| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MAY 2021
ಶಿವಮೊಗ್ಗ ನಗರದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಕೇರ್ ಯೋಜನೆಯಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ 35 ವಾರ್ಡ್ಗಳಿಗೂ ಸ್ಯಾನಿಟೈಸರ್ ಸಿಂಪಡಣೆಗೆ ಚಾಲನೆ ನೀಡಲಾಯಿತು.
ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕೆ.ಬಿ.ಪ್ರಸನ್ನ ಕುಮಾರ್ ಅವರು ಸ್ಯಾನಿಟೈಸರ್ ಸಿಂಪಡಣೆಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್, ಬರಿ ರಾಜಕೀಯ ಮಾಡಲು ನಮ್ಮ ಪಕ್ಷವಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಕೊರೋನದಿಂದ ಜಾಗೃತಿಯಿಂದಿರಲು ನಗರದ 35 ವಾರ್ಡ್ಗಳಿಗೂ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್ ಕೇರ್ ಯೋಜನೆ ಅಡಿ ನಾಲ್ಕು ವಾಹನದ ಮೂಲಕ ಸ್ಯಾನಿಟೈಸ್ ಮಾಡಲಾಗುತ್ತಿದೆ. ಬಿ.ಹೆಚ್ ರಸ್ತೆಯ ಮಧ್ಯಭಾಗದಿಂದ ಆರಂಭವಾಗುವ ಬಡಾವಣೆಗಳಾದ ಗಾಂಧಿ ಬಜಾರ್, ಎಂಕೆಕೆ ರಸ್ತೆ, ಬೆಕ್ಕಿನ ಕಲ್ಮಠ, ಕೋಟೆ ಮೊದಲಾದ ಬಡಾವಣೆಗಳಲ್ಲಿ ಒಂದು ಕಡೆಗೆ ಸಿಂಪಡಣೆ ಮಾಡಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಕಾರ್ಪೊರೇಟರ್ಗಳಾದ ಯಮುನಾ ರಂಗೇಗೌಡ, ಹೆಚ್.ಸಿ.ಯೋಗೇಶ್ ಸೇರಿದಂತೆ ಹಲವರು ಇದ್ದರು.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()