanjappa-Hospital
SHIVAMOGGA CITY

ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Professor-Chandrshekar-felicitated-at-Shimoga
COLLEGE NEWSSHIVAMOGGA CITY

ಕುವೆಂಪು ವಿವಿ ನಿವೃತ್ತ ಪ್ರೊಫೆಸರ್‌ ಚಂದ್ರೇಶೇಖರ್‌ ಅಭಿನಂದನಾ ಸಮಾರಂಭ, ಹೇಗಿತ್ತು? ಯಾರೆಲ್ಲ ಏನೆಲ್ಲ ಮಾತನಾಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
VISL-Contract-Workers-union-meets-Pejavara-seer
BHADRAVATHISHIVAMOGGA CITY

VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?