Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

28/04/2025 7:45 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಸಿಟಿ ನ್ಯೂಸ್‌ : ಶಿವಮೊಗ್ಗ ನಗರದಲ್ಲಿ (City News) ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಚಕ್ರವರ್ತಿ, ರೇಣುಕಾಚಾರ್ಯ ಭೇಟಿ

FATAFAT - #f1f1f1ವಿಜಯನಗರ: ಪಹಲ್ಗಾಮ್‌ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್‌ ಕುಟುಂಬಕ್ಕೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಮಾಜಿ ಸಚಿವ ರೇಣುಕಾಚಾರ್ಯ ಅವರಿಂದ ಸಾಂತ್ವನ. ರೋಟರಿ ಚಿತಾಗಾರದಲ್ಲಿ ನಾರಾಯಣ ಬಲಿ ಪೂಜೆ ನೆರವೇರಿಸಲಾಯಿತು. ಇನ್ನು, ಮನೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಪಲ್ಲವಿ ಮತ್ತು ಪುತ್ರ ಅಭಿಜಯ್‌ ಅವರಿಂದ ಮಾಹಿತಿ ಪಡೆಯಲು ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

Narayana-Bali-pooje-by-Manjunatha-Rao-family.

ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗಕ್ಕೆ ಯಾವುದೇ ಸಂದರ್ಭ NIA ತಂಡ ಎಂಟ್ರಿ, ಮಂಜುನಾಥ್‌ ಮನೆಗೆ ಗಣ್ಯರ ಭೇಟಿ

ದಸ್ಕತ್‌ ಸಿನಿಮಾ ಕನ್ನಡದಲ್ಲಿ ರಿಲೀಸ್‌

FATAFAT - #f1f1f1ಪತ್ರಿಕಾ ಭವನ: ದಕ್ಷಿಣ ಕನ್ನಡದಲ್ಲಿ 70 ದಿನ ಯಶಸ್ವಿ ಪ್ರದರ್ಶನ ಕಂಡ ದಸ್ಕತ್‌ ಸಿನಿಮಾದ ಕನ್ನಡ ಆವೃತ್ತಿ ಮೇ.9ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ತುಳುವಿನಲ್ಲಿ ಬಿಡುಗಡೆಯಾಗಿದ್ದ ಸಿನಿಮಾ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಲಭಿಸಿದೆ ಎಂದು ನಿರ್ದೇಶಕ ಅನಿಷ್‌ ಪೂಜಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಾಯಕ ದೀಕ್ಷಿತ್‌ ಕೆ.ಅಂಡಿಂಜೆ ಸೇರಿ ಹಲವರು ಇದ್ದರು.

daskat movie

ಇದನ್ನೂ ಓದಿ » ಶಿವಮೊಗ್ಗದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ, ತಕ್ಷಣ ಕ್ರಮಕ್ಕೆ ಒತ್ತಾಯ, ದೂರಿನಲ್ಲಿ ಏನೆಲ್ಲ ಇದೆ?

ನಿಯಮ ಬಾಹಿರ ಕಟ್ಟಡಗಳು, ಕ್ರಮಕ್ಕೆ ಆಗ್ರಹ

FATAFAT - #f1f1f1ಜಿಲ್ಲಾಧಿಕಾರಿ ಕಚೇರಿ: ನಗರದ ವಿವಿಧೆಡೆ ನಿಯಮ ಬಾಹಿರವಾಗಿ ಕಟ್ಟಡಗಳನ್ನು (Building) ನಿರ್ಮಿಸಲಾಗಿದೆ. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಕಾರ್ಮಿಕರ ವಿಭಾಗ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್‌ ಕಾರ್ಮಿಕ ವಿಭಾಗದ ಕಾರ್ಯಾಧ್ಯಕ್ಷ ಎಂ.ಕುಮಾರ್‌, ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಸಲ್ಲಿಸಲಾಯಿತು.

Congress-INTUC-Devendrappa-Memorandum-to-DC.

ಇದನ್ನೂ ಓದಿ » ಅಡಿಕೆ ಧಾರಣೆ | 28 ಏಪ್ರಿಲ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ಹಾರನಹಳ್ಳಿಯಲ್ಲಿ ಡಾ. ಅಂಬೇಡ್ಕರ್‌ ಪ್ರತಿಮೆ

FATAFAT - #f1f1f1ಪತ್ರಿಕಾ ಭವನ: ಹಾರನಹಳ್ಳಿಯ ಅರೇನಾಕೊಪ್ಪದಲ್ಲಿ ಏ.30ರಂದು ಡಾ. ಬಿ.ಆರ್‌.ಅಂಬೇಡ್ಕರ್‌ ಜಯಂತಿ ಆಚರಿಸಲಾಗುತ್ತಿದೆ. ಅಂದು ಡಾ. ಅಂಬೇಡ್ಕರ್‌ ಅವರ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ. ಸಚಿವ ಮಧು ಬಂಗಾರಪ್ಪ, ಶಾಸಕಿ ಶಾರದಾ ಪೂರ್ಯಾನಾಯ್ಕ್‌, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಡಾ. ಅಂಬೇಡ್ಕರ್‌ ಆದಿಜಾಂಬವ ರಾಜ್ಯ ಸಮಿತಿ ಅಧ್ಯಕ್ಷ ಎನ್‌.ಪ್ರಕಾಶ್‌ ತಿಳಿಸಿದರು. ಪ್ರಮುಖರಾದ ದೇವೇಂದ್ರಪ್ಪ, ಡಿ.ಕರಿಬಸಪ್ಪ, ಹಳದಪ್ಪ, ನಂಜಂಡಿ, ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

haranahalli

ಇದನ್ನೂ ಓದಿ » ಮೈಸೂರು – ಶಿವಮೊಗ್ಗ, ಮೈಸೂರು – ತಾಳಗುಪ್ಪ ರೈಲು ಕುರಿತು ಇಲಾಖೆಯಿಂದ ಪ್ರಮುಖ ಅಪ್‌ಡೇಟ್‌, ಏನದು?

ಎಸ್‌ಡಿಎಂಸಿ ಸಮನ್ವಯ ಸಮಿತಿಗೆ ಬೆಳ್ಳಿಹಬ್ಬ

FATAFAT - #f1f1f1ಪತ್ರಿಕಾ ಭವನ: ರಾಜ್ಯ ಶಾಲಾಭಿವೃದ್ಧಿ ಮೇಲುಸ್ತುವಾರಿಗಳ ಸಮನ್ವಯ ವೇದಿಕೆಯ 25ನೇ ವಾರ್ಷಿಕೋತ್ಸವದ ಅಂಗವಾಗಿ ಎಲ್ಲಾ ಶಾಲಾಭಿವೃದ್ಧಿ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಗುತ್ತಿದೆ. ಈ ಸಂದರ್ಭ ರಾಜ್ಯ ಸರ್ಕಾರ ಎಸ್‌ಡಿಎಂಸಿ ಒಕ್ಕೂಟದ ಮನವಿಯನ್ನು ಪುರಸ್ಕರಿಸಬೇಕು ಎಂದು ವೇದಿಕೆಯ ತಾಲೂಕು ಅಧ್ಯಕ್ಷ ಸಂತೋಷ್‌ ತಿಳಿಸಿದರು. ಕಾರ್ಯದರ್ಶಿ ರಮ್ಯಾ, ರುದ್ರೇಶ್‌, ಸತೀಶ್‌, ಚಂದ್ರು, ಜಬೀವುಲ್ಲಾ ಸೇರಿ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.

sdmc members

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನದಿಂದ ಮಳೆ ಅಬ್ಬರ, ವಿವಿಧೆಡೆ ಆಸ್ತಿಪಾಸ್ತಿ ಹಾನಿ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

31 ಸಾಧಕರಿಗೆ ಕಾಯಕರತ್ನ ಪ್ರಶಸ್ತಿ

FATAFAT - #f1f1f1ಪತ್ರಿಕಾ ಭವನ: ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವತಿಯಿಂದ ಬಾಗಲಕೋಟೆಯ ರಬಕವಿಯಲ್ಲಿ ಮೇ.1ರಂದು ರಾಜ್ಯಮಟ್ಟದ ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ರಾಜ್ಯದ 31 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ ಎಂದು ವೈಜ್ಞಾನಿಕ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಡಿ.ರವಿ ಕುಮಾರ್‌ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗದ ಸಿಟಿ ಸೆಂಟರ್‌ ಮಾಲ್‌ ಬಳಿ ಹೋಮ್‌ ಗಾರ್ಡ್‌ ಮೇಲೆ ಹಲ್ಲೆ, ಆಟೋ ಚಾಲಕ ಅರೆಸ್ಟ್‌, ಏನಿದು ಕೇಸ್‌?

ನಿಗದಿತ ವೇಳೆಯೊಳಗೆ ಸಮೀಕ್ಷೆ ಪೂರ್ಣಗೊಳಿಸಿ

FATAFAT - #f1f1f1ಜಿಲ್ಲಾ ಪಂಚಾಯಿತಿ: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತ ಸಮೀಕ್ಷೆಯು ಸರ್ಕಾರದ ಆದ್ಯತೆಯ ಸಮೀಕ್ಷೆಯಾಗಿದೆ. ಸಮೀಕ್ಷೆದಾರರು ಇದನ್ನು ಗಂಭೀರವಾಗಿ ಪರಿಗಣಿಸಿ, ಪ್ರತಿ ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಂಡು ನಿಗದಿತ ವೇಳೆಯೊಳಗೆ ಈ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಅಬ್ದುಲ್‌ ನಜೀರ್‌ಸಾಬ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಿದರು.

ಇದನ್ನೂ ಓದಿ » ಆಯನೂರಿನಲ್ಲಿ ಪತ್ರಿಕೆ ಹಂಚುವ ಹುಡುಗನ ಸಮಯ ಪ್ರಜ್ಞೆಗೆ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ

FATAFAT - #f1f1f1ಕಾಶಿಪುರ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಕಾಶಿಪುರದಲ್ಲಿ ಸ್ವಾತಿ (28) ಎಂಬುವವರು ಸಾವನ್ನಪ್ಪಿದ್ದಾರೆ. ಎರಡು ವರ್ಷದ ಹಿಂದೆ ಪ್ರದೀಪ್‌ ಎಂಬುವವರೊಂದಿಗೆ ಸ್ವಾತಿ ವಿವಾಹವಾಗಿದ್ದರು. ಅವರಿಗೆ ಒಂದು ವರ್ಷದ ಹೆಣ್ಣು ಮಗುವಿದೆ. ಘಟನೆ ಸಂಬಂಧ ವಿನೋಬನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ಅರ್ಧ ದಿನ ಅಂಗಡಿ, ಮುಂಗಟ್ಟು ಬಂದ್‌, ಎಲ್ಲೆಲ್ಲಿ ಹೇಗಿತ್ತು ಸ್ಥಿತಿ?

ಒನ್‌ ಲೈನ್‌ ನ್ಯೂಸ್‌

Point 1 F1F1F1ಶಿವಮೊಗ್ಗ: ರಾಷ್ಟ್ರೀಯ ಅಹಿಂದ ಸೈನಿಕ ಸಂಘಟನೆಯ ರಾಜ್ಯ ಮಹಿಳಾ ಘಟಕದ ಪ್ರಚಾರ ಸಮಿತಿ ಅಧ್ಯಕ್ಷೆಯಾಗಿ ಕವಿತಾ ಎಂ.ಬಿ.ಥೋರತ್‌ ಅವರನ್ನು ನೇಮಿಸಲಾಗಿದೆ.

Point 2 F1F1F1ಶಿವಮೊಗ್ಗ: ಯುಪಿಎಸ್‌ಸಿ ಪರೀಕ್ಷೆಯಲ್ಲಿ 425ನೇ ಸ್ಥಾನ ಪಡೆದಿರುವ ಮೇಘನಾ ಅವರಿಗೆ ಶಿವಮೊಗ್ಗ ನಗರ ಜೆಡಿಎಸ್‌, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಸನ್ಮಾನಿಸಲಾಯಿತು.

Point 3 F1F1F1ಶಿವಮೊಗ್ಗ: ರಾಷ್ಟ್ರೀಯ ಬಸವದಳದ ವತಿಯಿಂದ ಏ.30ರ ಬೆಳಗ್ಗೆ 10ಕ್ಕೆ ಕಲ್ಲಹಳ್ಳಿಯಲ್ಲಿರುವ ಬಸವಮಂಟಪದಲ್ಲಿ ಬಸವಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

Point 4 F1F1F1ಶಿವಮೊಗ್ಗ: ಜೆಸಿಐ ಶಿವಮೊಗ್ಗದ ವತಿಯಿಂದ ತುಂಗಾ ನಗರದ ಕೋರ್ಪಲಯ್ಯ ಛತ್ರ ಮಂಟಪದ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಸಲಾಯಿತು. 30 ಮಂದಿ ಜೆಸಿಐ ಸದಸ್ಯರು, ಪಾಲಿಕೆ ಪೌರ ಕಾರ್ಮಿಕರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Narayana-Bali-pooje-by-Manjunatha-Rao-family. ಕಾಶ್ಮೀರ ದಾಳಿ, ಶಿವಮೊಗ್ಗಕ್ಕೆ ಯಾವುದೇ ಸಂದರ್ಭ NIA ತಂಡ ಎಂಟ್ರಿ, ಮಂಜುನಾಥ್‌ ಮನೆಗೆ ಗಣ್ಯರ ಭೇಟಿ
Next Article India4IAS-toppers-in-UPSC-examination UPSC 2024 ಫಲಿತಾಂಶ: 1000ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಆಯ್ಕೆ, ಕರ್ನಾಟಕದ ವಿದ್ಯಾರ್ಥಿಗಳ ಭರ್ಜರಿ ಸಾಧನೆ

ಇದನ್ನೂ ಓದಿ

government-employees-state-level-sports-at-nehru-stadium
SHIVAMOGGA CITY

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಗೆಲ್ಲುವ ಛಲದೊಂದಿಗೆ ಅಖಾಡಕ್ಕಿಳಿದ ಸರ್ಕಾರಿ ನೌಕರರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
stop-sand-mining-at-kudli-in-shimoga
SHIVAMOGGA CITY

ಕೂಡ್ಲಿಯಲ್ಲಿ ಮರಳು ಗಣಿಗಾರಿಕೆಗೆ ಟೆಂಡರ್‌, ತಕ್ಷಣ ಕೈ ಬಿಡುವಂತೆ ಪಟ್ಟು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
Police-Jeep-With-Light-New.
CRIME DIARYSHIVAMOGGA CITY

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
crime name image
CRIME DIARYSHIVAMOGGA CITY

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
HIVAMOGGA-NEWS- map
SHIVAMOGGA CITY

ಐಟಿಐ ಪಾಸ್‌ ಆದವರಿಗೆ ಹೆಚ್‌ಎಎಲ್‌ನಲ್ಲಿ ಅಪ್ರೆಂಟಿಸ್‌ ತರಬೇತಿ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
SHIMOGA-NEWS-UPDATE
SHIVAMOGGA CITY

ಕಾರ್ಮಿಕರಿಗೆ ತರಬೇತಿ, ಪ್ರಮಾಣ ಪತ್ರ, ಆರ್‌ಪಿಎಲ್ ಕಿಟ್ ವಿತರಣೆ, ಹೆಸರು ನೋಂದಣಿಗೆ ಸೂಚನೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?