ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಹೆಸರಿನಲ್ಲಿ ವಿದೇಶಿ ನಂಬರ್ನಲ್ಲಿ (Scammers) ವಾಟ್ಸಪ್ ಖಾತೆ ತೆರೆದು, ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಮೆಸೇಜ್ ಕಳುಹಿಸಲಾಗುತ್ತಿದೆ. ಈ ಸಂಬಂಧ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?
ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಏನಿದೆ?
ನನ್ನ ಹೆಸರು ಮತ್ತು ಭಾವಚಿತ್ರವನ್ನು ಸೈಬರ್ ವಂಚಕರು ಬಳಸಿಕೊಂಡಿದ್ದಾರೆ. ವಿದೇಶಿ ಸಂಖ್ಯೆ +84 56 455 2858 ಹೊಂದಿರುವ ವಾಟ್ಸಾಪ್ ನಂಬರ್ ಮೂಲಕ ಇತ್ತೀಚೆಗೆ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ನಕಲಿ ಸಂದೇಶ ಕಳುಹಿಸುತ್ತಿದ್ದಾರೆ. ಇದರು ನನ್ನ ಗಮನಕ್ಕೆ ಬಂದಿದೆ.

ಈ ಸಂದೇಶಗಳು ಸೈಬರ್ ವಂಚಕರ ಕೃತ್ಯವಾಗಿದೆ. ಆದ್ದರಿಂದ ಸಾರ್ವಜನಿಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ನಕಲಿ ವಾಟ್ಸಾಪ್ ಸಂದೇಶಕ್ಕೆ ಪ್ರತಿಕ್ರಿಯೆ ನೀಡಬಾರದು. ಇಂತಹ ಸಂಖ್ಯೆಯಿಂದ ಹಣದ ಬೇಡಿಕೆ, ತಪ್ಪು ಸಂದೇಶ ಹಾಗೂ ಸಹಾಯ ಕೋರಿ ನಕಲಿ ಸಾಮಾಜಿಕ ಜಾಲತಾಣದ ವೇದಿಕೆಗಳಲ್ಲಿ, ಮೊಬೈಲ್ ವಾಟ್ಸಾಪ್ ಮುಖಾಂತರ ಬಂದಲ್ಲಿ ಅವುಗಳನ್ನು ನಿರ್ಲಕ್ಷಿಸಲು ತಿಳಿಸಿದ್ದಾರೆ. ಅಲ್ಲದೆ ಆ ಸಂಖ್ಯೆಯನ್ನು ಬ್ಲಾಕ್ ಮಾಡಲು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





