SHIMOGA NEWS, 14 SEPTEMBER 2024 : ಸೆ.17ರಂದು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ನಗರದ ವಿವಿಧೆಡೆ ಅಲಂಕಾರ ಕಾರ್ಯ ನಡೆಯುತ್ತಿದೆ. ಸದ್ಯ ಶಿವಮೊಗ್ಗ ಸಿಟಿ ಕೇಸರಿಮಯವಾಗಿದೆ (Saffron).
ನಗರದ ವಿವಿಧೆಡೆ ಕೇಸರಿ ಧ್ವಜ, ಬಂಟಿಂಗ್ಸ್ ಸೇರಿದಂತೆ ಹಲವು ಅಲಂಕಾರ ಮಾಡಲಾಗುತ್ತಿದೆ. ಹಿಂದೂ ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಕಾರ್ಯ ನಡೆಯುತ್ತಿದೆ.
![]() |
ವಿವಿಧೆಡೆ ಕೇಸರಿ ಧ್ವಜ, ಬಂಟಿಂಗ್ಸ್
ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿ ಕೇಸರಿ ಧ್ವಜ, ಬಂಟಿಂಗ್ಸ್ಗಳನ್ನು ಕಟ್ಟಲಾಗಿದೆ. ಸಹ್ಯಾದ್ರಿ ಕಲೇಜು ಮುಂಭಾಗದಿಂದಲೆ ಅಲಂಕಾರ ಮಾಡಲಾಗಿದೆ. ಎಂ.ಆರ್.ಎಸ್ ಸರ್ಕಲ್ ಕೇಸರಿಮಯವಾಗಿದೆ. ಇನ್ನು, ನೆಹರು ರಸ್ತೆಯಲ್ಲಿ ಅಲಂಕಾರ ಕಾರ್ಯ ಪ್ರಗತಿಯಲ್ಲಿದೆ. ಧ್ವಜ, ಬಂಟಿಂಗ್ಸ್ಗಳ ಜೊತೆಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ದುರ್ಗಿಗುಡಿ ರಸ್ತೆಯೂ ಕೇಸರಿಮಯವಾಗುತ್ತಿದೆ.
ಕಣ್ಸೆಳೆಯುತ್ತಿದೆ ಗಾಂಧಿ ಬಜಾರ್
ಇನ್ನೊಂದೆಡೆ ಗಾಂಧಿ ಬಜಾರ್ ರಸ್ತೆಯಲ್ಲಿಯು ಅಲಂಕಾರ ಮಾಡಲಾಗಿದೆ. ರಸ್ತೆಯು ಉದ್ದಕ್ಕು ಕೇಸರಿ ಬಂಟಿಂಗ್ಸ್ ಕಟ್ಟಲಾಗಿದೆ. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಬೃಹತ್ ಪ್ರವೇಶ ದ್ವಾರ ನಿರ್ಮಿಸಲಾಗುತ್ತಿದೆ. ಈ ಬಾರಿ ಮಥುರಾ ದೇವಸ್ಥಾನದ ಮಾದರಿಯನ್ನು ನಿರ್ಮಿಸಲಾಗಿದೆ. ಜೀವನ್ ಕಲಾ ಸನ್ನಿಧಿಯಲ್ಲಿ ಕಲಾವಿದ ಜೀವನ್ ಮತ್ತು ಅವರ ತಂಡ ಮಹಾದ್ವಾರ ನಿರ್ಮಿಸಿದ್ದು, ಅವಳವಡಿಕೆ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ » 70 ವರ್ಷದ ವೃದ್ಧನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200