ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದಲ್ಲಿ ಅವಧೂತರ ನಡೆ, ಭಕ್ತರ ಕಡೆ

SHIVAMOGGA LIVE NEWS | 14 JANUARY 2024
SHIMOGA : ಭಾರತದತ್ತ ಜಗತ್ತಿನಾದ್ಯಂತ ಜನರು ಆಕರ್ಷಿತರಾಗುತ್ತಿರುವುದಕ್ಕೆ ಈ ದೇಶದ ಶ್ರೇಷ್ಠ ಪರಂಪರೆ, ಜಗತ್ತಿಗೆ ಆಧ್ಯಾತ್ಮಿಕ ಸಂದೇಶ ನೀಡಿದ ಸಾಧು, ಸಂತರು ಕಾರಣ ಎಂದು ಮೈಸೂರಿನ ಶ್ರೀ ಅರ್ಜುನ ಅವಧೂತ ಅವರು ತಿಳಿಸಿದರು. ನಗರದ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸಮನ್ವಯ ಟ್ರಸ್ಟ್ ನಲ್ಲಿ ಆಯೋಜಿಸಿದ್ದ ದತ್ತ ಪಾರಾಯಣ ಮಂಗಳ – ಸಂಕ್ರಾಂತಿ ಸಂಭ್ರಮ ಮತ್ತು ಅವಧೂತರ ನಡೆ, ಭಕ್ತರ ಕಡೆ ವಿಶೇಷ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ದಾವಣಗೆರೆಯ ಶ್ರೀ ರೇಣುಕಾ ಮಾತಾಜಿ ಸಾನ್ನಿಧ್ಯ ವಹಿಸಿದ್ದರು. ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ, ಅಧ್ಯಕ್ಷೆ ಕೆ.ಎಂ.ಗಿರಿಜಾದೇವಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವರು ಉಪಸ್ಥಿತರಿದ್ದರು.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಒತ್ತಿ
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






