ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ರೈತರು, ಯೋಧರ ಬದುಕಿಗೆ ಅಡ್ಡಿ ಆತಂಕಗಳು ಉಂಟಾದರೆ ಎದೆ ಕೊಟ್ಟು ನಿಲ್ಲಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದು ಶಿವಮೊಗ್ಗ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ವಿಜಯದೇವಿ ತಿಳಿಸಿದರು.
ಗೋಪಿಶೆಟ್ಟಿಕೊಪ್ಪ ಬಡಾವಣೆಯ ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಸಾಹಿತ್ಯ ಭವನದಲ್ಲಿ ಆಯೋಜಿಸಿರುವ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೆಲವನ್ನು ಕಾಯುವ ಯೋಧ, ಅನ್ನ ನೀಡುವ ರೈತರ ಸಂರಕ್ಷಣೆ, ಸುರಕ್ಷತೆಯ ಹೊಣೆ ಸರ್ಕಾರ ಮತ್ತು ನಮ್ಮೆಲ್ಲರದ್ದಾಗಿದೆ. ಅವರ ಬದುಕಿಗೆ ಅಡ್ಡಿ ಉಂಟಾದರೆ ಎಲ್ಲರು ಅವರೊಂದಿಗೆ ನಿಲ್ಲಬೇಕಿದೆ ಎಂದರು.
ಸಮಗ್ರ ಸಾಂಸ್ಕೃತಿಕ ಇತಿಹಾಸ ಪುನರ್ ರೂಪಿಸಿ
ಶಿವಮೊಗ್ಗ ಜಿಲ್ಲೆಯ ಸಮಗ್ರ ಸಾಂಸ್ಕೃತಿಕ ಇತಿಹಾಸವನ್ನು ಪುನರ್ ರೂಪಿಸುವ ಕೆಲಸವಾಗಬೇಕಿದೆ. ಜಿಲ್ಲೆಯ ಏಳು ತಾಲೂಕುಗಳಲ್ಲಿ ಶಾಸನಗಳ ಅಧ್ಯಯನ ಆಗಬೇಕಿದೆ. ಕುವೆಂಪು ವಿಶ್ವವಿದ್ಯಾಲಯದ ಸಹಕಾರದೊಂದಿಗೆ ರಾಜ್ಯ ಸರ್ಕಾರ ಸಮಗ್ರ ಸಾಂಸ್ಕೃತಿಕ ಇತಿಹಾಸ ರಚಿಸಬೇಕಿದೆ ಎಂದು ಸರ್ವಾಧ್ಯಕ್ಷೆ ಡಾ.ವಿಜಯಾದೇವಿ ತಿಳಿಸಿದರು.
ನಿಕಟಪೂರ್ವ ಸಮ್ಮೇಳನ ಅಧ್ಯಕ್ಷೆ ವಿಜಯಾ ಶ್ರೀಧರ್, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ವಿಪಕ್ಷ ನಾಯಕ ಯೋಗೇಶ್, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ, ಎಂ.ಎನ್.ಸುಂದರ್ ರಾಜ್, ರುದ್ರಮುನಿ ಸಜ್ಜನ್, ಜಿ.ಪಿ.ಸಂಪತ್, ಎಸ್.ಪಿ.ದಿನೇಶ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಇದಕ್ಕೂ ಮೊದಲು ಗೋಪಾಳ ವೃತ್ತದಿಂದ ಸಭಾ ಭವನದವರೆಗೆ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ವಿಜಯಾದೇವಿ ಅವರ ಮೆರವಣಿಗೆ ನಡೆಸಲಾಯಿತು.





ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






