ರೆಡಿಯಾಗ್ತಿದೆ 2041ರ ಶಿವಮೊಗ್ಗಕ್ಕೆ ಮಹಾಯೋಜನೆ, ಏನೆಲ್ಲ ಪ್ಲಾನ್‌ ಇದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: 2041ರ ವೇಳೆಗೆ ಶಿವಮೊಗ್ಗ – ಭದ್ರಾವತಿ ನಗರಗಳ ಜನಸಂಖ್ಯೆ ಗಮನದಲ್ಲಿ ಇಟ್ಟುಕೊಂಡು ನಗರಾಭಿವೃದ್ಧಿ ವ್ಯಾಪ್ತಿಯಲ್ಲಿ ಮಹಾಯೋಜನೆ (Plan) ಸಿದ್ಧಪಡಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸುಡಾ) ಅಧ್ಯಕ್ಷ ಹೆಚ್.ಎಸ್.ಸುಂದರೇಶ್‌ ಹೇಳಿದರು.

ಸೂಡಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್‌, ಶಿವಮೊಗ್ಗ ಜಿಲ್ಲೆ ಹಿಂದೆಂದಿಗಿಂತಲೂ ಹೆಚ್ಚು ವೇಗವಾಗಿ ಅಭಿವೃದ್ಧಿ ಪಥದತ್ತ ದಾಪುಗಾಲಿಡುತ್ತಿದೆ. ಇಂತಹ ಸಂದರ್ಭ ಜಿಲ್ಲಾ ಕೇಂದ್ರವನ್ನು ಜನಸಂಖ್ಯೆ, ವಾಹನ ದಟ್ಟಣೆ ಆಧರಿಸಿ, ಆಸ್ಪತ್ರೆ, ಶಾಲಾ-ಕಾಲೇಜು, ಕೆರೆ-ಕಾಲುವೆ, ಸಂಪರ್ಕ ರಸ್ತೆ, ಉದ್ಯಾನ ಸೇರಿದಂತೆ ಒಟ್ಟಾರೆ ನಗರದ ಸೌಂದರ್ಯ ಗಮನದಲ್ಲಿಟ್ಟುಕೊಂಡು ಕ್ರಿಯಾ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಮಹಾಯೋಜನೆ ಹೇಗಿರಲಿದೆ?

point-1ಮಹಾಯೋಜನೆ ಸಿದ್ಧಪಡಿಸಲು ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಸಂಬಂಧಿತ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಎರಡು ಹಂತದಲ್ಲಿ ಸಭೆ ಆಯೋಜಿಸಿ, ವಿಸ್ತೃತವಾಗಿ ಸಮಾಲೋಚನೆ ನಡೆಸಲಾಗಿದೆ ಎಂದರು.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

point-2ಪ್ರಸ್ತಾಪವಾದ ಕ್ರಿಯಾಯೋಜನೆಯಲ್ಲಿ ನಗರಕ್ಕೆ ಹೊಂದಿಕೊಂಡಂತಿರುವ ಆಯ್ದ 3-4 ಸ್ಥಳಗಳಲ್ಲಿ ಆಸ್ಪತ್ರೆಗಳಿಗಾಗಿ ನಿವೇಶನ ಕಾಯ್ದಿರಿಸಲಾಗಿದೆ. ಕೈಗಾರಿಕಾ ಕ್ಷೇತ್ರದ ವಿಸ್ತರಣೆಗಾಗಿ 100 ಎಕರೆ ಭೂಪ್ರದೇಶ ಕಾಯ್ದಿರಿಸಲೂ ಉದ್ದೇಶಿಸಲಾಗಿದೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

point-3ನಗರದಲ್ಲಿನ ವಾಹನ ದಟ್ಟಣೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವರ್ತುಲ ರಸ್ತೆಗಳ ನಿರ್ಮಾಣ, ಪ್ರವಾಸೋದ್ಯಮ ಕ್ಷೇತ್ರದ ಉನ್ನತಿಗೆ ನೀಲನಕ್ಷೆಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಬಂಡವಾಳ ಹೂಡಿಕೆಗಾಗಿ ಜಿಲ್ಲೆಗೆ ಬರುವವರಿಗೆ ಅನುಕೂಲ ಕಲ್ಪಿಸಲೂ ಕ್ರಮವಹಿಸಲಾಗಿದೆ.

HS-Sundaresh-SUDA-President-Shimoga-Bhadravathi

[su_divider top=”no” style=”dotted” divider_color=”#b8b8b8″ link_color=”#000000″ margin=”10″]

point-4ಭಾರಿ ವಾಹನಗಳ ನಿಲುಗಡೆಗೆ ಅನುಕೂಲವಾಗುವಂತೆ ನಗರದ ಹೊರವಲಯದ ವಿಶಾಲವಾದ ಪ್ರದೇಶದಲ್ಲಿ ವ್ಯವಸ್ಥಿತವಾದ ಟ್ರಕ್‌ ಟರ್ಮಿನಲ್‌ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ನೀಡುವ ಸಲಹೆಗಳನ್ನು ಪ್ರಾಧಿಕಾರ ಮುಕ್ತವಾಗಿ ಸ್ವೀಕರಿಸಲಿದೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

point-5ಪ್ರಸ್ತುತ ₹5 ಕೋಟಿ ಅಂದಾಜು ವೆಚ್ಚದಲ್ಲಿ ಸೂಡಾ ವ್ಯಾಪ್ತಿಯಲ್ಲಿನ ನಾಲ್ಕು ಕೆರೆಗಳನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಲಾಗಿದೆ. ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರದಲ್ಲಿ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

ಆಯುಕ್ತ ವಿಶ್ವನಾಥ ಮುದ್ದಜ್ಜಿ, ನಿರ್ದೇಶಕರಾದ ಸಿದ್ದಪ್ಪ, ಪ್ರವೀಣ್‌ಕುಮಾರ್‌ ಉಪಸ್ಥಿತರಿದ್ದರು.

Plan

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 23, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment