ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JUNE 2021
ಶಿವಮೊಗ್ಗ ಮತ್ತು ಭದ್ರಾವತಿ ಪ್ರತ್ಯೇಕವಾಗಿ ಲಾಕ್ ಡೌನ್ ಸಡಿಲಿಕೆ ನಿಯಮ ಜಾರಿಗೊಳಿಸಲಾಗಿದೆ. ಉಳಿದಂತೆ ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ಅನ್ ಲಾಕ್ ಒಂದರ ನಿಯಮ ಜಾರಿಯಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಜೊತೆಗೆ ಸಭೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಕೆಲವು ವ್ಯಾಪಾರ ವಾಹಿವಾಟಿಗೆ ಮಧ್ಯಾಹ್ನ 12 ಗಂಟೆವರೆಗೆ, ಇನ್ನೂ ಕೆಲವಕ್ಕೆ ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ನೀಡಿರುವುದಾಗಿ ತಿಳಿಸಿದರು.
ಬಟ್ಟೆ ಮತ್ತು ಚಿನ್ನಾಭರಣ ವ್ಯಾಪಾರದ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಆದ್ದರಿಂದ ಆ ಬಗ್ಗೆ ತಾವು ಚರ್ಚೆ ಮಾಡುವುದಿಲ್ಲ. ಉಳಿದ ಅಗತ್ಯ ವಸ್ತುಗಳ ವ್ಯಾಪಾರ ವಹಿವಾಟಿಗೆ ಈಗ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಅಂಗಡಿಗಳ ಮುಂದೆ ಗುಂಪುಗೂಡುವಂತಿಲ್ಲ
ವ್ಯಾಪಾರ, ವಾಹಿವಾಟುಗಳಿಗೆ ಅವಕಾಶ ನೀಡುತ್ತಿರುವ ಮಳಿಗೆಗಳ ಮುಂದೆ ಜನರು ಗುಂಪುಗೂಡುವಂತಿಲ್ಲ. ಒಂದು ವೇಳೆ ಜನರು ಗುಂಪುಗೂಡಿದರೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.
ಯಾವೆಲ್ಲ ವ್ಯಾಪಾರ ವಹಿವಾಟಿಗೆ ಅವಕಾಶವಿದೆ? ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200