SHIVAMOGGA LIVE NEWS | 16 JULY 2024
SHIMOGA : ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿ ಮೈದುಂಬಿಕೊಂಡಿದೆ. ನಗರದ ಕೋರ್ಪಲಯ್ಯ ಛತ್ರ ಮಂಟಪ (MANTAPA) ಸಂಪೂರ್ಣ ಮುಳುಗಿದೆ.
ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಮಂಟಪ ಮುಳುಗಿದೆ. ವಿಚಾರ ತಿಳಿದು ಮಂಟಪ ಮುಳುಗಿರುವುದನ್ನು ಕಣ್ತುಂಬಿಕೊಳ್ಳಲು ಜನರು ಹೊಳೆ ಬದಿಗೆ ಬರುತ್ತಿದ್ದಾರೆ. ಹಳೆ ಸೇತುವೆ ಮೇಲೆ ನಿಂತು ಮಂಟಪ ಮುಳುಗಿರುವ ಫೋಟೊ, ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.
ಈ ಮೊದಲು ತುಂಗಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ವರೆಗೆ ನೀರು ಹೊರ ಬಿಟ್ಟಾಗ ಮಾತ್ರ ಮಂಟಪ ಮುಳುಗುತ್ತಿತ್ತು. ಈಗ ತಡೆಗೋಡೆ ನಿರ್ಮಾಣವಾದ ಹಿನ್ನೆಲೆ 61 ಕ್ಯೂಸೆಕ್ ನೀರು ಹೊರ ಬಿಟ್ಟಾಗಲೆ ಮಂಟಪ ಮುಳುಗಿದೆ.
ಇದನ್ನೂ ಓದಿ ⇓
ಭದ್ರಾ ಜಲಾಶಯದ ಒಳ ಹರಿವು ಭಾರಿ ಹೆಚ್ಚಳ, ನೀರಿನ ಮಟ್ಟ 3.4 ಅಡಿ ಏರಿಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200