ಶಿವಮೊಗ್ಗ ದಸರಾ, ಎಲ್ಲರಿಗು ಗೊತ್ತಿರಬೇಕಾದ 5 ವಿಷಯಗಳಿವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DASARA NEWS, 12 OCTOBER 2024 : ಶಿವಮೊಗ್ಗ ದಸರಾದಲ್ಲಿ ಇವತ್ತು ಜಂಬೂ ಸವಾರಿ ನಡೆಯಲಿದೆ. ನಾಡದೇವಿ ಚಾಮುಂಡೇಶ್ವರಿಯ ವಿಗ್ರಹ ಇರುವ ಬೆಳ್ಳಿ ಮಂಟಪವನ್ನು ಹೊತ್ತು ಸಾಗರ ಆನೆ ಹೆಜ್ಜೆ ಹಾಕಲಿದೆ. ಅದ್ಧೂರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಶಿವಮೊಗ್ಗ ಸೇರಿದಂತೆ ಹೊರ ಊರುಗಳಿಂದ ಜನ ಸೇರಲಿದ್ದಾರೆ.

ಮೈಸೂರಿನ ನಂತರ ಶಿವಮೊಗ್ಗ ದಸರಾ ಅತಿ ಹೆಚ್ಚು ವಿಜೃಂಭಣೆಯಿಂದ ನಡೆಯುತ್ತದೆ. ಅಲ್ಲದೆ ನಾಡಿನಾದ್ಯಂತ ಖ್ಯಾತಿ ಗಳಿಸಿದೆ.

ಗೊತ್ತಿರಬೇಕಾದ 5 ಪ್ರಮುಖಾಂಶಗಳು

#f1f1f1 POINT-1-jpg.webp

1980ರ ದಶಕಕ್ಕು ಮೊದಲು ನಾಡಹಬ್ಬ ದಸರಾ ಅಚರಣೆ ಮನೆಗಳು, ದೇವಸ್ಥಾನಗಳಿಗೆ ಸೀಮಿತವಾಗಿತ್ತು. ಮನೆಗಳಲ್ಲಿ ಹಬ್ಬ ಆಚರಿಸಿ, ಪ್ರಮುಖ ದೇಗುಲಗಳಲ್ಲಿ ಅಂಬು ಕಡಿದು ನವರಾತ್ರಿ ಆಚರಣೆ ಮಾಡಲಾಗುತ್ತಿತ್ತು.

Shimoga Dasara

#f1f1f1 POINT-2-jpg.webp

ಪುಟ್ಟಪ್ಪ ಅವರು ಶಿವಮೊಗ್ಗ ನಗರಸಭೆ ಅಧ್ಯಕ್ಷರಾದಾಗ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲಾಗುತ್ತಿತ್ತು. ಆ ಹಣದಲ್ಲಿ ಸಾರ್ವಜನಿಕ ದಸರಾ ಆಚರಣೆ ಮಾಡಲಾಗುತ್ತಿತ್ತು. ಹಿರಿಯ ಪತ್ರಕರ್ತ ನಾಗೇಂದ್ರ ರಾವ್‌ ಅವರು ನಗರಸಭೆ ಅಧ್ಯಕ್ಷರಾದಾಗ ಸೈನ್ಸ್‌ ಮೈದಾನದಿಂದ ಮೆರವಣಿಗೆ ನಡೆಸುವ ಪದ್ಧತಿ ಆರಂಭವಾಯಿತು.

Shimoga Dasara

#f1f1f1 POINT-3-jpg.webp

ಸಿದ್ದರಾಮಣ್ಣ ಅವರು ನಗರಸಭೆ ಅಧ್ಯಕ್ಷರಾಗಿದ್ದ ಸಂದರ್ಭ ಶಿವಪ್ಪನಾಯಕ ಅರಮನೆ ಕೇಂದ್ರಿತವಾಗಿ ಮೂರು ದಿನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ಬಳಿಕ ಶಿವಪ್ಪನಾಯಕ ಅರಮನೆ ಮುಂಭಾಗದಿಂದ ದಸರಾ ಮೆರವಣಿಗೆ ನಡೆಸಲಾಯಿತು. ಈಚೆಗೆ ಹತ್ತು ದಿನದ ದಸರಾ ಆಚರಣೆ ಆರಂಭವಾಯಿತು. ಆನೆಗಳ ಮೇಲೆ ಅಂಬಾರಿ ಹೊರಿಸುವ ಕಾರ್ಯವು ಶುರುವಾಯಿತು.

Shimoga Dasara

#f1f1f1 POINT 4

ಶಿವಮೊಗ್ಗದ ಮಾರ್ನಮಿ ಬೈಲಿನಲ್ಲಿ ಮೊದಲು ವಿಜಯದಶಮಿ ಆಚರಿಸಲಾಗುತ್ತಿತ್ತು. ಆ ಬಳಿಕ ನಗರಸಭೆ ಆವರಣಕ್ಕೆ ಶಿಫ್ಟ್‌ ಆಯಿತು. ಅಲ್ಲಿ ಅಂಬು ಕಡಿಯಲಾಗುತ್ತಿತ್ತು. ಹೆಚ್ಚು ಜನ ಸೇರುವುದರಿಂದ ನೆಹರೂ ಕ್ರೀಡಾಂಗಣಕ್ಕೆ ವರ್ಗಾಯಿಸಲಾಯಿತು. ಸಿಂಥಟಿಕ್‌ ಟ್ರ್ಯಾಕ್‌ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಹಿನ್ನೆಲೆ ನೆಹರೂ ಕ್ರೀಡಾಂಗಣದಿಂದ ಕುವೆಂಪು ರಂಗಮಂದಿರದ ಹಿಂಭಾಗದ ಎನ್‌ಇಎಸ್‌ ಮೈದಾನಕ್ಕೆ ಅಂಬು ಕಡಿಯುವ ಕಾರ್ಯಕ್ರಮ ವರ್ಗವಾಯಿತು. ಈಗ ಫ್ರೀಡಂ ಪಾರ್ಕ್‌ನಲ್ಲಿ (ಅಲ್ಲಮ ಪ್ರಭು ಮೈದಾನ) ಅಂಬು ಕಡಿಯುವ ಕಾರ್ಯಕ್ರಮ ನಡೆಯುತ್ತಿದೆ.

Shimoga Dasara

#f1f1f1 point 5

ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಮೊದಲು ದೇವತೆಗಳಷ್ಟೆ ಭಾಗವಹಿಸುತ್ತಿದ್ದವು. ಆನಂತರ ದೇವಾನುದೇವತೆಗಳು ಭಾಗವಹಿಸುತ್ತಿವೆ. ಈಚೆಗೆ 150ಕ್ಕಿಂತಲೂ ಹೆಚ್ಚು ದೇವಾನುದೇವತೆಗಳು ಮೆರವಣಿಗೆಯಲ್ಲಿ ಭಾಗವಹಿಸುತ್ತಿವೆ.

ಇದನ್ನೂ ಓದಿ » ಶಿವಮೊಗ್ಗ ಜಂಬೂ ಸವಾರಿಗೆ ಕ್ಷಣಗಣನೆ, ಆನೆಗಳು ರೆಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 12, 2024

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

Leave a Comment