Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಭಯಾನಕವಾಗುತ್ತಿದೆ ಶಿವಮೊಗ್ಗದ ಬೈಪಾಸ್ ರಸ್ತೆ, ಇಲ್ಲಿ ಯಾರ ಪ್ರಾಣಕ್ಕೂ ಗ್ಯಾರಂಟಿ ಇಲ್ಲ

ಭಯಾನಕವಾಗುತ್ತಿದೆ ಶಿವಮೊಗ್ಗದ ಬೈಪಾಸ್ ರಸ್ತೆ, ಇಲ್ಲಿ ಯಾರ ಪ್ರಾಣಕ್ಕೂ ಗ್ಯಾರಂಟಿ ಇಲ್ಲ

31/12/2021 6:44 PM
ನಿತಿನ್‌ ಕೈದೊಟ್ಲು

ಶಿವಮೊಗ್ಗದ ಲೈವ್.ಕಾಂ | SHIMOGA NEWS |  31 ಡಿಸೆಂಬರ್ 2021

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಘಟನೆ 1 – 30 ಡಿಸೆಂಬರ್ 2021

ರಸ್ತೆ ದಾಟುತ್ತಿದ್ದ ಅಬ್ದುಲ್ ರಶೀದ್ (70) ಅವರಿಗೆ KSRTC ಬಸ್ ಡಿಕ್ಕಿ ಹೊಡೆಯಿತು. ತಲೆ ಭಾಗಕ್ಕೆ ಗಂಭೀರ ಹೊಡೆತ ಬಿದ್ದಿತ್ತು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಜನ ರೊಚ್ಚಿಗೆದ್ದು ರಾತ್ರಿಯೇ ಬಸ್ ತಡೆದು ಪ್ರತಿಭಟನೆ ಮಾಡಿದರು.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಘಟನೆ 2 – ಸೆಪ್ಟೆಂಬರ್ 2021

ಬಸ್ ಇಳಿದು ರಸ್ತೆ ದಾಟಿ ನಂಜಪ್ಪ ಲೇಔಟ್’ನಲ್ಲಿರುವ ಮನೆಗೆ ತೆರಳುತ್ತಿದ್ದ ಶಿಕ್ಷಕ ರಾಜೀವ್ ಅವರಿಗೆ ಬೈಕ್ ಡಿಕ್ಕಿಯಾಯಿತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜೀವ್ ಮೃತರಾದರು. ಜೊತೆಗಿದ್ದ ಮಗ ವತ್ಸ (6) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ.

ಹೀಗೆ, ಶಿವಮೊಗ್ಗ ಬೈಪಾಸ್ ರಸ್ತೆ ನಿತ್ಯ ಒಂದಿಲ್ಲೊಂದು ಅಪಘಾತಕ್ಕೆ ಸಾಕ್ಷಿಯಾಗುತ್ತಿದೆ. ಇಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಎಷ್ಟೊ ಮಂದಿ ಅಪಘಾತದ ನೋವಿನಲ್ಲೆ ನರಳುತ್ತಿದ್ದಾರೆ.

ಜನ, ವಾಹನ ದಟ್ಟಣೆ ಹೆಚ್ಚು

ಬೈಪಾಸ್ ರಸ್ತೆಯ ಅಕ್ಕಪಕ್ಕದಲ್ಲಿ ಜ್ಯೋತಿ ನಗರ, ನಂಜಪ್ಪ ಲೇಔಟ್, ಊರುಗಡೂರು, ವಾದಿ-ಎ-ಹುದಾ ಸೇರಿದಂತೆ ವಿವಿಧ ಬಡಾವಣೆಗಳಿವೆ. ಇಲ್ಲಿಯ ನಿವಾಸಿಗಳು ಬೈಪಾಸ್ ರಸ್ತೆಯನ್ನು ಬಳಕೆ ಮಾಡಿಕೊಳ್ಳುತ್ತಾರೆ. ಇನ್ನು, ಅಂತರ ಜಿಲ್ಲೆ KSRTC ಬಸ್ಸುಗಳು, ಲಾರಿಗಳೆಲ್ಲವು ಇದೆ ಮಾರ್ಗವಾಗಿ ನಗರ ಪ್ರವೇಶಿಸುತ್ತವೆ. ಹಾಗಾಗಿ ಬೈಪಾಸ್ ರಸ್ತೆಯಲ್ಲಿ ಜನ ದಟ್ಟಣೆಯು ಹೆಚ್ಚು, ವಾಹನಗಳ ಸಂಖ್ಯೆಯು ಹೆಚ್ಚು. ಈ ಬೈಪಾಸ್ ರಸ್ತೆಗೆ ಪ್ರವೇಶ ಪಡೆಯುತ್ತಿದ್ದಂತೆ, ವಾಹನಗಳ ವೇಗಕ್ಕೆ ಲಗಾಮು ಇಲ್ಲವಾಗುತ್ತದೆ. ಇದೆ ಕಾರಣಕ್ಕೆ ಅಪಘಾತ ಸಂಭವಿಸುತ್ತಿವೆ. ಹಾಗಾಗಿ ಬೈಪಾಸ್ ರಸ್ತೆ ಅಂದರೆ ಆತಂಕ ಪಡುವಂತಾಗಿದೆ.

AVvXsEhquXT tUPuKlalbCdsh819OzvXiufmSiwweEkh wfMkMYlJZROdeGj9z9BQbCsJlOojvJQI1z6sRfZ4V80EFM3Gu8KUVPjikWSIqIiIh1jO1ALX9dvg JwAuNFcrqil9u8resO26 BHAfbLkNOp7W84ej08gNUwoNefZGEdfQpVpfSm3ajEkJT3Fs 4g=s926

ಅಕ್ಕಪಕ್ಕದಲ್ಲಿ ಶಾಲೆ, ಕಾಲೇಜುಗಳಿವೆ

ಎಂ.ಆರ್.ಎಸ್ ಸರ್ಕಲ್ ಮತ್ತು ಎನ್.ಟಿ.ರಸ್ತೆ ಮಧ್ಯೆ ಬೈಪಾಸ್ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ರಸ್ತೆ ಅಕ್ಕಪಕ್ಕದಲ್ಲಿ ಕೆಲವು ಶಾಲೆ, ಕಾಲೇಜುಗಳಿವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಸೇರಿದಂತೆ ಹಲವು ಪ್ರಭಾವಿಗಳ ಆಸ್ತಿ, ಉದ್ಯಮ, ಸಂಸ್ಥೆಗಳು ಇಲ್ಲಿವೆ. ಗ್ಯಾರೇಜುಗಳು, ವಿವಿಧ ಅಂಗಡಿ, ಮಳಿಗೆಗಳು ಕೂಡ ರಸ್ತೆಯ ಅಕ್ಕಪಕ್ಕದಲ್ಲಿವೆ. ಹಾಗಾಗಿ ನಿತ್ಯ ವಿದ್ಯಾರ್ಥಿಗಳು, ಜನ ಸಂಚಾರ ಇರುತ್ತದೆ.

ಏನಂತಾರೆ ಇಲ್ಲಿಯ ಜನ?

‘ದೊಡ್ಡ ದೊಡ್ಡ ವಾಹನಗಳು ಅತಿ ವೇಗವಾಗಿ ಹೋಗುವುದರಿಂದ ರಸ್ತೆಯಲ್ಲಿ ಓಡಾಡುವುದಕ್ಕೆ ಭಯವಾಗುತ್ತದೆ. ತುಂಬಾ ವೇಗವಾಗಿರುವಾಗಲೆ ಓವರ್ ಟೇಟ್ ಮಾಡುತ್ತಾರೆ. ಇಂತಹ ಸಂದರ್ಭ ಸ್ವಲ್ಪ ಯಾಮಾರಿದರೂ ಸಾವು, ನೋವು ಉಂಟಾಗುತ್ತದೆ’ ಅನ್ನುತ್ತಾರೆ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುವ ಇಮ್ತಿಯಾಜ್.

‘ಶಾಲೆ ಮಕ್ಕಳನ್ನು ಕರೆದುಕೊಂಡು ಬಂದಾಗ ಮತ್ತು ಕರೆದೊಯ್ಯುವಾಗ ರಸ್ತೆ ಪಕ್ಕದಲ್ಲೇ ವಾಹನಗಳನ್ನು ನಿಲ್ಲಿಸಲಾಗುತ್ತದೆ. ಆಗ ತುಂಬಾ ಆತಂಕವಾಗುತ್ತದೆ. ಶಾಲಾ ಮಕ್ಕಳನ್ನು ಕಂಡರೂ ದೊಡ್ಡ ದೊಡ್ಡ ವಾಹನಗಳ ವೇಗ ಕಡಿಮೆಯಾಗುವುದಿಲ್ಲ. ಏನಾದರೂ ಹೆಚ್ಚು ಕಡಿಮೆಯಾದರೆ ಅನ್ನುವ ಭಯ ಯಾವಾಗಲೂ ಇರುತ್ತದೆ’ ಅನ್ನುತ್ತಾರೆ ಹೆಸರು ಬಹಿರಂಗಪಡಿಸಲು ಇಚ್ಛಿಸದ ಶಿಕ್ಷಣ ಸಂಸ್ಥೆಯೊಂದರ ಸೆಕ್ಯೂರಿಟಿ.

AVvXsEgyHHFxtrwwNeHd98Xmy9SjWSrhIVCzMxM WmuZNPkp93fyzipNEc5Su g6P H8cE5KRQWSAT aXLZQ5fi34WYMQLsxBgOzPzgDExuNwkDEiBIzZBpJq bshVbgIY5oR0RM4JNVPp9s9 ytRCrlMHDy2JKXNBJ8yMyPNCKULODk ggWIy6e7sZGhz0NyA=s926

ಬೈಪಾಸ್ ರಸ್ತೆಗೆ ಬೆಳಕು ಬೇಕು

ದಿನದ 24 ಗಂಟೆಯೂ ವಾಹನ ಸಂಚಾರ ಇರುವ ಬೈಪಾಸ್ ರಸ್ತೆಯಲ್ಲಿ ಬೆಳಕು ಇಲ್ಲ. ಅಪಘಾತಗಳ ಪ್ರಮಾಣ ಹೆಚ್ಚಲು ಪ್ರಮುಖ ಕಾರಣಗಳ ಪೈಕ ಇದು ಒಂದು. ರಾತ್ರಿ ಸಂದರ್ಭ ಈ ರಸ್ತೆಯಲ್ಲಿ ವಾಹನ ಚಲಾಯಿಸುವುದು ಚಾಲಕರಿಗೆ ಸಾಹಸದ ಕೆಲಸ. ರಸ್ತೆಗೆ ಡಿವೈಡರ್ ಇದೆ. ಆದರೂ ವಿರುದ್ಧ ದಿಕ್ಕಿನಿಂದ ಬರುವ ವಾಹನಗಳ ಲೈಟುಗಳು ವಾಹನ ಚಾಲಕರ ಕಣ್ಣು ಕುಕ್ಕಲಿದೆ. ಒಂದು ವೇಳೆ ಡಿವೈಡರ್ ಮೇಲೆ ಬೀದಿ ದೀಪ ಅಳವಡಿಸಿದರೆ ಈ ಸಮಸ್ಯೆ ಉಂಟಾಗುವುದಿಲ್ಲ. ಆದರೆ ರಸ್ತೆ ನಿರ್ಮಾಣವಾಗಿ ವರ್ಷಗಳೆ ಕಳೆದರೂ ಬೀದಿ ದೀಪ ಅಳವಡಿಸಿಲ್ಲ.

ವೇಗ ನಿಯಂತ್ರಣಕ್ಕಿಲ್ಲ ಕ್ರಮ

ಬೈಪಾಸ್ ರಸ್ತೆಯಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಯಾವುದೆ ಕ್ರಮ ಕೈಗೊಂಡಿಲ್ಲ. ಬಿ.ಹೆಚ್.ರಸ್ತೆಯಲ್ಲಿ ಸಹ್ಯಾದ್ರಿ ಕಾಲೇಜಿನಿಂದ ಹೊಳೆ ಸೇತುವೆವರೆಗೂ ಅಲ್ಲಲ್ಲಿ ವಿಭಿನ್ನ ಮಾದರಿಯ ಸ್ಪೀಡ್ ಬ್ರೇಕರ್ ಹಾಕಲಾಗಿದೆ. ಅದೆ ಮಾದರಿಯ ಸ್ಪೀಡ್ ಬ್ರೇಕರ್’ಗಳನ್ನು ಬೈಪಾಸ್ ರಸ್ತೆಗೂ ಅಳವಡಿಸಿದರೆ ವೇಗ ತಗ್ಗಲಿದೆ ಅನ್ನುವುದು ಜನರ ಅಭಿಪ್ರಾಯ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಬೈಪಾಸ್ ರಸ್ತೆಯಲ್ಲಿ ಊರುಗಡೂರು, ಮತ್ತೂರು ರಸ್ತೆ ಹೋಗುವ ಕಡೆಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಹಾಗಾಗಿ ಇಲ್ಲಿ ವಾಹನಗಳ ವೇಗ ತಗ್ಗುತ್ತದೆ. ಉಳಿದೆಲ್ಲೂ ವೇಗ ನಿಯಂತ್ರಣಕ್ಕೆ ಕ್ರಮವಿಲ್ಲದಿರುವುದರಿಂದ ಅಪಘಾತಗಳು ಹೆಚ್ಚುತ್ತಿವೆ.

ವಾಹನ ದಟ್ಟಣೆ, ಜನ ಸಂಚಾರ ಹೆಚ್ಚಳವಾಗುತ್ತಿದ್ದಂತೆ ಶಿವಮೊಗ್ಗದ ಬೈಪಾಸ್ ರಸ್ತೆಯು, ಜಿಲ್ಲೆಯ ಡೆಡ್ಲಿ ರಸ್ತೆಗಳ ಪಾಲಿಗೆ ಸೇರ್ಪಡೆಯಾಗುತ್ತಿದೆ. ಈಗಲೆ ಅಧಿಕಾರಿಗಳು ಎಚ್ಚೆತ್ತುಕೊಂಡರೆ ಹಲವರ ಪ್ರಾಣ ಉಳಿಯಲಿದೆ.

ABOUT ME NEW FINAL FINAL

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Shivamogga City 1 ಶಿವಮೊಗ್ಗದಲ್ಲೂ ಇವತ್ತು ಹೊಸ ವರ್ಷಾಚರಣೆ ಇರಲ್ಲ, ಪೊಲೀಸ್ ಇಲಾಖೆ ಏನೆಲ್ಲ ಕ್ರಮ ಕೈಗೊಂಡಿದೆ?
Next Article 311221 Malur Government School Students Protest against Forest Department ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಬಂದ್ ಮಾಡಿದ ಮಾಳೂರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು

ಇದನ್ನೂ ಓದಿ

Lokayukta-raid-at-Shimoga-hosanagara-and-shikaripura.
SHIVAMOGGA CITY

BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Former-Minister-MP-Renukacharya-at-Shimoga-DAR-Police-ground
SHIVAMOGGA CITY

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Beluru-Gopalakrishna-Speaks-to-media-about-BJP-Leaders
SHIVAMOGGA CITY

‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?