ಶಿವಮೊಗ್ಗ | ‘ನಮ್ಮ ನಡಿಗೆ ಶಾಂತಿಯ ಕಡೆಗೆ (SHATHIGAGI NADIGE)’ ಘೋಷವಾಕ್ಯದೊಂದಿಗೆ ಶಿವಮೊಗ್ಗ ನಗರದಲ್ಲಿ ಸೆ.3ರಂದು ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ಡಾ.ಧನಂಜಯ ಸರ್ಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಧನಂಜಯ ಸರ್ಜಿ (Dr Dhananjaya Sarji) ಅವರು, ಹಲವು ಸಂಘಟನೆಗಳು ಒಗ್ಗೂಡಿ ಈ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ನಡಿಗೆ ಎಲ್ಲಿಂದ? ಎಷ್ಟು ಜನ ಭಾಗಿ?
ಓಪನ್ ಮೈಂಡ್ಸ್ ವರ್ಡ್ಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕಿರಣ್ ಕುಮಾರ್ ಅವರು ಮಾತನಾಡಿ, ಸೆ.3ರಂದು ಬೆಳಗ್ಗೆ 10 ಗಂಟೆಗೆ ನಗರದ ಮೂರು ಕಡೆಯಿಂದ ನಡಿಗೆ (SHATHIGAGI NADIGE) ಆರಂಭವಾಲಿದೆ. ಗೋಪಿ ವೃತ್ತ, ಬಸ್ ನಿಲ್ದಾಣ ಮತ್ತು ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ನಡಿಗೆ ಕಾರ್ಯಕ್ರಮ ನಡೆಯಲಿದೆ. 60ಕ್ಕೂ ಹೆಚ್ಚು ಸಂಘಟನೆಗಳು, ಶೈಕ್ಷಣಿಕ ಸಂಸ್ಥೆಗಳು ಈ ನಡಿಗೆ ಕಾರ್ಯಕ್ರಮಕ್ಕೆ ಬೆಂಬಲವಾಗಿ ನಿಂತಿವೆ. ವಿವಿಧ ಶಾಲೆಗಳ ಹೈಸ್ಕೂಲ್ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 10 ಸಾವಿರ ಮಂದಿ ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸೈನ್ಸ್ ಮೈದಾನದವರೆಗೆ (Science Field) ನಡಿಗೆ ಕಾರ್ಯಕ್ರಮ ನಡೆಯಲಿದೆ. ಮೂರು ಧರ್ಮಗಳ ಧರ್ಮಗುರುಗಳು ಈ ಕಾರ್ಯಕ್ರಮದಲ್ಲಿ ಶಾಂತಿಯ ಸಂದೇಶ ತಿಳಿಸಲಿದ್ದಾರೆ ಎಂದರು.
ಯಾರೆಲ್ಲ ಏನೇನು ಹೇಳಿದರು?
ದೇಶವೊಂದರ ಆರ್ಥಿಕ ನೀತಿಗೆ ತೊಂದರೆ ಉಂಟಾದರೆ ಏನಾಗುತ್ತದೆ ಎಂಬುದಕ್ಕೆ ಶ್ರೀಲಂಕಾದ ಪರಿಸ್ಥಿತಿಯೆ ಉದಾಹರಣೆ. ಪ್ರತಿ ಗಲಭೆಯು ಶಿವಮೊಗ್ಗದ ಬೆಳವಣಿಗೆಯನ್ನು ಎರಡು ವರ್ಷ ಹಿಂದಕ್ಕೆ ತಳ್ಳುತ್ತಿದೆ. ಪ್ರವಾಸೋದ್ಯಮ, ಆರೋಗ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಶಿವಮೊಗ್ಗ ಹೆಸರುವಾಸಿಯಾಗಿದೆ. ಇವೆಲ್ಲ ಕ್ಷೇತ್ರಕ್ಕೂ ಗಲಭೆಯಿಂದ ಪೆಟ್ಟು ಬೀಳಲಿದೆ.ಡಾ.ಧನಂಜಯ ಸರ್ಜಿ, ಮ್ಯಾನೇಜಿಂಗ್ ಟ್ರಸ್ಟಿ, ಸರ್ಜಿ ಫೌಂಡೇಶನ್
10 ಸಾವಿರ ಅಲ್ಲ 10 ಲಕ್ಷ ಜನ ಸೇರಿದರೂ ಒಳ್ಳೆಯದು. ಶಿವಮೊಗ್ಗ ಶಾಂತಿಯುತ ನಗರವಾಗಿ ಉಳಿಯಬೇಕು.ಕೆ.ವಿ.ವಸಂತ ಕುಮಾರ್, ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ
ಶಿವಮೊಗ್ಗದಲ್ಲಿ ಎಲ್ಲರೂ ನೆಮ್ಮದಿಯಿಂದ ಇರಬೇಕು. ಒಂದು ದಿನ ಎಲ್ಲರೂ ಕೆಲಸ ಬಿಟ್ಟು ಶಿವಮೊಗ್ಗದ ಶಾಂತಿಗಾಗಿ ಹೆಜ್ಜೆ ಹಾಕಬೇಕು.ಹೆಚ್.ಆರ್.ಬಸವರಾಜಪ್ಪ, ರಾಜ್ಯಾಧ್ಯಕ್ಷ, ರೈತ ಸಂಘ
ಶಿವಮೊಗ್ಗದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಎಲ್ಲರೂ ಪಣತೊಡೋಣ. ಒಡೆದ ಮನಸುಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತೇವೆ.ಕೆ.ಟಿ.ಗಂಗಾಧರ್, ರೈತ ಮುಖಂಡರು
ಶಿವಮೊಗ್ಗ ಜಿಲ್ಲೆಯು ಸಮಾಜವಾದದಿಂದ ಕೋಮುವಾದದ ಕಡೆಗೆ ಹೆಜ್ಜೆ ಹಾಕುತ್ತಿರುವುದು ದುರದೃಷ್ಟಕರ. ವೈಚಾರಿಕ ಹಿನ್ನೆಲೆಯ ಜಿಲ್ಲೆಗೆ ಕಳಂಕ ಅಂಟಿಕೊಂಡಿದೆ. ಸಹೋದರರಂತೆ ಶಾಂತಿಯ ಸಂದೇಶ ಸಾರೋಣ.ಗುರುಮೂರ್ತಿ, ಡಿಎಸ್ಎಸ್ ರಾಜ್ಯ ಸಂಚಾಲಕ
ಗೋಪಾಲಗೌಡರ ನೆಲೆಬೀಡು, ಸಾಹಿತಿಗಳು ವೈಚಾರಿಕ ಸಂದೇಶ ಸಾರಿದ್ದರು. ಸಹಬಾಳ್ವೆ ಸಹಜೀವನವೆ ಶಿವಮೊಗ್ಗದ ನೆಲದ ಗುಣ. ಅದನ್ನು ಉಳಿಸಿ, ಬೆಳೆಸಬೇಕು.ಕೆ.ಎಲ್.ಅಶೋಕ್, ಜನಶಕ್ತಿ ಸಂಘಟನೆ
ಸಣ್ಣಪುಟ್ಟ ವೈಮನಸಿನಿಂದ ವ್ಯಾಪಾರಿಗಳು, ಉದ್ಯೋಗಿಗಳು, ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದನ್ನು ಸರಿಪಡಿಸಬೇಕು. ಹಿಂದೂ ಮುಸ್ಲಿಂ ಭಾಯಿ ಭಾಯಿ ಅಂತಾ ತೋರಿಸಬೇಕು.ಪರ್ವೇಜ್, ಟಿಪ್ಪು ಸುಲ್ತಾನ್ ಸೇನೆ
ಸರ್ವ ಜನಾಂಗ ಶಾಂತಿಯ ತೋಟ ಎಂಬುದು ಬರೀ ಘೋಷ ವಾಕ್ಯವಾಗಬಾರದು. ನಗರ ಚನ್ನಾಗಿದ್ದರೆ ದೇಶ ಚನ್ನಾಗಿರುತ್ತದೆ. ಮುಂದಿನ ದಿನ ಬ್ರ್ಯಾಂಡ್ ಶಿವಮೊಗ್ಗವನ್ನು ರೂಪಿಸಬೇಕಿದೆ.ಭರತ್, ಮೆಡಿಕಲ್ ಅಸೋಸಿಯೇಷನ್
ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಈ ಪ್ರಶ್ನೆಯನ್ನು ಎಲ್ಲರೂ ಕೇಳಿಕೊಳ್ಳಬೇಕಿದೆ. ನಮ್ಮಿಂದ ಶಾಂತಿ ಶುರುವಾಗಬೇಕಿದೆ.ಫಾದರ್ ರೋಷನ್ ಪಿಂಟೋ, ಕ್ರೈಸ್ತ ಧರ್ಮಗುರು
ಕೋಮು ಭಾವನೆ ಕೆರಳಿಸುವವರು ಹುಟ್ಟಿಕೊಂಡಿದ್ದಾರೆ. ಅವರನ್ನು ಪ್ರೀತಿಯಿಂದ ನಮ್ಮ ಕಡೆಗೆ ಕರೆತರಲು ಈ ನಡಿಗೆ.ಹಾಲೇಶಪ್ಪ, ಡಿಎಸ್ಎಸ್ ಸಂಚಾಲಕ
ದೇಶದ ಭವಿಷ್ಯವನ್ನು ನಿರ್ಧರಿಸುವುದು ಮಕ್ಕಳು. ಹಾಗಾಗಿ ಹೈಸ್ಕೂಲ್ ಮಕ್ಕಳನ್ನು ಮಾತ್ರ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಕ್ಕಳು, ಸ್ವಾಮೀಜಿ, ಫಾದರ್, ಮೌಲ್ವಿಗಳು ಮಾತ್ರ ಶಾಂತಿ ನಡಿಗೆಯಲ್ಲಿ ಇರಲಿದ್ದಾರೆ. 200ಕ್ಕೂ ಹೆಚ್ಚು ಸ್ವಯಂ ಸೇವಕರು, ಮಹಿಳಾ ಸಂಘಟನೆಗಳ ಸ್ವಯಂ ಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿಸಕೊಳ್ಳುತ್ತಿದ್ದಾರೆ.ಕೆ.ಪಿ.ಶ್ರೀಪಾಲ್, ವಕೀಲರು
ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ