SHIVAMOGGA LIVE NEWS | 19 JANUARY 2023
SHIMOGA | ಕಾಮಗಾರಿಯ ಹಿನ್ನೆಲೆ ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಮತ್ತು ಕುವೆಂಪು ಎಕ್ಸ್ ಪ್ರೆಸ್ ರೈಲನ್ನ (Mysore Train) ನಾಲ್ಕು ದಿನ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದರಿಂದ ಈ ಎರಡು ರೈಲುಗಳು ನಾಲ್ಕು ದಿನ ನಿಗದಿಗಿಂತಲು ತಡವಾಗಿ ನಿಲ್ದಾಣ ತಲುಪುಲಿವೆ.
ನಿಯಂತ್ರಣಕ್ಕೆ ಕಾರಣವೇನು?
ಹೊಳೆನರಸೀಪುರ ನಿಲ್ದಾಣದ ಯಾರ್ಡ್ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಲೈನ್ ಬ್ಲಾಕ್ ಇರಲಿದೆ. ಹಾಗಾಗಿ ಜನವರಿ 20, 21, 23 ಮತ್ತು 25ರಂದು ಎರಡು ರೈಲುಗಳನ್ನು (Mysore Train) ಮಾರ್ಗ ಮಧ್ಯೆ ನಿಯಂತ್ರಿಸಲಾತ್ತಿದೆ.
ಎಷ್ಟು ಹೊತ್ತು ನಿಯಂತ್ರಣ?
ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 16225) ರೈಲನ್ನು ಈ ನಾಲ್ಕು ದಿನ ಮಾರ್ಗ ಮಧ್ಯೆ 90 ನಿಮಿಷ ನಿಯಂತ್ರಿಸಲಾಗುತ್ತಿದೆ.
ಇನ್ನು, ತಾಳಗುಪ್ಪ – ಮೈಸೂರು ಕುವೆಂಪು ಎಕ್ಸ್ ಪ್ರೆಸ್ (ರೈಲು ಸಂಖ್ಯೆ 16221) ರೈಲನ್ನು ನಾಲ್ಕು ದಿನ ಮಾರ್ಗ ಮಧ್ಯೆ 30 ನಿಮಿಷ ನಿಯಂತ್ರಿಸಲಾಗುತ್ತದೆ ಎಂದು ರೈಲ್ವೆ ಇಲಾಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗ ನಿಲ್ದಾಣದಲ್ಲಿ ನೀರಿನ ಬಾಟಲಿ ಕೊಂಡು ಬಸ್ ಹತ್ತಿದ ವಿದ್ಯಾರ್ಥಿನಿಗೆ ಕಾದಿತ್ತು ಆಘಾತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200