‘ಮನೆಯಲ್ಲಿ ಪ್ರಾಣ ಬಿಡಬೇಕು ಅಂದುಕೊಂಡಿದ್ದೆ, ಶಿವಮೊಗ್ಗ ಡಿಸಿ ಆಫೀಸ್ ಮುಂದೆ ಸಾಯಬೇಕಾಗಬಹುದು’

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA | 18 ನವೆಂಬರ್ 2019

‘ನಮ್ಮ ಮನೆಯಲ್ಲಿ ಪ್ರಾಣ ಬಿಡಬೇಕು ಅಂದುಕೊಂಡಿದ್ದೆ. ಆದರೆ ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಸಾಯುಲು ಸಿದ್ಧ..’

ಜಿಲ್ಲಾಧಿಕಾರಿ ಕಚೇರಿ ಮುಂದೆ ಕುಟುಂಬವೊಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ. ಡಿಸಿ ಆಫೀಸ್ ಮುಂದೆಯೇ ಪ್ರಾಣ ಬಿಡಲು ಸಿದ್ಧ ಎಂದು ಪಟ್ಟು ಹಿಡಿದು ಕುಳಿತಿದೆ.

ಪ್ರತಿಭಟನೆಗೆ ಕಾರಣವೇನು?

ಶರಾವತಿ ಮುಳುಗಡೆಯ ಕೆಲವು ಸಂತ್ರಸ್ಥರಿಗೆ ಭದ್ರಾವತಿ ತಾಲೂಕು ಕೆಂಚನಹಳ್ಳಿಯಲ್ಲಿ ಜಮೀನು ನೀಡಲಾಗಿತ್ತು. 1964ರಲ್ಲಿಯೇ ಮೂರು ಎಕರೆ ಜಮೀನಿಗೆ ಸಾಗುವಳಿ ಚೀಟಿ ನೀಡಲಾಗಿದೆ. ಆದರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅರಣ್ಯ ಇಲಾಖೆ ಅವಕಾಶ ನೀಡುತ್ತಿಲ್ಲ. ಇದರ ವಿರುದ್ಧ ತಹಶೀಲ್ದಾರ್ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳನ್ನು ಭೇಟಿ ಮಾಡಿ, ಕ್ರಮಕ್ಕೆ ಆಗ್ರಹಿಸಲಾಗಿದೆ. ಆದರು ಪ್ರಯೋಜನವಾಗಿಲ್ಲ.

ಅನಿರ್ದಿಷ್ಟಾವಧಿ ಮುಷ್ಕರ

ತಮ್ಮ ಬೇಡಿಕೆ ಈಡೇರುವವರೆಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕುಟುಂಬ ನಿರ್ಧರಿಸಿದೆ. ಹೊಸನಗರ ತಾಲೂಕಿನ ಕೊಡಸೆ ಗ್ರಾಮದಲ್ಲಿ ಈ ಕುಟುಂಬದ ಜಮೀನು, ಶರಾವತಿ ಹಿನ್ನೀರಿನಲ್ಲಿ ಮುಳುಗಡೆಯಾಗಿದೆ.

ಪ್ರತಿಭಟನೆಯಲ್ಲಿ ಮಹದೇವಪ್ಪ, ಲಲಿತಮ್ಮ, ಮಹೇಶ್ ಪಾಲ್ಗೊಂಡಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment