ಶಿವಮೊಗ್ಗ ರಿಂಗ್ ರೋಡ್, ಜಿಲ್ಲೆಯ ಹಲವು ಹೆದ್ದಾರಿ ಅಭಿವೃದ್ಧಿಗೆ ಒಪ್ಪಿಗೆ, ಯಾವೆಲ್ಲ ರಸ್ತೆ ಅಭಿವೃದ್ಧಿಯಾಗುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 DECEMBER 2022

ಶಿವಮೊಗ್ಗ : ನಗರದ ಉತ್ತರ ಭಾಗದಲ್ಲಿ ಬಾಕಿ ಉಳಿದಿರುವ 15 ಕಿ.ಮೀ ಬೈಪಾಸ್ ರಸ್ತೆ ನಿರ್ಮಾಣ, ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ (national highway) ನಿರ್ಮಾಣಕ್ಕೆ ಮಂಜೂರಾತಿ ನೀಡಲು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga nanjappa hospital

ರಿಂಗ್ ರಸ್ತೆ ಪೂರ್ಣಗೊಳ್ಳಲಿದೆ

ಶಿವಮೊಗ್ಗ ನಗರದ ಉತ್ತರ ಭಾಗದಲ್ಲಿ 15 ಕಿ.ಮೀ ಬೈಪಾಸ್ ರಸ್ತೆ (national highway) ನಿರ್ಮಾಣಕ್ಕೆ ಮಂಜೂರಾತಿ ನೀಡಬೇಕು. ಇದರಿಂದ ನಗರದ 34 ಕಿ.ಮೀ ರಿಂಗ್ ರಸ್ತೆ ಪೂರ್ಣಗೊಳ್ಳಲಿದೆ ಎಂದು ಸಂಸದ ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸಚಿವ ನಿತಿನ್ ಗಡ್ಕರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಂಜೂರಾತಿ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ.

ಬೈಂದೂರು – ರಾಣೆಬೆನ್ನೂರು ಹೆದ್ದಾರಿ

1,012 ಕೋಟಿ ರೂ. ವೆಚ್ಚದಲ್ಲಿ ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 766(ಸಿ) ನಿರ್ಮಾಣಕ್ಕೆ ಮಂಜೂರಾತಿ ಲಭಿಸಿದೆ. ಬೈಂದೂರಿನಿಂದ ಕೊಲ್ಲೂರು, ನಗರ, ಹೊಸನಗರ, ಆನಂದಪುರ, ಶಿಕಾರಿಪುರ, ಮಾಸೂರು, ರಟ್ಟೆಹಳ್ಳಿ ಮೂಲಕ ರಾಣೆಬೆನ್ನೂರಿಗೆ ಹೋಗಲಿದೆ. ಕಳೆದ ವರ್ಷ ಹೆದ್ದಾರಿಯ 7 ಕಿರು ಸೇತುವೆಗಳು ಹಾಗೂ 27.70 ಕಿ.ಮೀ ಉದ್ದದ ದ್ವಿಪಥ ರಸ್ತೆ ನಿರ್ಮಾಣಕ್ಕೆ 238.70 ಕೋಟಿ ರೂ. ಡಿಪಿಆರ್ ಗೆ ಮಂಜೂರಾತಿ ನೀಡಿಲಾಗಿದ್ದು, ಕಾಮಗಾರಿ ನಡೆಯುತ್ತಿದೆ.

ಇದನ್ನೂ ಓದಿ – ಲೋಕಸಭೆಯಲ್ಲಿ ಶರಾವತಿ ಸಂತ್ರಸ್ಥರ ಪರ ಚರ್ಚಿಸಿದ ಸಂಸದ ರಾಘವೇಂದ್ರ, ಏನೇನು ಪ್ರಸ್ತಾಪಿಸಿದರು?

ಬೈಂದೂರಿನಿಂದ ಹಾಲ್ ಕಲ್ ಜಂಕ್ಷನ್, ಕೊಲ್ಲೂರು ಮೂಲಕ ನಾಗೋಡಿವರೆಗಿನ 40.40 ಕಿ.ಮೀ ಉದ್ದದ ರಸ್ತೆಯನ್ನು (national highway) ದ್ವಿಪಥ ರಸ್ತೆಯನ್ನಾಗಿ ಅಗಲೀಕರಣ ಮಾಡಲು 394.05 ಕೋಟಿ ರೂ. ಡಿಪಿಆರ್ ಗೆ ಮಂಜೂರಾತಿ ನೀಡಲಾಗಿದೆ. ಶಿಕಾರಿಪುರ ಪಟ್ಟಣಕ್ಕೆ 6.57 ಕಿ.ಮೀ ಉದ್ದದ ಬೈಪಾಸ್ ರಸ್ತೆ ನಿರ್ಮಾಣಕ್ಕೆ 66.44 ಕೋಟಿ ರೂ. ಮೊತ್ತದ ಡಿಪಿಆರ್. ಹೊಸನಗರದ ಮಾವಿನಕೊಪ್ಪ ಸರ್ಕಲ್ ನಿಂದ ಹೊಸನಗರ ಬೈಪಾಸ್, ಶರಾವತಿ ಹಿನ್ನೀರಿಗೆ 1.54 ಕಿ.ಮೀ, 0.72 ಕಿ.ಮೀ ಉದ್ದದ 2 ಭಾರೀ ಸೇತುವೆಗಳ ನಿರ್ಮಾಣ, ಆಡುಗೋಡಿವರೆಗೆ 13.82 ಕಿ.ಮೀ ಉದ್ದದ ಬದಲೀ ರಸ್ತೆ ನಿರ್ಮಾಣ ಮಾಡುವ 313.56 ಕೋಟಿ ಡಿಪಿಆರ್ ಗೆ ಮಂಜೂರಾತಿ ನೀಡಲಾಗಿದೆ. ಈತನಕ 1012.75 ಕೋಟಿ ರೂ. ಮಂಜೂರಾಗಿದೆ ಎಂದು ತಿಳಿಸಿದ್ದಾರೆ.

ರಸ್ತೆ ಅಗಲೀಕರಣಕ್ಕೆ ಮನವಿ

ಶಿವಮೊಗ್ಗ ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗು ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ. ಇದಕ್ಕೆ ಸಚಿವ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

  1. ಶಿವಮೊಗ್ಗ – ಹೊನ್ನಾಳಿ – ಮಲೆಬೆನ್ನೂರು – ಹರಿಹರ – ಹರಪನಹಳ್ಳಿ – ಮರಿಯಮ್ಮನಹಳ್ಳಿ
  2. ಶಿವಮೊಗ್ಗ – ಶಿಕಾರಿಪುರ – ಶಿರಾಳಕೊಪ್ಪ – ಹಾನಗಲ್ – ತಡಸ ರಸ್ತೆ
  3. ಆಯನೂರು – ರಿಪ್ಪನ್ ಪೇಟೆ – ಹುಂಚ – ತೀರ್ಥಹಳ್ಳಿ – ಮಾಸ್ತಿಕಟ್ಟೆ – ಕುಂದಾಪುರ ರಸ್ತೆ
  4. ಸಾಗರ – ಸೊರಬ – ಶಿರಾಳಕೊಪ್ಪ – ಆನವಟ್ಟಿ ರಸ್ತೆ

ಈ ರಸ್ತೆಗಳ ಅಗಲೀಕರಣ ಮಾಡಿ ಅಭಿವೃದ್ಧಿಗೊಳಿಸಲು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 22, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment