ರೆಡಿಯಾಗ್ತಿದೆ 2041ರ ಶಿವಮೊಗ್ಗಕ್ಕೆ ಮಹಾಯೋಜನೆ, ಏನೆಲ್ಲ ಪ್ಲಾನ್‌ ಇದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: 2041ರ ವೇಳೆಗೆ ಶಿವಮೊಗ್ಗ – ಭದ್ರಾವತಿ ನಗರಗಳ ಜನಸಂಖ್ಯೆ ಗಮನದಲ್ಲಿ ಇಟ್ಟುಕೊಂಡು ನಗರಾಭಿವೃದ್ಧಿ ವ್ಯಾಪ್ತಿಯಲ್ಲಿ ಮಹಾಯೋಜನೆ (Plan) ಸಿದ್ಧಪಡಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸುಡಾ) ಅಧ್ಯಕ್ಷ ಹೆಚ್.ಎಸ್.ಸುಂದರೇಶ್‌ ಹೇಳಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸೂಡಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್‌, ಶಿವಮೊಗ್ಗ ಜಿಲ್ಲೆ ಹಿಂದೆಂದಿಗಿಂತಲೂ ಹೆಚ್ಚು ವೇಗವಾಗಿ ಅಭಿವೃದ್ಧಿ ಪಥದತ್ತ ದಾಪುಗಾಲಿಡುತ್ತಿದೆ. ಇಂತಹ ಸಂದರ್ಭ ಜಿಲ್ಲಾ ಕೇಂದ್ರವನ್ನು ಜನಸಂಖ್ಯೆ, ವಾಹನ ದಟ್ಟಣೆ ಆಧರಿಸಿ, ಆಸ್ಪತ್ರೆ, ಶಾಲಾ-ಕಾಲೇಜು, ಕೆರೆ-ಕಾಲುವೆ, ಸಂಪರ್ಕ ರಸ್ತೆ, ಉದ್ಯಾನ ಸೇರಿದಂತೆ ಒಟ್ಟಾರೆ ನಗರದ ಸೌಂದರ್ಯ ಗಮನದಲ್ಲಿಟ್ಟುಕೊಂಡು ಕ್ರಿಯಾ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಮಹಾಯೋಜನೆ ಹೇಗಿರಲಿದೆ?

point-1ಮಹಾಯೋಜನೆ ಸಿದ್ಧಪಡಿಸಲು ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಸಂಬಂಧಿತ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಎರಡು ಹಂತದಲ್ಲಿ ಸಭೆ ಆಯೋಜಿಸಿ, ವಿಸ್ತೃತವಾಗಿ ಸಮಾಲೋಚನೆ ನಡೆಸಲಾಗಿದೆ ಎಂದರು.

point-2ಪ್ರಸ್ತಾಪವಾದ ಕ್ರಿಯಾಯೋಜನೆಯಲ್ಲಿ ನಗರಕ್ಕೆ ಹೊಂದಿಕೊಂಡಂತಿರುವ ಆಯ್ದ 3-4 ಸ್ಥಳಗಳಲ್ಲಿ ಆಸ್ಪತ್ರೆಗಳಿಗಾಗಿ ನಿವೇಶನ ಕಾಯ್ದಿರಿಸಲಾಗಿದೆ. ಕೈಗಾರಿಕಾ ಕ್ಷೇತ್ರದ ವಿಸ್ತರಣೆಗಾಗಿ 100 ಎಕರೆ ಭೂಪ್ರದೇಶ ಕಾಯ್ದಿರಿಸಲೂ ಉದ್ದೇಶಿಸಲಾಗಿದೆ.

point-3ನಗರದಲ್ಲಿನ ವಾಹನ ದಟ್ಟಣೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವರ್ತುಲ ರಸ್ತೆಗಳ ನಿರ್ಮಾಣ, ಪ್ರವಾಸೋದ್ಯಮ ಕ್ಷೇತ್ರದ ಉನ್ನತಿಗೆ ನೀಲನಕ್ಷೆಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಬಂಡವಾಳ ಹೂಡಿಕೆಗಾಗಿ ಜಿಲ್ಲೆಗೆ ಬರುವವರಿಗೆ ಅನುಕೂಲ ಕಲ್ಪಿಸಲೂ ಕ್ರಮವಹಿಸಲಾಗಿದೆ.

HS-Sundaresh-SUDA-President-Shimoga-Bhadravathi

point-4ಭಾರಿ ವಾಹನಗಳ ನಿಲುಗಡೆಗೆ ಅನುಕೂಲವಾಗುವಂತೆ ನಗರದ ಹೊರವಲಯದ ವಿಶಾಲವಾದ ಪ್ರದೇಶದಲ್ಲಿ ವ್ಯವಸ್ಥಿತವಾದ ಟ್ರಕ್‌ ಟರ್ಮಿನಲ್‌ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ನೀಡುವ ಸಲಹೆಗಳನ್ನು ಪ್ರಾಧಿಕಾರ ಮುಕ್ತವಾಗಿ ಸ್ವೀಕರಿಸಲಿದೆ.

point-5ಪ್ರಸ್ತುತ ₹5 ಕೋಟಿ ಅಂದಾಜು ವೆಚ್ಚದಲ್ಲಿ ಸೂಡಾ ವ್ಯಾಪ್ತಿಯಲ್ಲಿನ ನಾಲ್ಕು ಕೆರೆಗಳನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಲಾಗಿದೆ. ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರದಲ್ಲಿ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು.

ಆಯುಕ್ತ ವಿಶ್ವನಾಥ ಮುದ್ದಜ್ಜಿ, ನಿರ್ದೇಶಕರಾದ ಸಿದ್ದಪ್ಪ, ಪ್ರವೀಣ್‌ಕುಮಾರ್‌ ಉಪಸ್ಥಿತರಿದ್ದರು.

Plan

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment