ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020
ಟ್ರಾವಲ್ ಹಿಸ್ಟರಿಯೇ ಇಲ್ಲ, ಆದರೂ ಸ್ವಾಮೀಜಿಗೆ ಕಾಣಿಸಿಕೊಂಡಿದೆ ಕರೋನ. ಇದು ಜಿಲ್ಲಾಡಳಿತದ ತಲೆ ನೋವು ಹೆಚ್ಚಿಸಿದೆ.
ಶಿವಮೊಗ್ಗದ ಆಶ್ರಮವೊಂದರ ಸ್ವಾಮೀಜಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೆ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಹಾಗಾಗಿ ಸ್ವಾಮೀಜಿ ಅವರಿಗೆ ಚಿಕಿತ್ಸೆ ಆರಂಭಿಸಲಾಗಿದೆ.
ಟ್ರಾವಲ್ ಹಿಸ್ಟರಿಯೇ ಇಲ್ಲ
ಆಶ್ರಮದ ಸ್ವಾಮೀಜಿ ಅವರಿಗೆ ಟ್ರಾವಲ್ ಹಿಸ್ಟರಿಯೇ ಇಲ್ಲ. ಕರೋನ ಲಾಕ್ ಡೌನ್ ಸಂದರ್ಭದಲ್ಲೂ ಅವರು ಶಿವಮೊಗ್ಗದಲ್ಲಿಯೆ ಇದ್ದರು. ಹಾಗಿದ್ದು ಅವರಿಗೆ ಕರೋನ ಸೋಂಕು ತಗುಲಿದ್ದು ಹೇಗೆ ಅನ್ನುವುದು ಇನ್ನೂ ತಿಳಿದು ಬಂದಿಲ್ಲ.
ಮೂವರು ಪ್ರಾಥಮಿಕ ಸಂಪರ್ಕಕ್ಕೆ
ಸ್ವಾಮೀಜಿ ಅವರಿಗೆ ಕರೋನ ಸೋಂಕು ತಗುಲಿರುವ ಹಿನ್ನೆಲೆ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಗುರುತಿಸಲಾಗಿದೆ. ಆಪ್ತ ಸಹಾಯಕ, ಕೆಲಸದವರೊಬ್ಬರು ಸೇರಿ ಮೂವರನ್ನು ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಾಗಿದ್ದು, ಅವರ ಪರೀಕ್ಷೆ ನಡೆಸಲಾಗಿದೆ.
ಜಿಲ್ಲಾಡಳಿತಕ್ಕೆ ಹೊಸ ತಲೆನೋವು
ಆಶ್ರಮಕ್ಕೆ ಪ್ರತಿದಿನ ಭಕ್ತರು ಬಂದ ಹೋಗುತ್ತಾರೆ. ಯಾರೆಲ್ಲ ಬಂದು ಹೋಗಿದ್ದಾರೆ ಅನ್ನುವ ಪಟ್ಟಿ ಆಶ್ರಮದಲ್ಲಿ ಇಲ್ಲ. ಇದು ಜಿಲ್ಲಾಡಳಿತಕ್ಕೆ ಹೊಸ ತಲೆ ನೋವು ತಂದಿದೆ. ಮತ್ತೊಂದೆಡೆ ಸ್ವಾಮೀಜಿ ಅವರಿಗೆ ಪಾಸಿಟಿವ್ ಬಂದ ಹಿನ್ನೆಲೆ ಆಶ್ರಮದ ಆವರಣವನ್ನು ಸೀಲ್ ಡೌನ್ ಮಾಡಿ, ಸ್ಯಾನಿಟೈಸ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200