ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 JANUARY 2024
SHIMOGA : ಎಲ್ಲ ವಿಷಯಗಳಿಗು ಮೊಬೈಲ್ ಮೇಲೆ ಅವಲಂಬಿತವಾಗಲು ಸಾಧ್ಯವಿಲ್ಲ. ದಿನಕ್ಕೆ ಸ್ವಲ್ಪ ಸಮಯವಾದರು ಪುಸ್ತಕಗಳನ್ನು ಓದಬೇಕು. ಇದನ್ನು ರೂಢಿಸಿಕೊಂಡರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು.
ಸಿಟಿಜನ್ಸ್ ಫೋರಂ, ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಜಿಲ್ಲಾ ಸೊಸೈಟಿ, ಪೀಪಲ್ಸ್ ಲಾಯರ್ಸ್ ಗಿಲ್ಡ್ ಸಹಯೋಗದಲ್ಲಿ ವಕೀಲರ ಭವನದಲ್ಲಿ ಭಾನುವಾರ ಆಯೋಜಿಸಿದ್ದ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅವರ ‘ಕಳೆದ ಕಾಲ, ನಡೆದ ದೂರ’ ಕೃತಿ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾತನಾಡಿದರು.
ಯುವ ಜನತೆ ಉದ್ಯೋಗ ಪಡೆದ ನಂತರ ಓದುವ ಹವ್ಯಾಸ ಮರೆತಿದ್ದಾರೆ. ಜೀವನದ ಯಶಸ್ಸಿಗೆ ಓದು ಬಹಳ ಮುಖ್ಯ. ಆದ್ದರಿಂದ ಓದುವ ಅಭ್ಯಾಸ ರೂಢಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಯಾರೆಲ್ಲ ಏನೇನು ಮಾತನಾಡಿದರು?

ಸಿಟಿಜನ್ ಫೋರಂನ ಅಧ್ಯಕ್ಷ ಕೆ.ಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಟಿ.ಆರ್. ಅಶ್ವಥ ನಾರಾಯಣ ಶೆಟ್ಟಿ, ಎರಡನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಶರಾದ ಬಿ.ಆರ್.ಪಲ್ಲವಿ, ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ, ಎಸ್ಎಂಎಸ್ಎಸ್ಎಸ್ನ ನಿರ್ದೇಶಕ ಫಾದರ್ ಕ್ಲಿಫರ್ಡ್ ರೋಷನ್ ಪಿಂಟೊ ಮತ್ತಿತರರಿದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ, ಹೊಸ ಡಿಸಿ ಯಾರು? ಇಲ್ಲಿದೆ ಅವರ ಕುರಿತ 3 ಪ್ರಮುಖಾಂಶ
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















