ದಾಖಲೆ ನಿರ್ಮಿಸಿದ ಶಿವಮೊಗ್ಗ ವಿಮಾನ ನಿಲ್ದಾಣ, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 10 OCTOBER 2024 : ಕಡಿಮೆ ಅವಧಿಯಲ್ಲಿ ದೊಡ್ಡ ಪ್ರಮಾಣದ ಏರ್‌ ಟ್ರಾಫಿಕ್‌ ಗಳಿಸಿ ಶಿವಮೊಗ್ಗ ವಿಮಾನ ನಿಲ್ದಾಣ (Airport) ದಾಖಲೆ ನಿರ್ಮಿಸಿದೆ. ಪ್ರತಿ ದಿನ ಇಲ್ಲಿಂದ 12 ಟ್ರಿಪ್‌ ವಿಮಾನ ಹಾರಾಟ ನಡೆಯುತ್ತಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿವಿಧ ನಗರಗಳಿಗೆ ವಿಮಾನಗಳು 12 ಟ್ರಿಪ್‌ ಹಾರಾಟ ನಡೆಸುತ್ತಿವೆ. ಎರಡೇ ವರ್ಷದಲ್ಲಿ ಶಿವಮೊಗ್ಗ ನಿಲ್ದಾಣ ಇಷ್ಟೊಂದು ಏರ್‌ ಟ್ರಾಫಿಕ್‌ ಹೊಂದಿದೆ. ಬೀದರ್‌, ಬೆಳಗಾವಿ, ಹುಬ್ಬಳ್ಳಿಯಲ್ಲಿ ಅತ್ಯಂತ ದೀರ್ಘಾವಧಿಯ ಬಳಿಕ ಇಷ್ಟು ಏರ್‌ ಟ್ರಾಫಿಕ್‌ ಸೃಷ್ಟಿಯಾಗಿತ್ತು. ಈ ನಿಟ್ಟಿನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ದಾಖಲೆ ನಿರ್ಮಿಸಿದೆ. ಮಧ್ಯ ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣವಾಗಲಿದೆ ಎಂದರು.

ಶಿವಮೊಗ್ಗದಿಂದ ದೆಹಲಿಗೆ ವಿಮಾನ

ಶಿವಮೊಗ್ಗದಿಂದ ಬೆಂಗಳೂರು, ಗೋವಾ, ತಿರುಪತಿ, ಹೈದರಾಬಾದ್‌, ಚೆನ್ನೈಗೆ ವಿಮಾನಗಳು ಹಾರಾಟ ನಡೆಸುತ್ತಿವೆ. ಮೂರನೆ ಮಾರ್ಗವಾಗಿ ದೆಹಲಿಗೆ ವಿಮಾನ ಹಾರಾಟ ನಡೆಸಲಿದೆ. ಇದಕ್ಕಾಗಿ ಸಿದ್ಧತೆಯಾಗುತ್ತಿದೆ. ದೇಶದ ಎಲ್ಲಾ ರಾಜ್ಯಗಳಿಗು ಶಿವಮೊಗ್ಗದಿಂದ ವಿಮಾನಯಾನ ಸಂಪರ್ಕ ಕಲ್ಪಿಸುವ ಯೋಚನೆ ಇದೆ. ಇದರಿಂದ ವ್ಯಾಪಾರ, ವಹಿವಾಟು ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಅನುಕೂಲ ಆಗಲಿದೆ ಎಂದರು.

MP-BY-raghavendra-about-Shimoga-Airport-Flight

80 ಅಡೆತಡೆಗಳು ನಿವಾರಣೆ

ಶಿವಮೊಗ್ಗ ವಿಮಾನ ನಿಲ್ದಾಣದ ಒಎಲ್‌ಎಸ್‌ ಸರ್ವೆ ನಡೆಸಲಾಗಿದೆ. ವಿಮಾನ ನಿಲ್ದಾಣದ ಹೊರಗೆ 80 ವಿವಿಧ ಅಡೆತಡೆಗಳಿದ್ದವು. ಅವುಗಳನ್ನು ಬಗೆಹರಿಸಲಾಗಿದೆ. ರಾತ್ರಿ ವೇಳೆ ಲ್ಯಾಂಡಿಂಗ್‌ ಕಾರ್ಯದ ಕೆಲಸ ನಡೆಯುತ್ತಿದೆ. ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ (ಕೆಎಸ್‌ಐಐಡಿಸಿ) ಸಂಸ್ಥೆಗೆ ಉತ್ತಮ ಅಧಿಕಾರಿಗಳು ಬಂದಿದ್ದಾರೆ. ಡಿಜಿಸಿಎ ಕೂಡ ಉತ್ತಮವಾಗಿ ಸ್ಪಂದಿಸುತ್ತಿದೆ ಎಂದರು.

ಇದನ್ನೂ ಓದಿ » ಶಿವಮೊಗ್ಗ – ಚೆನ್ನೈ ವಿಮಾನಯಾನ ಶುರು, ಹೇಗಿತ್ತು ಮೊದಲ ದಿನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 10, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment