ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | TRAIN | 17 ಏಪ್ರಿಲ್ 2022
ಶಿವಮೊಗ್ಗ ಟೌನ್ – ಚೆನ್ನೈ ವಿಶೇಷ ರೈಲಿಗೆ ಇವತ್ತು ಹಸಿರು ನಿಶಾನೆ ತೋರಿಸಲಾಯಿತು. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನೂತನ ರೈಲಿಗೆ ಚಾಲನೆ ನೀಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ ಅವರು ವಿಶೇಷ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು.
ಮೊದಲ ದಿನವೆ ಉತ್ತಮ ರೆಸ್ಪಾನ್ಸ್ – TRAIN
ಶಿವಮೊಗ್ಗ ಟೌನ್ – ಚೆನ್ನೈ ರೈಲಿಗೆ ಮೊದಲ ದಿನವೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ರೈಲು ರೇಣಿಗುಂಟ (ತಿರುಪತಿ) ಮೂಲಕ ಚೆನ್ನೈ ತಲುಪಲಿದೆ. ಹಾಗಾಗಿ ತಿರುಪತಿಗೆ ತೆರಳುವ ಭಕ್ತರಿಗು ಅನುಕೂಲವಾಗಿದೆ. ಮೊದಲ ದಿನವೆ ತಿರುಪತಿಗೆ ಹೆಚ್ಚಿನ ಪ್ರಯಾಣಿಕರು ಸಂಚರಿಸಿದ್ದು ವಿಶೇಷವಾಗಿತ್ತು.
ವಾರದಲ್ಲಿ ಎರಡು ಭಾರಿ ಸಂಚಾರ
ಶಿವಮೊಗ್ಗ ಟೌನ್ – ರೇಣಿಗುಂಟ – ಚೆನ್ನೈ ವಿಶೇಷ ರೈಲು ವಾರದಲ್ಲಿ ಎರಡು ದಿನ ಸಂಚರಿಸಲಿದೆ. ಭಾನುವಾರ ಮತ್ತು ಮಂಗಳವಾರ ಶಿವಮೊಗ್ಗದಿಂದ ರೈಲು ಸಂಚರಿಸಲಿದೆ. ಸೋಮವಾರ ಮತ್ತು ಬುಧವಾರ ಚೆನ್ನೈನಿಂದ ಶಿವಮೊಗ್ಗಕ್ಕೆ ಆಗಮಿಸಲಿದೆ.
ಏಪ್ರಿಲ್ 17ರಿಂದ ಜೂನ್ 28ರವರೆಗೆ 22 ಟ್ರಿಪ್ ಈ ರೈಲು ಸಂಚರಿಸಲಿದೆ. ಪ್ರಾಯೋಗಿಕ ಸಂಚಾರಕ್ಕೆ ಉತ್ತಮ ಸ್ಪಂದನೆ ಸಿಕ್ಕರೆ ಈ ರೈಲು ಸೇವೆಯನ್ನು ಮುಂದುವರೆಸುವುದಾಗಿ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾಧಿಕಾರಿ ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ರೈಲ್ವೆ ಇಲಾಖೆ ಮೈಸೂರು ವಿಭಾಗದ ಅಡಿಷನಲ್ ಡಿವಿಷನಲ್ ಮ್ಯಾನೇಜರ್ ದೇವಶಯಂ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಇದ್ದರು.
ಇದನ್ನೂ ಓದಿ | ಶಿವಮೊಗ್ಗ – ಬೆಂಗಳೂರು ರೈಲ್ವೆ ಟೈಮಿಂಗ್ಸ್, ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತೆ?






ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





