SHIVAMOGGA LIVE NEWS | 28 JUNE 2024
SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಚುನಾವಣೆ (election) ಆರಂಭವಾಗಿದೆ. ಬಾಲರಾಜ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ ಆವರಣದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಈಗಾಗಲೆ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಉಳಿದ 12 ನಿರ್ದೇಶಕರ ಆಯ್ಕೆಗೆ ಮತದಾನ ನಡೆಯುತ್ತಿದೆ.
ಮತ ಚಲಾಯಿಸಿದ ಸಂಸದ ರಾಘವೇಂದ್ರ
ಡಿಸಿಸಿ ಬ್ಯಾಂಕ್ ಆವರಣದಲ್ಲಿ ಬೆಳಗ್ಗೆಯಿಂದಲೆ ಮತದಾನ ಪ್ರಕ್ರಿಯೆ ಬಿರುಸಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ತಮ್ಮ ಹಕ್ಕು ಚಲಾಯಿಸಿದರು. ಅಹಿತಕರ ಘಟನೆ ತಡೆಯಲು ಮತಗಟ್ಟೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ – ತೀವ್ರ ಕುತೂಹಲ ಮೂಡಿಸಿದೆ ಡಿಸಿಸಿ ಬ್ಯಾಂಕ್ ಚುನಾವಣೆ, ಕಣದಲ್ಲಿದ್ದಾರೆ 28 ಅಭ್ಯರ್ಥಿಗಳು, ಇಲ್ಲಿದೆ ಲಿಸ್ಟ್
ಇನ್ನು, ಮತದಾನ ಮಾಡಲು ತೆರಳುವವರು ತಮ್ಮ ಮೊಬೈಲ್ ಫೋನ್ಗಳನ್ನು ಮತಗಟ್ಟೆಯೊಳಗೆ ಕೊಂಡೊಯ್ಯುವಂತಿಲ್ಲ. ಆದ್ದರಿಂದ ಡಿಸಿಸಿ ಬ್ಯಾಂಕ್ ಆವರಣದಲ್ಲಿಯೇ ಮೊಬೈಲ್ಗಳನ್ನು ಪಡೆದು, ಅದರ ಮೇಲೆ ಹೆಸರು ಬರೆದಿಡಲಾಗುತ್ತಿದೆ. ಮತ ಚಲಾಯಿಸಿ ಬಂದ ಮೇಲೆ ಮೊಬೈಲ್ ಹಿಂತಿರುಗಿಸಲಾಗುತ್ತಿದೆ.
ಸಂಜೆಯೇ ಫಲಿತಾಂಶ ಪ್ರಕಟ
12 ನಿರ್ದೇಶಕರ ಆಯ್ಕೆಗೆ ಮತದಾನ ಆರಂಭವಾಗಿದೆ. ಒಟ್ಟು 27 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿ ಹಲವರು ಕಣದಲ್ಲಿದ್ದಾರೆ. ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸಂಜೆ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ – ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಜೋಗ, ಮೈದುಂಬಿದ ರಾಜ, ರಾಣಿ, ರೋರರ್, ರಾಕೆಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200