Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಸಿಟಿಯ ಇವತ್ತಿನ TOP 5 ಸುದ್ದಿಗಳು, ಓದಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಸಿಟಿಯ ಇವತ್ತಿನ TOP 5 ಸುದ್ದಿಗಳು, ಓದಲು ಇಲ್ಲಿ ಕ್ಲಿಕ್‌ ಮಾಡಿ

23/10/2024 7:01 PM
ನಿತಿನ್‌ ಕೈದೊಟ್ಲು

FATAFAT NEWS, 23 OCTOBER 2024

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

10 ದಿನದ ಗಡುವು ನೀಡಿದ ವೇದಿಕೆ

#e6f1e6ಪತ್ರಿಕಾ ಭವನ : ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. 10 ದಿನದ ಒಳಗೆ ಜಲ ಶುದ್ಧೀಕರಣ ಘಟಕದ ಸಮಸ್ಯೆ ಪರಿಹರಿಸಬೇಕು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಡುವು ನೀಡಿದ ನಾಗರಿಕ ಹಿತರಕ್ಷಣ ವೇದಿಕೆ ಪ್ರಧಾನ ಕಾರ್ಯದರ್ಶಿ ಕೆ.ವಿ.ವಸಂತ್‌ ಕುಮಾರ್‌. ಶಾಸಕ ಚನ್ನಬಸಪ್ಪ ಅವರು ತಮ್ಮ ವೇದಿಕೆ ಸದಸ್ಯರ ಪ್ರಮುಖರೊಂದಿಗೆ ಜಂಟಿಯಾಗಿ ಪರೀಶಿಲನೆ ನಡೆಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ » ಗೌರಿ ಹಂತಕರಿಗೆ ಸನ್ಮಾನ, ಶಿವಮೊಗ್ಗದಲ್ಲಿ ಆಕ್ರೋಶ, ಜಾಮೀನು ವಜಾಗೆ ಆಗ್ರಹ

ಅ.26ರಂದು ಬಂಗಾರಪ್ಪ ಜನ್ಮದಿನೋತ್ಸವ

#e6f1e6ಪತ್ರಿಕಾ ಭವನ : ಅ.26ರಂದು ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಜನ್ಮದಿನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮೂವರು ಸಾಧಕರಿಗೆ ಬಂಗಾರ ಪ್ರಶಸ್ತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ನಡೆಸಲಾಗುತ್ತದೆ. ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ಇತರಿಸಲಾಗುತ್ತದೆ. ಅಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣು ಗೋಪಾಲ್‌ ನಾಯಕ್‌ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೊಬೈಲ್‌ ಟವರ್‌ ಕಳ್ಳತನ, ಖಾಲಿ ಜಾಗದಲ್ಲಿದ್ದದ್ದು ದಿಢೀರ್‌ ನಾಪತ್ತೆ

ವಿಶೇಷ ಪೊಲೀಸ್ ಒತ್ತಾಯ, ಪ್ರತಿಭಟನೆ

#e6f1e6ಜಿಲ್ಲಾಧಿಕಾರಿ ಕಚೇರಿ : ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ದಲಿತರ ಮೇಲಿನ ದೌರ್ಜನ್ಯ ತಡೆಗೆ ಜಿಲ್ಲಾ ಮಟ್ಟದಲ್ಲಿ ವಿಶೇಷ ಪೊಲೀಸ್‌ ಠಾಣೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ » ಬ್ಯಾಂಕ್‌ ಮ್ಯಾನೇಜರ್‌ಗೆ ಕರೆ ಮಾಡಿದ ಶಿಕ್ಷಕಿ, 24 ಗಂಟೆ ಬಳಿಕ ಕಾದಿತ್ತು ಶಾಕ್

ಅ.25ರಂದು ಆಚಾರ್ಯತ್ರಯರ ಜಯಂತಿ

#e6f1e6ಪತ್ರಿಕಾ ಭವನ : ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಅ.25ರಂದು ಶ್ರೀ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಆಚಾರ್ಯತ್ರಯರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಸಂಜೆ 6 ಗಂಟೆಗೆ ಉಡುಪಿಯ ಆಸೆಮ್ಸ್‌ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಪ್ರೊ. ಪವನ್‌ ಕಿರಣ್‌ ರೆ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್‌ ಭಾಗವತ್‌ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸರಿಂದ ದಿಢೀರ್‌ ದಾಳಿ, 512 ಕಡೆ ದಂಡ, 5 ಎಫ್‌ಐಆರ್‌ ದಾಖಲು

ಸಚಿವರ ಹೇಳಿಕೆ ಅತಿರೇಖ, ಅಕ್ಷಮ್ಯ

#e6f1e6ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ನೀಡಿರುವ ಹೇಳಿಕೆ ಅಕ್ಷಮ್ಯ ಮತ್ತು ಅತಿರೇಖವಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌.ರುದ್ರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಪತ್ನಿಯ ಸಾವನ್ನು ಟೀಕೆಗೆ ಬಳಸಿಕೊಂಡಿರುವುದು ಮನುಷ್ಯತ್ವ ಇಲ್ಲದ ಅತ್ಯಂತ ಹೀನ ರಾಜಕಾರಣದ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ » ಕದ್ದ ಬ್ಯಾಟರಿ ಜೊತೆಗೆ ತಮ್ಮ ಬೈಕನ್ನೇ ಬಿಟ್ಟು ಪರಾರಿಯಾದ ಕಳ್ಳರು

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article crime name image ಕದ್ದ ಬ್ಯಾಟರಿ ಜೊತೆಗೆ ತಮ್ಮ ಬೈಕನ್ನೇ ಬಿಟ್ಟು ಪರಾರಿಯಾದ ಕಳ್ಳರು
Next Article KSRTC-Bus-General-Image-Shimoga-Bangalore ಬಸ್‌ ಹತ್ತುವಾಗ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆ

ಇದನ್ನೂ ಓದಿ

BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Former-Minister-MP-Renukacharya-at-Shimoga-DAR-Police-ground
SHIVAMOGGA CITY

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Beluru-Gopalakrishna-Speaks-to-media-about-BJP-Leaders
SHIVAMOGGA CITY

‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Beluru-Gopalakrishna-speaks-to-media-in-Shimoga
SHIVAMOGGA CITY

‘ಮಿನಿಸ್ಟರ್‌ ರಾಜೀನಾಮೆ ನೀಡಲಿ, ತನಿಖೆ ಎದುರಿಸಲಿʼ, ಬೇಳೂರು ಗೋಪಾಲಕೃಷ್ಣ ಸಲಹೆ, ಕಾಂಗ್ರೆಸ್‌ನಲ್ಲಿ ಸಂಚಲನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?