BREAKING NEWS – ಶಿವಮೊಗ್ಗದಲ್ಲಿ ನಡೆಯಬೇಕಿದ್ದ ಮೊದಲ ಕಂಬಳ ರದ್ದು, ಯಾಕೆ? ಮುಂದೆ ನಡೆಯುತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಮಲೆನಾಡಿನಲ್ಲಿ ನಿಗದಿಯಾಗಿದ್ದ ಮೊದಲ ಕಂಬಳ ರದ್ದಾಗಿದೆ. ಪ್ರಾಣಿ ದಯ ಸಂಘಟನೆ ಕೋರ್ಟ್‌ ಮೊರೆ ಹೋಗಿರುವ ಹಿನ್ನೆಲೆ ಶಿವಮೊಗ್ಗ ಕಂಬಳ (Kambala) ರದ್ದುಗೊಳಿಸಲಾಗಿದೆ. ಕೋರ್ಟ್‌ ತೀರ್ಪಿನ ನಂತರ ತೀರ್ಮಾನ ಕೈಗೊಳ್ಳಲು ಕಂಬಳ ಸಮಿತಿ ನಿರ್ಧರಿಸಿದೆ.

ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಏಪ್ರಿಲ್‌ 19 ಮತ್ತು 20ರಂದು ಕಂಬಳ ನಡೆಸಲು ನಿರ್ಧರಿಸಲಾಗಿತ್ತು.

ಮೂಡುಬಿದಿರೆ ಮೀಟಿಂಗ್‌ನಲ್ಲಿ ನಿರ್ಧಾರ

ಕಳೆದ ಬುಧವಾರ ಮೂಡುಬಿದಿರೆಯ ಸೃಷ್ಟಿ ಗಾರ್ಡನ್‌ನಲ್ಲಿ ಕಂಬಳ (Kambala) ಸಮಿತಿ ಸಭೆ ನಡೆಯಿತು. ಇಲ್ಲಿ ಶಿವಮೊಗ್ಗ ಕಂಬಳ ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು. ಏ.19ರಂದು ಶಿವಮೊಗ್ಗ ಬದಲು ಬೈಂದೂರಿನಲ್ಲಿ ಕಂಬಳ ನಡೆಸುವ ತೀರ್ಮಾನ ಪ್ರಕಟಿಸಲಾಯಿತು. ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ, ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಸೇರಿ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

Kambala-to-be-organized-in-Shimoga.

ಶಿವಮೊಗ್ಗ ಕಂಬಳ ರದ್ದಾಗಿದ್ದೇಕೆ?

ಇದೇ ಮೊದಲ ಬಾರಿ ಶಿವಮೊಗ್ಗ ಜಿಲ್ಲೆಯಲ್ಲಿ ಕಂಬಳ ನಡೆಸಲು ನಿರ್ಧರಿಸಲಾಗಿತ್ತು. ಮಾಚೇನಹಳ್ಳಿಯ 16 ಎಕರೆ ವಿಸ್ತೀರ್ಣದಲ್ಲಿ ಕಂಬಳದ ಟ್ರ್ಯಾಕ್‌ ನಿರ್ಮಿಸಲು ಯೋಜಿಸಲಾಗಿತ್ತು. ಇದಕ್ಕಾಗಿ ಗುದ್ದಲಿ ಪೂಜೆ ನಡೆಸಲಾಗಿತ್ತು. ಸುಮಾರು 100 ಜೋಡಿ ಚಾಂಪಿಯನ್‌ ಕೋಣಗಳು ಭಾಗವಹಿಸಲಿದ್ದವು. 10 ಲಕ್ಷ ಜನ ಸೇರುವ ನಿರೀಕ್ಷೆ ಇತ್ತು.

Web-Design

ಇದನ್ನೂ ಓದಿ » ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ಯಾವ್ಯಾವ ಹಾಲಿನ ದರ ಎಷ್ಟು ಹೆಚ್ಚಾಗುತ್ತೆ? ಇಲ್ಲಿದೆ ಶಿಮುಲ್‌ ಪ್ರಕಟಿಸಿದ ಪಟ್ಟಿ

ಶಿವಮೊಗ್ಗ ಕಂಬಳದ (Kambala) ಟ್ರ್ಯಾಕ್‌ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಜಿಲ್ಲಾ ಕಂಬಳ ಸಮಿತಿಗೆ ನ್ಯಾಯಾಲಯದಿಂದ ನೊಟೀಸ್‌ ಜಾರಿಯಾಗಿತ್ತು. ಸದ್ಯ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ತೀರ್ಪು ಪ್ರಕಟವಾಗುವ ಸದ್ಯತೆ ಇದೆ. ಹಾಗಾಗಿ ಶಿವಮೊಗ್ಗ ಕಂಬಳವನ್ನು ರದ್ದುಗೊಳಿಸಲಾಗಿದೆ.

FATAFAT-INTERVIEW.webp

ಸಮಿತಿ ಕಾರ್ಯದರ್ಶಿ ಲೋಕೇಶ್‌ ಶೆಟ್ಟಿ ಹೇಳಿದ್ದೇನು?

ಇನ್ನು, ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಕಂಬಳ ಸಮಿತಿ ಕಾರ್ಯದರ್ಶಿ ಮುಚ್ಚೂರು ಕಲ್ಕುಡೆ ಲೋಕೇಶ್‌ ಶೆಟ್ಟಿ, ಪ್ರಮುಖ ಸಂಗತಿಗಳನ್ನು ತಿಳಿಸಿದರು. ಲೋಕೇಶ್‌ ಶೆಟ್ಟಿ ತಿಳಿಸಿದ ಪ್ರಮುಖ ಪಾಯಿಂಟ್‌ ಇಲ್ಲಿವೆ.

Kambala Committee Secretary Lokesh Shetty

ಪೇಟಾ ಕೋರ್ಟ್‌ ಮೊರೆ ಹೋಗಿದ್ದೇಕೆ? : ಕಂಬಳ, ಕರಾವಳಿಯ ಜಾನಪದ ಕ್ರೀಡೆ. ಬೆಂಗಳೂರಿನಲ್ಲಿ ಕಂಬಳ ನಡೆಸುವುದನ್ನು ವಿರೋಧಿಸಿ ಪ್ರಾಣಿ ದಯಾ ಸಂಘ ಪೇಟಾ ಹೈಕೋರ್ಟ್‌ ಮೊರೆ ಹೋಗಿದೆ. ನೂರಾರು ಕಿ.ಮೀ ದೂರಕ್ಕೆ ಕೋಣಗಳನ್ನು ಕರೆದೊಯ್ಯುವುದು ಸರಿಯಲ್ಲ ಎಂಬುದು ಪೇಟಾದ ಆಕ್ಷೇಪ. ಆದರೆ ಅಷ್ಟು ದೂರಕ್ಕೆ ಕೋಣಗಳನ್ನು ಕರೆದೊಯ್ಯುವಾಗ ಯಜಮಾನರು, ಕಂಬಳ ಸಮಿತಿ ಮುತುವರ್ಜಿ ವಹಿಸುತ್ತದೆ. ಎ.ಸಿ.ಯಲ್ಲಿಯೇ ಕೋಣಗಳನ್ನು ಇರಿಸಿ ಅವುಗಳನ್ನು ಕಾಪಾಡಲಾಗುತ್ತದೆ. ಇದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದೇವೆ. ಸದ್ಯ ವಿಚಾರಣೆ ನಡೆಯುತ್ತಿದ್ದು ತೀರ್ಪು ಬಾಕಿ ಇದೆ ಎಂದು ಲೋಕೇಶ್‌ ಶೆಟ್ಟಿ ತಿಳಿಸಿದರು.  

ಶಿವಮೊಗ್ಗ ಕಂಬಳ ರದ್ದು ಮಾಡಿದ್ದೇಕೆ? : ಕಂಬಳ ಹೆಚ್ಚು ಜನರಿಗೆ ತಲುಪಬೇಕು ಎಂಬ ಉದ್ದೇಶದಿಂದ ಬೆಂಗಳೂರು, ಶಿವಮೊಗ್ಗದಲ್ಲಿ ಕಂಬಳ ನಡೆಸಲು ಯೋಜಿಸಲಾಗಿತ್ತು. ಆದರೆ ಶಿವಮೊಗ್ಗ ಕಂಬಳಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ನ್ಯಾಯಾಲಯದಿಂದ ಸಮಿತಿಗೆ ನೊಟೀಸ್‌ ಜಾರಿಯಾಗಿದೆ. ವಿಚಾರಣೆ ನಡೆದು ಏ.15ರಂದು ತೀರ್ಪು ಪ್ರಕಟವಾಗುವ ಸಾದ್ಯತೆ ಇದೆ. ತೀರ್ಪು ಪ್ರಕಟವಾಗುವ ಮೊದಲೆ ಶಿವಮೊಗ್ಗದಲ್ಲಿ ಸಿದ್ಧತೆ ಮಾಡಿಕೊಳ್ಳುವುದು ಸರಿಯಲ್ಲ. ಆದ್ದರಿಂದ ಶಿವಮೊಗ್ಗ ಕಂಬಳ ರದ್ದುಗೊಳಿಸಲಾಗಿದೆ ಎಂದರು.

ಮುಂದೆ ಶಿವಮೊಗ್ಗ ಕಂಬಳ ನಡೆಯುತ್ತಾ? : ಶಿವಮೊಗ್ಗದಲ್ಲಿ ಕಂಬಳ ನಡೆಸುವ ನಿರ್ಧಾರ ಪ್ರಕಟಿಸಿದಾಗ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೈಕೋರ್ಟ್‌ ತೀರ್ಪಿನ ಆಧಾರದಲ್ಲಿ ಮುಂದಿನ ನಿರ್ಧಾರ ಪ್ರಕಟಿಸಲಾಗುತ್ತದೆ. ಒಂದು ವೇಳೆ ತೀರ್ಪು ನಮ್ಮ ಪರವಾಗಿದ್ದರೆ, ಮುಂದಿನ ಸಾಲಿನಲ್ಲಿ ಮೊದಲ ಕಂಬಳವನ್ನು ಶಿವಮೊಗ್ಗದಲ್ಲಿಯೇ ನಡೆಸುವ ಕುರಿತು ಯೋಜಿಸುತ್ತೇವೆ ಎಂದು ಲೋಕೇಶ್‌ ಶೆಟ್ಟಿ ತಿಳಿಸಿದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2025

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

Leave a Comment