‘ಬಿಜೆಪಿಯಿಂದ ರಾಘವೇಂದ್ರಗೆ ಟಿಕೆಟ್‌, ಮತ್ತೆ ಆಯ್ಕೆ ಮಾಡಿ’, ಕಾಂಗ್ರೆಸ್‌ ಹಿರಿಯ ಶಾಸಕ ಬಹಿರಂಗ ಹೇಳಿಕೆ

SHIVAMOGGA LIVE NEWS | 27 JANUARY 2024

SHIMOGA : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್​ ಶಾಸಕ ಶಾಮನೂರು ಶಿವಶಂಕರಪ್ಪ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮತ್ತು ಸಂಚಲನ ಮೂಡಿಸಿದೆ.

ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಆಯೋಜಿಸಿರುವ ಗುರು ಬಸವಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಭಾವೈಕ್ಯತ ಸಮ್ಮೇಳನದಲ್ಲಿ ಭಾಗಿಯಾಗಿ ಶಾಮನೂರು ಶಿವಶಂಕರಪ್ಪ ಮಾತನಾಡಿದರು.

ಶಾಮನೂರು ಹೇಳಿದ್ದೇನು?

‘ಬಿ.ವೈ.ರಾಘವೇಂದ್ರ ಅವರಂತಹ ಸಂಸತ್‌ ಸದಸ್ಯರನ್ನು ಪಡೆದಿರುವ ನೀವೆ ಧನ್ಯರು. ತಮ್ಮ ಕ್ಷೇತ್ರದಲ್ಲಿ ಯಾವೆಲ್ಲ ಕೆಲಸ ಆಗಬೇಕು ಅನ್ನುವುದನ್ನು ನೋಡಿಕೊಂಡು, ಆ ಎಲ್ಲ ಕೆಲಸ ಮಾಡಿದ್ದಾರೆ. ಆಗದಿರುವ ಕೆಲಸವನ್ನೂ ಆಗುವಂತೆ ಮಾಡಿದ್ದಾರೆ. ಅಂತಹ ಒಳ್ಳೆಯ ವ್ಯಕ್ತಿಯನ್ನು ಸಂಸತ್‌ ಸದಸ್ಯರನ್ನಾಗಿ ಆಯ್ಕೆ ಮಾಡಿಕೊಂಡಿದ್ದೀರ. ಇನ್ನೆರಡು ತಿಂಗಳಲ್ಲಿ ಸಂಸತ್‌ ಚುನಾವಣೆ ಬರಲಿದೆ. ರಾಘವೇಂದ್ರ ಅವರನ್ನು ಹೊರತು ಬೇರೆಯವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್‌ ಕೊಡುವುದಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅವರನ್ನು ಮತ್ತೆ ಗೆಲ್ಲಿಸುವಂತಹ ದೊಡ್ಡ ಕರ್ತವ್ಯ ನಿಮ್ಮದಾಗಿದೆ. ಜನರಿಗೆ ಮತ್ತು ಕ್ಷೇತ್ರದಲ್ಲಿ ಕೆಲಸ ಮಾಡುವವರನ್ನು ಆರಿಸುವುದು ಜನರ ಕರ್ತವ್ಯʼ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಅಮೃತಮಯಿ, ವಿವಿಧ ವಿಷಯಗಳ ಸಂವಾದ, ಸಂಜೆ ಅದ್ಧೂರಿ ಅಭಿನಂದನಾ ಸಮಾರಂಭ

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 27, 2024 at 10:02 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 27, 2024

Leave a Comment