ಶಿವಮೊಗ್ಗದಲ್ಲಿ ವಾಯುಸೇನೆ ಅಧಿಕಾರಿ ಮಂಜುನಾಥ್‌ ಪಾರ್ಥೀವ ಶರೀರ, ಕಣ್ಣೀರಾದ ಪತ್ನಿ

SHIVAMOGGA LIVE NEWS, 9 FEBRUARY 2025➤ ಸುದ್ದಿಯ ಮುಂದಿನ 9 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ತರಬೇತಿ ವೇಳೆ ಪ್ಯಾರಾಚೂಟ್‌ ತೆರೆಯದೆ ಆಗಸದಿಂದ ಕೆಳಗೆ ಬಿದ್ದು ಹುತಾತ್ಮರಾದ ವಾಯುಪಡೆ (airforce) ವಾರಂಟ್‌ ಆಫೀಸರ್‌ ಜಿ.ಎಸ್‌.ಮಂಜುನಾಥ್‌ ಅವರ ಪಾರ್ಥೀವ ಶರೀರ ಶಿವಮೊಗ್ಗ ತಲುಪಿದೆ. ಹೊಳೆ ಬಸ್‌ ನಿಲ್ದಾಣದ ಬಳಿ ಬೆಕ್ಕಿನ ಕಲ್ಮಠದ ಬಳಿ ಜನಪ್ರತಿನಿಧಿಗಳು, ಶಿವಮೊಗ್ಗದ ನಾಗರಿಕರು ಮಂಜುನಾಥ್‌ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಅಗಲಿದ ಯೋಧನಿಗೆ ನಮನ ಸಲ್ಲಿಸಿದರು.

Airforce-officer-Manjunath-body-brought-to-shimoga

ಸಮವಸ್ತ್ರ ಹಿಡಿದು ಕಣ್ಣೀರಾದ ಪತ್ನಿ

ಶಿವಮೊಗ್ಗದಲ್ಲಿ ಅಂತಿಮ ನಮನ ಸಲ್ಲಿಸುವ ಸಂದರ್ಭ ವಾರಂಟ್‌ ಆಫೀಸರ್‌ ಜಿ.ಎಸ್.ಮಂಜುನಾಥ್‌ ಅವರ ಪತ್ನಿ ಕಲ್ಪಿತಾ ಸಾಕಿಯ ಇದ್ದರು. ಪತಿಯ ಪಾರ್ಥೀವ ಶರೀರದ ಮುಂದೆ ಅವರ ಸಮವಸ್ತ್ರ ಹಿಡಿದು ಉಮ್ಮಳಿಸಿ ಬಂದ ದುಃಖ ತಡೆಯಲಾಗದೆ ಕಣ್ಣೀರಾದರು. ಇದು ಸುತ್ತಲು ಇದ್ದವರ ಕಣ್ಣಾಲಿಗಳನ್ನು ತೇವಗೊಳಿಸಿತು.

Airforce-officer-Manjunath-body-brought-to-shimoga

ಹೊಸನಗರದತ್ತ ಪಾರ್ಥೀವ ಶರೀರ

ವಾರಂಟ್‌ ಆಫೀಸರ್‌ ಜಿ.ಎಸ್.ಮಂಜುನಾಥ್‌ ಅವರ ಪಾರ್ಥೀವ ಶರೀರವನ್ನು ಸೇನಾ ವಾಹನದಲ್ಲಿ ತರಲಾಗಿದೆ. ವಾಯುಪಡೆಯ ಅಧಿಕಾರಿಗಳು, ಜಿ.ಎಸ್‌.ಮಂಜುನಾಥ್‌ ಅವರ ಕುಟುಂಬ ಸದಸ್ಯರು ಜೊತೆಗಿದ್ದರು.

Airforce-officer-Manjunath-body-brought-to-shimoga

ಪಾರ್ಥೀವ ಶರೀರವನ್ನು ಹೊತ್ತ ವಾಹನ ಈಗ ಹೊಸನಗರದತ್ತ ತೆರಳಿತು. ಬಿಜೆಪಿ ಕಾರ್ಯಕರ್ತರು, ಶಿವಮೊಗ್ಗದ ನಾಗರಿಕರು, ಮಾಜಿ ಸೈನಿಕರು, ಸಂಸದ ರಾಘವೇಂದ್ರ, ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರು ಸೇನಾ ವಾಹನದ ಜೊತೆಗೆ ಬೈಕ್‌ ಜಾಥಾದಲ್ಲಿ ನಡೆಸಿದರು.

ಇದನ್ನೂ ಓದಿ » ವಾಯುಪಡೆ ಅಧಿಕಾರಿ ಮಂಜುನಾಥ್‌ ಸಾವು, ಹೊಸನಗರದಲ್ಲಿ ನಾಳೆ ಮೆರವಣಿಗೆ, ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

Leave a Comment