ಭದ್ರಾ ಜಲಾಶಯದಿಂದ 100 ದಿನ ನೀರು, ಪುನರ್‌ ಪರಿಶೀಲನೆಗೆ ಶಿವಮೊಗ್ಗದಲ್ಲಿ ಹೋರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 SEPTEMBER 2023

SHIMOGA : ಭದ್ರಾ ಜಲಾಶಯದಿಂದ (Bhadra Dam) ನೂರು ದಿನ ನೀರು ಹರಿಸುವ ನಿರ್ಧಾರ ಪುನರ್‌ ಪರಿಶೀಲಿಸಬೇಕು. ಮಳೆ ಇಲ್ಲದೆ ರೈತರು ಸಂಕಷ್ಟಕ್ಕೀಡಾಗಿದ್ದು ಬರಗಾಲ ಘೋಷಣೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್‌ ಗೌಡ ಪ್ರತಿಭಟನೆ (Protest) ನಡೆಸಿದರು.

ಇದನ್ನೂ ಓದಿ – ಶಿವಮೊಗ್ಗದ ಉದ್ಯಮಿಗೆ ಕರ್ನಾಟಕ ಸಾಧಕ ಪ್ರಶಸ್ತಿ

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಶಶಿಕುಮಾರ್‌ ಗೌಡ, ಭದ್ರಾ ಜಲಾಶಯದಿಂದ 100 ದಿನ ನೀರು ಹರಿಸಲು ನಿರ್ಧರಿಸಲಾಗಿದೆ. ಇದರಿಂದ ಅಚ್ಚುಕಟ್ಟು ಭಾಗದ ರೈತರಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ನಿರ್ಧಾರ ಪುನರ್‌ ಪರಿಶೀಲಿಸಬೇಕು. ಇನ್ನು, ಮಳೆ ಇಲ್ಲದೆ ಬೆಳೆ ನಷ್ಟವಾಗಿದೆ. ಆದ್ದರಿಂದ ಭತ್ತ ಬೆಳೆದ ರೈತರಿಗೆ ಪ್ರತಿ ಎಕರೆಗೆ 30 ಸಾವಿರ ರೂ., ಮೆಕ್ಕೆಜೋಳಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವೆಂಕಟೇಶ್‌ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 5, 2023

Leave a Comment