Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ಉದ್ಘಾಟನೆ?

ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ಉದ್ಘಾಟನೆ?

03/10/2024 7:38 PM
ನಿತಿನ್‌ ಕೈದೊಟ್ಲು

SHIMOGA NEWS, 3 OCTOBER 2024 : ನಾಡಹಬ್ಬ ದಸರಾಗೆ (Dasara) ಶಿವಮೊಗ್ಗದಲ್ಲಿ ಚಾಲನೆ ಸಿಕ್ಕಿದೆ. ಸಿನಿಮಾ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಅವರು ದಸರಾ ಮಹೋತ್ಸವ ಉದ್ಘಾಟಿಸಿದರು. ಇದಕ್ಕೂ ಮುನ್ನ ನಾಡ ದೇವಿಯ ಅದ್ಧೂರಿ ಮೆರವಣಿಗೆ ನಡೆಯಿತು. ದಸರಾ ಮಹೋತ್ಸದ ಇಂದಿನ ಪ್ರಮುಖ ಹೈಲೈಟ್‌ ಇಲ್ಲಿವೆ.

» ಪಾಲಿಕೆಯಲ್ಲಿ ನಾಡದೇವಿಗೆ ಪೂಜೆ

ಮಹಾನಗರ ಪಾಲಿಕೆ ಆವರಣದಲ್ಲಿ ನಾಡ ದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಯಿತು. ಶಾಸಕ ಎಸ್‌.ಎನ್.ಚನ್ನಬಸಪ್ಪ, ಆಯುಕ್ತೆ ಕವಿತಾ ಯೋಗಪ್ಪನವರ್‌, ಪಾಲಿಕೆ ಮಾಜಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

» ನಾಡ ದೇವಿಯ ಅದ್ಧೂರಿ ಮೆರವಣಿಗೆ

ಪಾಲಿಕೆ ಆವರಣದಿಂದ ಕೋಟೆ ಚಂಡಿಕಾದುರ್ಗಾ ಪರಮೇಶ್ವರಿ ದೇವಸ್ಥಾನದವರಗೆ ನಾಡ ದೇವಿ ಚಾಮುಂಡೇಶ್ವರಿಯ ಮೆರವಣಿಗೆ ನಡೆಯಿತು. ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಈ ಸಂದರ್ಭ ಪಾಲಿಕೆಯ ಅಧಿಕಾರಿಗಳು, ಮಾಜಿ ಸದಸ್ಯರು ವಾದ್ಯಗಳಿಗೆ ನೃತ್ಯ ಮಾಡಿದರು.

Shimoga Dasara 2024

» ನಾಡ ದೇವಿಗೆ ಮಂಗಳಾರತಿ

ಕೋಟೆ ಚಂಡಿಕಾದುರ್ಗಾ ಪರಮೇಶ್ವರಿ ದೇಗುಲದ ಮುಂಭಾಗ ಮೆರವಣಿಗೆ ಪೂರ್ಣಗೊಳ್ಳುತ್ತಿದ್ದಂತೆ ಚಾಮುಂಡೇಶ್ವರಿ ದೇವಿಗೆ ಮಂಗಳಾರತಿ ಬೆಳಗಲಾಯಿತು. ಸಂಸದ ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು ಸೇರಿ ಹಲವರು ಇದ್ದರು.

Shimoga Dasara 2024

» ದೇಗುಲದಲ್ಲಿ ಬೊಂಬೆ ಪೂಜೆ

ದಸರಾ ಅಂಗವಾಗಿ ದೇಗುಲದಲ್ಲಿ ಬೊಂಬೆಗಳನ್ನು ಕೂರಿಸಲಾಗಿದೆ. ಗಣ್ಯರು ಆಗಮಿಸುತ್ತಿದ್ದಂತೆ ಬೊಂಬೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋಟೆ ಚಂಡಿಕಾ ದುರ್ಗಾಪರಮೇಶ್ವರಿಯನ್ನು ಪೂಜಿಸಲಾಯಿತು. ದಸರಾ ಉದ್ಘಾಟಕ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಸೇರಿದ ಹಲವರು ಇದ್ದರು ಈ ಸಂದರ್ಭ ಹಾಜರಿದ್ದರು.

Shimoga Dasara 2024

» ದಸರಾ ಉದ್ಘಾಟಿಸಿದ ಸಿನಿಮಾ ಡೈರೆಕ್ಟರ್‌

ದೇವಸ್ಥಾನದ ಆವರಣದಲ್ಲಿ ಅಂಬಾರಿ ಮತ್ತು ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ದೀಪ ಬೆಳಗಿ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಉದ್ಘಾಟನೆ ನೆರವೇರಿಸಿದರು. ಸಹಚೇತನ ನಾಟ್ಯಾಲಯದ ವಿದ್ಯಾರ್ಥಿಗಳು ದಸರಾ ಗೀತೆಗೆ ನೃತ್ಯ ಮಾಡಿದರು. ಮಹಿಳೆಯರಿಗೆ ಬಾಗಿನ ನೀಡಲಾಯಿತು.

Shimoga Dasara 2024

» ‘ಕೆಟ್ಟದ್ದರ ನಾಶವೇ ಹಬ್ಬದ ಉದ್ದೇಶʼ

Shimoga Dasara 2024 - Sunil Kumar Desaiಉದ್ಘಾಟನೆ ಬಳಿಕ ಮಾತನಾಡಿದ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ, ಹಬ್ಬದ ಆಚರಣೆಗಳ ಹಿಂದೆ ಉತ್ತಮ ಉದ್ದೇಶ ಇದೆ. ದೇಶದ ಒಂದೊಂದು ಭಾಗದಲ್ಲಿ ಒಂದೊಂದು ರೀತಿಯ ಆಚರಣೆ ಇದೆ. ಕೆಟ್ಟದ್ದನ್ನು ನಾಶ ಮಾಡಬೇಕು ಎಂಬುದು ಈ ಆಚರಣೆಗಳ ಉದ್ದೇಶ. ರಾವಣ ಅತ್ಯಂತ ಪ್ರಚಂಡ, ಉತ್ತಮ ಆಡಳಿತಗಾರ, ಶಿವಭಕ್ತ. ಆದರೆ ಆತನಿಗೆ ಅಹಂಕಾರವಿತ್ತು. ಒಂಭತ್ತು ಒಳ್ಳೆಯ ಗುಣವಿದ್ದರೂ ಅಹಂಕಾರ ಇದ್ದರೆ ಪ್ರಯೋಜನವಿಲ್ಲ. ರಾಮನಿಂದ ರಾವಣನ ನಾಶವಾಗುತ್ತದೆ. ರಾವಣನ ದಹನ ಕೆಟ್ಟದ್ದರ ನಾಶದ ಸಂಕೇತವಾಗಿದೆ ಎಂದರು.

» ಯಾರೆಲ್ಲ ಏನೇನು ಹೇಳಿದರು?

ನವರಾತ್ರಿ ಒಂಭತ್ತು ದಿನ ತಾಯಿಯನ್ನು ಶ್ರದ್ಧೆಯಿಂದ ಪೂಜೆ ಮಾಡಬೇಕಿದೆ. ಪ್ರಕೃತಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ರೈತರು ನೆಮ್ಮದಿಯಿಂದ ಇದ್ದರೆ ಎಲ್ಲವು ಸುಭಿಕ್ಷವಾಗಿರುತ್ತದೆ.ಬಿ.ವೈ.ರಾಘವೇಂದ್ರ, ಸಂಸದ

Shimoga Dasara 2024

ಮೈಸೂರು ಹೊರತು ಶಿವಮೊಗ್ಗ ದಸರಾ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಬಾರಿ 68 ವಿವಿಧ ಕಾರ್ಯಕ್ರಮ ನಡೆಯಲಿದೆ. ಈ ಮೊದಲು ದಸರಾ ಉದ್ಘಾಟನೆ ಮಾಡುವ ಪದ್ಧತಿ ಇರಲಿಲ್ಲ. ಮೈಸೂರಿನಲ್ಲಿ ಮಾತ್ರ ಇತ್ತು. ಅದನ್ನೂ ಪ್ರಾರಂಭಿಸಿದೆವು. ಬನ್ನಿ ಮುಡಿಯುವ ಕಾರ್ಯಕ್ರಮ, ಅಂಬಾರಿ ಉತ್ಸವವು ಇಲ್ಲಿ ವೈಭವದಿಂದ ನಡೆಯುತ್ತಿದೆ.ಎಸ್‌.ಎನ್‌.ಚನ್ನಬಸಪ್ಪ, ಶಾಸಕ

Shimoga Dasara 2024

ದೇವರ ಮೇಲೆ ನಂಬಿಕೆ ಇಲ್ಲದಿದ್ದರೆ ಯಾವುದೇ ಸಮಾಜ, ಧರ್ಮದವರಾದರೂ ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲ. ದೇವರು ಎಲ್ಲರಿಗು ಸುಖ, ಸಮೃದ್ಧಿ ನೀಡುತ್ತಾನೆ.ಬಲ್ಕಿಷ್‌ ಬಾನು, ವಿಧಾನ ಪರಿಷತ್‌ ಸದಸ್ಯೆ

Shimoga Dasara 2024

ಮೈಸೂರು, ಮಂಗಳೂರಿನಂತೆ ಶಿವಮೊಗ್ಗ ದಸರಾ ವಿಜೃಂಭಣೆಯಿಂದ ನಡೆಯುತ್ತಿದೆ. ನೆಗೆಟಿವ್ ಎನರ್ಜಿ ತೊಡೆದು, ಪಾಸಿಟಿವ್ ಎನರ್ಜಿ ಪಡೆಯುವುದೆ ಹಬ್ಬದ ಉದ್ದೇಶ.ಹೆಚ್‌.ಎಸ್.ಸುಂದರೇಶ್‌, ಸೂಡಾ ಅಧ್ಯಕ್ಷ

Shimoga Dasara 2024

ಶಿವಮೊಗ್ಗದಲ್ಲಿ ದಸರಾ ಕಾರ್ಯಕ್ರಮಗಳು

ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ದಸರಾದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು. ಕವಿಗೋಷ್ಠಿ, ಪುಟಾಣಿ ಮಕ್ಕಳಿಂದ ನೃತ್ಯ ವೈಭವ. ದಾಕ್ಷಾಯಿಣಿ ರಾಜ್‌ ಕುಮಾರ್‌ ಮತ್ತು ಸಂಗಡಿಗರು, ವಿದ್ಯಾ ಎಸ್‌ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಆಯೋಜಿಸಲಾಗಿತ್ತು.

Shimoga Dasara 2024

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಈವರೆಗಿನ ಟಾಪ್‌ 10 ಸುದ್ದಿಗಳು

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 3 ಅಕ್ಟೋಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
Next Article Rain-in-Shimoga-city-night. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ, ಎಲ್ಲೆಲ್ಲಿ ಆಗ್ತಿದೆ ವರ್ಷಧಾರೆ?

ಇದನ್ನೂ ಓದಿ

Orientation-Day-At-PES-College-Shimoga. Motivational guru.
COLLEGE NEWSSHIVAMOGGA CITY

ಪಿಇಎಸ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಸೀಕ್ರೆಟ್‌ ತಿಳಿಸಿದ ಮೋಟಿವೇಷನ್‌ ಗುರು, ಏನದು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/07/2025
Signal-at-Usha-Nursing-home-circle.
SHIVAMOGGA CITY

ಉಷಾ ನರ್ಸಿಂಗ್‌ ಹೋಮ್‌ ಸರ್ಕಲ್‌ನಲ್ಲಿ ಸಿಗ್ನಲ್‌ ಲೈಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Police-Jeep-in-Shimoga-city
CRIME DIARYSHIVAMOGGA CITY

ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಕೈ ಕೈ ಮಿಲಾಯಿಸದ ಸ್ನೇಹಿತರು, ಬಿಯರ್‌ ಬಾಟಲಿಯಿಂದ ಒಬ್ಬನ ತಲೆಗೆ ಏಟು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Bugilu-book-released-in-Shimoga
SHIVAMOGGA CITY

ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್‌ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Online-Fraud-Case-image
CRIME DIARYSHIVAMOGGA CITY

ಶಿವಮೊಗ್ಗದ ಯುವಕ ₹25 ಲಕ್ಷ ಹಣ ಕಳೆದುಕೊಂಡ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Mukya-Pustaka-barahagarru-press-meet
SHIVAMOGGA CITY

ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?