SHIVAMOGGA LIVE NEWS | 02 OCTOBER 2023
SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ (Prohibitory) ಜಾರಿಗೊಳಿಸಲಾಗಿದೆ. ಈ ಮಧ್ಯೆ ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧಿ ಬಜಾರ್ನಲ್ಲಿ (Gandhi Bazaar) ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗಿದೆ.
ಗಾಂಧಿ ಬಜಾರ್ನಲ್ಲಿ (Gandhi Bazaar) ಎಂದಿನಂತೆ ಬೆಳಗ್ಗೆಯಿಂದ ವ್ಯಾಪಾರ, ವಹಿವಾಟು ಆರಂಭವಾಗಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು. ಪೊಲೀಸ್ ವಾಹನಗಳಲ್ಲಿ ಮೈಕ್ ಮೂಲಕ ಅಂಗಡಿ ಬಂದ್ ಮಾಡುವಂತೆ ಅನೌನ್ಸ್ ಮಾಡಲಾಗುತ್ತಿದೆ.
ಇದನ್ನೂ ಓದಿ- BREAKING NEWS – ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿ, ಏನಿರುತ್ತೆ? ಏನಿರಲ್ಲ?
ಇನ್ನು ನೆಹರೂ ರಸ್ತೆಯಲ್ಲು ಅಂಗಡಿ ಮುಂಗಟ್ಟು ಬಂದ್ ಆಗಿವೆ. ಕೆಲವೆ ಅಂಗಡಿಗಳ ಬಾಗಿಲು ತೆಗೆಯಲಾಗಿದೆ. ಉಳಿದಂತೆ ದುರ್ಗಿಗುಡಿ, ಕುವೆಂಪು ರಸ್ತೆ, ಜೈಲ್ ರಸ್ತೆ ಸೇರಿದಂತೆ ಉಳಿದೆಡೆ ವ್ಯಾಪಾರ ವಹಿವಾಟು ಸಹಜ ಸ್ಥಿತಿಯಲ್ಲಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200