ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | TRAIN | 17 ಏಪ್ರಿಲ್ 2022
ಶಿವಮೊಗ್ಗ ಟೌನ್ – ಚೆನ್ನೈ ವಿಶೇಷ ರೈಲಿಗೆ ಇವತ್ತು ಹಸಿರು ನಿಶಾನೆ ತೋರಿಸಲಾಯಿತು. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನೂತನ ರೈಲಿಗೆ ಚಾಲನೆ ನೀಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ ಅವರು ವಿಶೇಷ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು.
ಮೊದಲ ದಿನವೆ ಉತ್ತಮ ರೆಸ್ಪಾನ್ಸ್ – TRAIN
ಶಿವಮೊಗ್ಗ ಟೌನ್ – ಚೆನ್ನೈ ರೈಲಿಗೆ ಮೊದಲ ದಿನವೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ರೈಲು ರೇಣಿಗುಂಟ (ತಿರುಪತಿ) ಮೂಲಕ ಚೆನ್ನೈ ತಲುಪಲಿದೆ. ಹಾಗಾಗಿ ತಿರುಪತಿಗೆ ತೆರಳುವ ಭಕ್ತರಿಗು ಅನುಕೂಲವಾಗಿದೆ. ಮೊದಲ ದಿನವೆ ತಿರುಪತಿಗೆ ಹೆಚ್ಚಿನ ಪ್ರಯಾಣಿಕರು ಸಂಚರಿಸಿದ್ದು ವಿಶೇಷವಾಗಿತ್ತು.
ವಾರದಲ್ಲಿ ಎರಡು ಭಾರಿ ಸಂಚಾರ
ಶಿವಮೊಗ್ಗ ಟೌನ್ – ರೇಣಿಗುಂಟ – ಚೆನ್ನೈ ವಿಶೇಷ ರೈಲು ವಾರದಲ್ಲಿ ಎರಡು ದಿನ ಸಂಚರಿಸಲಿದೆ. ಭಾನುವಾರ ಮತ್ತು ಮಂಗಳವಾರ ಶಿವಮೊಗ್ಗದಿಂದ ರೈಲು ಸಂಚರಿಸಲಿದೆ. ಸೋಮವಾರ ಮತ್ತು ಬುಧವಾರ ಚೆನ್ನೈನಿಂದ ಶಿವಮೊಗ್ಗಕ್ಕೆ ಆಗಮಿಸಲಿದೆ.
ಏಪ್ರಿಲ್ 17ರಿಂದ ಜೂನ್ 28ರವರೆಗೆ 22 ಟ್ರಿಪ್ ಈ ರೈಲು ಸಂಚರಿಸಲಿದೆ. ಪ್ರಾಯೋಗಿಕ ಸಂಚಾರಕ್ಕೆ ಉತ್ತಮ ಸ್ಪಂದನೆ ಸಿಕ್ಕರೆ ಈ ರೈಲು ಸೇವೆಯನ್ನು ಮುಂದುವರೆಸುವುದಾಗಿ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾಧಿಕಾರಿ ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ರೈಲ್ವೆ ಇಲಾಖೆ ಮೈಸೂರು ವಿಭಾಗದ ಅಡಿಷನಲ್ ಡಿವಿಷನಲ್ ಮ್ಯಾನೇಜರ್ ದೇವಶಯಂ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಇದ್ದರು.
ಇದನ್ನೂ ಓದಿ | ಶಿವಮೊಗ್ಗ – ಬೆಂಗಳೂರು ರೈಲ್ವೆ ಟೈಮಿಂಗ್ಸ್, ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತೆ?






ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















