SHIVAMOGGA LIVE NEWS | 21 OCTOBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ದಸರಾ ಮಹೋತ್ಸವಕ್ಕೆ ಸಕ್ರೆಬೈಲು ಬಿಡಾರದಿಂದ ಮೂರು ಆನೆಗಳು (Elephants) ನಗರಕ್ಕೆ ಆಗಮಿಸಿವೆ. ಮಹಾನಗರ ಪಾಲಿಕೆ ವತಿಯಿಂದ ಆನೆಗಳಿಗೆ ಪೂಜೆ ಸಲ್ಲಿಸಿ ಸ್ವಾಗತಿಸಲಾಯಿತು.
ಅಂಬಾರಿ ಹೊರಲಿರುವ ಸಾಗರ್ ಆನೆ, ಕುಮ್ಕಿ ಆನೆಗಳಾದ ನೇತ್ರಾವತಿ ಮತ್ತು ಹೇಮಾವತಿ ನಗರಕ್ಕೆ ಆಗಮಿಸಿವೆ. ಶುಕ್ರವಾರ ಸಂಜೆ ಮಹಾನಗರ ಪಾಲಿಕೆ ಸದಸ್ಯರು ಆನೆಗಳಿಗೆ ಪೂಜೆ ಸಲ್ಲಿಸಿ, ಸ್ವಾಗತಿಸಿದರು. ಕೋಟೆ ರಸ್ತೆಯಲ್ಲಿರುವ ವಾಸವಿ ಶಾಲೆಯಲ್ಲಿ ಆನೆಗಳು ಉಳಿಯಲು ವ್ಯವಸ್ಥೆ ಮಾಡಲಾಗಿದೆ. ಇನ್ನು, ಆನೆಗಳು ಬಂದಿರುವ ವಿಚಾರ ತಿಳಿದು ಜನ ವಾಸವಿ ಶಾಲೆಯತ್ತ ಧಾವಿಸುತ್ತಿದ್ದಾರೆ. ಆನೆಗಳ ಫೋಟೊ ಕ್ಲಿಕ್ಕಿಸಿ ಸಂಭ್ರಮಿಸುತ್ತಿದ್ದಾರೆ.
ತಾಲೀಮು ಆರಂಭಿಸಿದ ಆನೆಗಳು
ನಗರಕ್ಕೆ ಆಗಮಿಸುತ್ತಿದ್ದಂತೆ ಆನೆಗಳು ತಾಲೀಮು ಆರಂಭಿಸಿವೆ. ಕೋಟೆ ರಸ್ತೆಯಿಂದ ದಸರಾ ಮೆರವಣಿಗೆ ಸಾಗುವ ಮಾರ್ಗದಲ್ಲಿ ಆನೆಗಳನ್ನು ಇಂದು ಬೆಳಗ್ಗೆ ಕರೆದೊಯ್ಯಲಾಯಿತು. ನಗರದ ವಾಹನ ದಟ್ಟಣೆ, ಕಟ್ಟಡಗಳು ಮತ್ತು ಇಲ್ಲಿಯ ಪರಿಸರಕ್ಕೆ ಆನೆಗಳು ಹೊಂದಿಕೊಳ್ಳಬೇಕಿದೆ. ಈ ಹಿನ್ನೆಲೆ ತಾಲೀಮು ಪ್ರಮುಖವಾಗುತ್ತದೆ. ಸಕ್ರೆಬೈಲು ಬಿಡಾರದ ಸಿಬ್ಬಂದಿಗಳು ತಾಲೀಮಿನಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಸಕ್ರೆಬೈಲು ಆನೆ ಬಿಡಾರ, ಮಾವುತ, ಕಾವಾಡಿಗಳ ಜೊತೆ ವೈಲ್ಡ್ ಟಸ್ಕರ್ ದಸರಾ ಸಂಭ್ರಮ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






