ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 SEPTEMBER 2023
SHIMOGA : ಭದ್ರಾ ಜಲಾಶಯದಿಂದ (Bhadra Dam) ನೂರು ದಿನ ನೀರು ಹರಿಸುವ ನಿರ್ಧಾರ ಪುನರ್ ಪರಿಶೀಲಿಸಬೇಕು. ಮಳೆ ಇಲ್ಲದೆ ರೈತರು ಸಂಕಷ್ಟಕ್ಕೀಡಾಗಿದ್ದು ಬರಗಾಲ ಘೋಷಣೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್ ಗೌಡ ಪ್ರತಿಭಟನೆ (Protest) ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದ ಉದ್ಯಮಿಗೆ ಕರ್ನಾಟಕ ಸಾಧಕ ಪ್ರಶಸ್ತಿ
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಶಶಿಕುಮಾರ್ ಗೌಡ, ಭದ್ರಾ ಜಲಾಶಯದಿಂದ 100 ದಿನ ನೀರು ಹರಿಸಲು ನಿರ್ಧರಿಸಲಾಗಿದೆ. ಇದರಿಂದ ಅಚ್ಚುಕಟ್ಟು ಭಾಗದ ರೈತರಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ನಿರ್ಧಾರ ಪುನರ್ ಪರಿಶೀಲಿಸಬೇಕು. ಇನ್ನು, ಮಳೆ ಇಲ್ಲದೆ ಬೆಳೆ ನಷ್ಟವಾಗಿದೆ. ಆದ್ದರಿಂದ ಭತ್ತ ಬೆಳೆದ ರೈತರಿಗೆ ಪ್ರತಿ ಎಕರೆಗೆ 30 ಸಾವಿರ ರೂ., ಮೆಕ್ಕೆಜೋಳಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವೆಂಕಟೇಶ್ ಇದ್ದರು.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















