ಶಿವಮೊಗ್ಗದಲ್ಲಿ ಹಾಫ್ ಡೇ ಲಾಕ್ ಡೌನ್, ಮೊದಲ ದಿನ ಯಾವ್ಯಾವ ಏರಿಯಾದಲ್ಲಿ ಹೇಗಿದೆ ಪರಿಸ್ಥಿತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020

ಹಾಫ್‍ ಡೇ ಲಾಕ್‍ ಡೌನ್‍ಗೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾಹನ ಮತ್ತು ಜನ ಸಂಚಾರ ಕಡಿಮೆಯಾದರೂ, ಸಂಪೂರ್ಣ ತಗ್ಗಿರಲಿಲ್ಲ.

ಎಲ್ಲೆಲ್ಲಿ ಹೇಗೆತ್ತು ವಾತಾವರಣ?

ಅಶೋಕ ಸರ್ಕಲ್ | ವಾಹನ ಸಂಚಾರ ತಗ್ಗಿತ್ತು. ಬಿ.ಹೆಚ್.ರಸ್ತೆ ಕಡೆಯಿಂದ ವಾಹನಗಳ ಸಂಚಾರ ನಿಯಂತ್ರಿಸಲು ಬ್ಯಾರಿಕೇಡ್ ಹಾಕಲಾಗಿತ್ತು. ಆದರೂ ವಾಹನಗಳು ಸಂಚರಿಸುತ್ತಿದ್ದವು. ಕೆಎಸ್‍ಆರ್‍ಟಿಸಿ ಬಸ್‍ಗಳ ಸಂಚಾರವಿತ್ತು.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಬಿ.ಹೆಚ್.ರಸ್ತೆ | ಅಶೋಕ ಸರ್ಕಲ್ ಮತ್ತು ಅಮೀರ್ ಅಹಮದ್ ಸರ್ಕಲ್‍ನಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಇದರಿಂದ ವಾಹನ ಸಂಚಾರ ಕಡಿಮೆಯಿತ್ತು. ಆದರೆ ಸವರ್‍ಲೈನ್‍ ರಸ್ತೆಯ ಕಡೆಯಿಂದ ವಾಹನಗಳು ಬರುತ್ತಿದ್ದವು.

109894730 1167647086930043 2981244181466154998 n.jpg? nc cat=101& nc sid=110474& nc ohc=t1AYsLOka0AAX9A9C6 & nc ht=scontent.fblr11 1

ಅಮೀರ್‍ ಅಹಮದ್ ಸರ್ಕಲ್ | ಸರ್ಕಲ್‍ನಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಇದರಿಂದ ಇಲ್ಲಿ ವಾಹನ ಸಂಚಾರ ಕಡಿಮೆಯಾಗಿತ್ತು. ಮತ್ತೊಂದೆಡೆ ಗಾಂಧಿ ಬಜಾರ್ ಸಂಪೂರ್ಣ ಬಂದ್ ಆಗಿದ್ದರಿಂದ ಜನರ ಸಂಚಾರವಿರಲಿಲ್ಲ.

ನೆಹರೂ ರಸ್ತೆ, ಗೋಪಿ ಸರ್ಕಲ್ | ನೆಹರೂ ರೋಡ್‍ನಲ್ಲಿ ವಾಹನಗಳು ವಿರಳವಾಗಿದ್ದವು. ಗೋಪಿ ಸರ್ಕಲ್‍ನಿಂದ ಈ ನೆಹರೂ ರೋಡ್‍ಗೆ ಬರುವ ಎರಡು ಮಾರ್ಗದಲ್ಲೂ ಬ್ಯಾರಿಕೇಡ್ ಹಾಕಲಾಗಿತ್ತು. ಉಳಿದಂತೆ ದುರ್ಗಿಗುಡಿ, ಬಾಲರಾಜ್ ಅರಸ್ ರಸ್ತೆ ಕಡೆಯಿಂದ ಗೋಪಿ ಸರ್ಕಲ್‍ಗೆ ವಾಹನಗಳು ಬರುತ್ತಿದ್ದವು.

ದುರ್ಗಿಗುಡಿ, ಜೈಲ್ ರೋಡ್ | ಇವೆರಡು ರಸ್ತೆಯಲ್ಲಿ ಬಹುತೇಕ ಅಂಗಡಿಗಳ ಬಾಗಿಲು ಬಂದ್ ಮಾಡಲಾಗಿತ್ತು. ಆದರೆ ವಾಹನ ಸಂಚಾರ ಮಾತ್ರ ತಗ್ಗಿರಲಿಲ್ಲ. ಜೈಲ್ ಸರ್ಕಲ್‍ನಲ್ಲೂ ವಾಹನಗಳು ಓಡಾಡುತ್ತಿದ್ದವು. ದಾವಣಗೆರೆ, ಹೊನ್ನಾಳಿ ಕಡೆಗೆ ಹೋಗುವ ಕೆಎಸ್‍ಆರ್‍ಟಿಸಿ ಬಸ್‍ಗಳು ಕುವೆಂಪು ರಸ್ತೆ ಮೂಲಕ ಇದೇ ಸರ್ಕಲ್‍ ಹಾದು ಹೋಗುತ್ತಿದ್ದವು.

ನೂರು ಅಡಿ ರಸ್ತೆ | ಈ ರಸ್ತೆಯ ಎರಡು ಬದಿಯಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಆದರೆ ವಾಹನಗಳು, ಜನ ಸಂಚಾರವಿತ್ತು. ವಿವಿಧ ಕಾಮಗಾರಿಯ ಕೆಲಸಗಳು ನಡೆಯುತ್ತಿದ್ದು. ಈ ರಸ್ತೆಯಲ್ಲಿರುವ ಪೆಟ್ರೊಲ್ ಬಂಕ್ ಸೇವೆಯು ಇತ್ತು.

ವಿನೋಬನಗರ | ಅಂಗಡಿಗಳು ಬಂದ್. ಹಲವು ರಸ್ತೆಗಳಲ್ಲಿ ಜನ ಮತ್ತು ವಾಹನ ಸಂಚಾರವಿರಲಿಲ್ಲ.

https://www.facebook.com/liveshivamogga/videos/2338952009747245/?t=0

ಸವಳಂಗ ರಸ್ತೆ | ರಸ್ತೆಯಲ್ಲಿ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಹಾಕಿದ್ದರು. ಆದರೂ ವಾಹನ ಸಂಚಾರವಿತ್ತು.

ಏನೆಲ್ಲ ಇತ್ತು? ಏನಿರಲಿಲ್ಲ?

ಶಿವಮೊಗ್ಗ ನಗರದಾದ್ಯಂತ ಎಟಿಎಂ ಕೇಂದ್ರ, ಆಸ್ಪತ್ರೆ, ಮೆಡಿಕಲ್ ಶಾಪ್‍ಗಳ ಬಾಗಿಲು ತೆಗೆಯಲಾಗಿತ್ತು. ಉಳಿದೆಲ್ಲ ಅಂಗಡಿಗಳು ಬಂದ್ ಆಗಿವೆ.

https://www.facebook.com/liveshivamogga/videos/314006596450123/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment