ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಯಾರ ಜೀವಕ್ಕೂ ಇಲ್ಲ ಗ್ಯಾರಂಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022

ಅವಳಿ ನಗರದ ಅಭಿವೃದ್ಧಿಗೆ ರಾಜಮಾರ್ಗದಂತಿದ್ದ ಶಿವಮೊಗ್ಗ-ಭದ್ರಾವತಿ ರಾಷ್ಟ್ರೀಯ ಹೆದ್ದಾರಿ ದಶಕದಿಂದ ತೇಪೆ ಭಾಗ್ಯಕ್ಕೆ ಸೀಮಿತವಾಗಿದೆ. ಕೊರಕಲು, ಗುಂಡಿಗಳಿಂದ ಕೂಡಿದ್ದು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ವಾಹನ ಚಲಾಯಿಸಬೇಕಿದೆ.

Nanjappa Hospital Covid Care Center

ಬಿ.ಎಸ್.ಯಡಿಯೂರಪ್ಪ ಅವರು ಎರಡನೇ ಬಾರಿ ಸಿಎಂ ಆದ ಅವಧಿಯಲ್ಲಿ ವ್ಯಾಪಾರ, ವಹಿವಾಟು, ಕೈಗಾರಿಕಾ ಟೌನ್‌ಶಿಪ್‌ಗಳಿಗೆ ಹೋಗಿಬರುವವರಿಗೆ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಶಿವಮೊಗ್ಗ-ಭದ್ರಾವತಿ ರಸ್ತೆಯನ್ನು ಚತುಷ್ಪಥಗೊಳಿಸಿ ಅಭಿವೃದ್ಧಿಗೊಳಿಸಿದರು. ಇದರಿಂದ ಶಿವಮೊಗ್ಗ ಭದ್ರಾವತಿ ನಡುವೆ ಅನೇಕ ಕೈಗಾರಿಕೆಗಳು ತಲೆ ಎತ್ತಿದವು. ಪ್ರತಿದಿನ ಸಾವಿರಾರು ಜನರು ವೃತ್ತಿ ನಿಮಿತ್ತ ಈ ರಸ್ತೆಯಲ್ಲೇ ಓಡಾಡುತ್ತಾರೆ.

ಹುಬ್ಬಳಿ, ಕಾರವಾರ, ಗೋವಾ ಹೋಗಬೇಕಾದವರು, ಬೆಂಗಳೂರು, ಮೈಸೂರು ಕಡೆ ಹೋಗಬೇಕಾದವರು ಇದೇ ರಸ್ತೆಯಲ್ಲೆ ಓಡಾಡಬೇಕು. ಪ್ರತಿ ದಿನ ಸಾವಿರಾರು ಜನ, ವಾಹನ ಓಡಾಡುವ ಈ ರಸ್ತೆ ಅಭಿವೃದ್ಧಿ ಕಂಡು ದಶಕ ಕಳೆದಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 10 ವರ್ಷದಿಂದ ತೇಪೆ ಹಾಕಿದ್ದು ಬಿಟ್ಟರೆ ಅಭಿವೃದ್ಧಿ ಮಾಡುವ ಗೋಜಿಗೆ ಹೋಗಿಲ್ಲ.

ಕೇವಲ ತೇಪೆ ತೇಪೆ

ಒಂದು ಕಾಲದಲ್ಲಿ ಶಿವಮೊಗ್ಗ-ಭದ್ರಾವತಿ ನಡುವೆ ಓಡಾಡುವುದು ಶಿಕ್ಷೆಯಂತಿತ್ತು. ಆ ಕಾಲ ಈಗ ಮರುಕಳಿಸಿದೆ. 2010ರ ಸುಮಾರಿಗೆ 16 ಕಿ.ಮೀ ಸಿಂಗಲ್ ರಸ್ತೆಯನ್ನು ಅಭಿವೃದ್ದಿಪಡಿಸಲಾಯಿತು. ಎಂಆರ್‌ಎಸ್ ಸರ್ಕಲ್‌ನಿಂದ ಭದ್ರಾವತಿ ಬೈಪಾಸ್‌ವರೆಗೆ ಚತುಷ್ಪಥ ಮಾಡಲಾಯಿತು. ಅಲ್ಲಿಂದ ಮೂರ್ನಾಲ್ಕು ವರ್ಷ ಸಂಚಾರ ಸರಳವಾಗಿತ್ತು. ವಾಹನಗಳ ಆಯಸ್ಸು ಕೂಡ ವೃದ್ಧಿಯಾಗಿತ್ತು. ನಂತರ ಯಾವುದೇ ರೀತಿಯ ಡಾಂಬರೀಕರಣ ನಡೆದಿಲ್ಲ. ನಾಲ್ಕು ವರ್ಷದಿಂದ ಮಳೆ ಹೆಚ್ಚಾಗಿರುವ ಹಿನ್ನೆಲೆ ರಸ್ತೆ ಗುಂಡಿ ಬಿದ್ದಿದೆ. ಅದಕ್ಕೆ ತೇಪೆ ಹಾಕಿ ಹಾಕಿ ರಸ್ತೆ ನೋಡಿದರೆ ತೇಪೆಗಳೇ ಕಾಣುತ್ತವೆ.

Pot Hole filling at shimoga bhadravathi road

ಬರೀ ಕುಂಟು ನೆಪ

ರಸ್ತೆ ಡಾಂಬರೀಕರಣದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಕೇಳಿದರೆ ‘ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ ಕಾಮಗಾರಿ ಆರಂಭಗೊಂಡಿದ್ದು ಪ್ಯಾಕೇಜ್ 4ರ ಟೆಂಡರ್ ಪಡೆದವರು ಉತ್ತಮ ದರ್ಜೆ ರಸ್ತೆ ಮಾಡಲಿದ್ದಾರೆ. ಅಲ್ಲಿವರೆಗೂ ಕಾಯಬೇಕು’ ಎನ್ನುತ್ತಾರೆ. ಪ್ಯಾಕೇಜ್ 4ರ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಅಲ್ಲಲ್ಲಿ ಕಾನೂನು ತೊಡಕುಗಳು ಇರುವುದರಿಂದ ಅವೆಲ್ಲ ತಕ್ಷಣದಲ್ಲೇ ಬಗೆಹರಿಯುವುದು ಕಷ್ಟ. ಶಿವಮೊಗ್ಗ-ಭದ್ರಾವತಿ ನಡುವೆ ಈಗಿರುವ ಚತುಷ್ಪಥ ರಸ್ತೆಯನ್ನೇ ಅಭಿವೃದ್ಧಿ ಮಾಡಿ ಹೆಚ್ಚುವರಿಯಾಗಿ ಸರ್ವೀಸ್ ರಸ್ತೆ ನಿರ್ಮಾಣವಾಗಲಿದೆ. ಈಗಿರುವ ಚತುಷ್ಪಥ ರಸ್ತೆ ವಿನ್ಯಾಸದಲ್ಲಿ, ಮಾರ್ಗದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಅದ್ಯಾಗೂ ತೇಪೆ ಹಾಕುವುದೇ ಕಾಯಕವಾಗಿದೆ. ಇನ್ನೆಷ್ಟು ವರ್ಷ ವಾಹನ ಸವಾರರು ಕಾಯಬೇಕು ಎಂಬುದು ಸಾರ್ವಜನಿಕರ ಆಕ್ರೋಶ.

ಬೈಕ್ ಸವಾರರಿಗೆ ಸವಾಲು

ಈಗಿರುವ ತೇಪೆ ರಸ್ತೆಯು ಲಾರಿ, ಬಸ್‌ಗಳಿಗಿಂತ ಕಾರು, ಬೈಕ್‌ನವರಿಗೆ ನರಕ ತೋರಿಸುತ್ತಿದೆ. ರಸ್ತೆಯ ಯಾವ ಬದಿ ಹೋದರೂ ತೇಪೆ, ಗುಂಡಿ ಸಿಗುತ್ತದೆ. ನಿಧಾನ ಮಾಡಲು ಹೋದರೆ ಹಿಂದೆಯಿಂದ ಯಮರೂಪಿ ಲಾರಿ, ಬಸ್‌ಗಳು ಮೈಮೇಲೆ ಬರುತ್ತವೆ. ಗುಂಡಿ ತಪ್ಪಿಸಲು ಹೋಗಿ ಮಾಚೇನಹಳ್ಳಿ, ಡೈರಿ ಬಳಿ ಹತ್ತಾರು ಅಪಘಾತಗಳು ಸಂಭವಿಸಿವೆ.

Pot Hole Filling at Bhadravathi Shimoga Road

ಹಂಪ್’ಗಳ ತವರು

ಶಿವಮೊಗ್ಗ-ಭದ್ರಾವತಿ ನಡುವಿನ 16 ಕಿ.ಮೀ ರಸ್ತೆಯಲ್ಲಿ ಎರಡು ಬದಿಯಲ್ಲಿ ತಲಾ 5 ಕಡೆ ಹಂಪ್ ಸಿಗುತ್ತವೆ. ರಸ್ತೆ ಹಾಳಾಗಿದ್ದರೂ ಹಂಪ್’ಗಳು ಭದ್ರವಾಗಿವೆ. ಗುಂಡಿ ತಪ್ಪಿಸಿ ಸುಸ್ತಾದ ರೈಡರ್‌ಗಳಿಗೆ ಹಂಪ್’ಗಳು ಎದುರಾಗುತ್ತವೆ. ಎಲ್ಲ ಹಂಪ್’ಗಳು ಅವೈಜ್ಞಾನಿಕವಾಗಿ ಮಾಡಿರುವುದು ಮತ್ತೊಂದು ಎಡವಟ್ಟು. ಹಂಪ್ ಗಳು ಹೇಗೆ ಇರಬೇಕೆಂದು ಸ್ಪಷ್ಟ ನಿರ್ದೇಶನ ಇಲ್ಲದಿದ್ದರೂ ಬೇಕಾಬಿಟ್ಟಿಯಾಗಿ, ದೀರ್ಘವಾಗಿ ಹಾಕಲಾಗಿದೆ.

ಶಿವಮೊಗ್ಗ-ಭದ್ರಾವತಿ ಹೆದ್ದಾರಿಯನ್ನು ಸಂಪೂರ್ಣವಾಗಿ ರಿಪೇರಿ ಮಾಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಿದೆ.

ಇದನ್ನೂ ಓದಿ | ತುಂಗಾ ನದಿ ಸೇತುವೆ ಮೇಲೆ ಇನ್ನೆಷ್ಟು ಜನರ ಬಲಿಗಾಗಿ ಕಾಯುತ್ತಿದ್ದಾರೆ ಅಧಿಕಾರಿಗಳು? | ದೂರು ದುಮ್ಮಾನ

Shivamogga Live News Reach infographics

About Shivamogga LiveShimoga District Profile | Shivamogga Live Whats App Number 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 8, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment