ಶಿವಮೊಗ್ಗದಲ್ಲಿ ಅವಧೂತರ ನಡೆ, ಭಕ್ತರ ಕಡೆ
SHIVAMOGGA LIVE NEWS | 14 JANUARY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಭಾರತದತ್ತ ಜಗತ್ತಿನಾದ್ಯಂತ ಜನರು ಆಕರ್ಷಿತರಾಗುತ್ತಿರುವುದಕ್ಕೆ ಈ ದೇಶದ ಶ್ರೇಷ್ಠ ಪರಂಪರೆ, ಜಗತ್ತಿಗೆ ಆಧ್ಯಾತ್ಮಿಕ ಸಂದೇಶ ನೀಡಿದ ಸಾಧು, ಸಂತರು ಕಾರಣ ಎಂದು ಮೈಸೂರಿನ ಶ್ರೀ ಅರ್ಜುನ ಅವಧೂತ ಅವರು ತಿಳಿಸಿದರು. ನಗರದ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸಮನ್ವಯ ಟ್ರಸ್ಟ್ ನಲ್ಲಿ ಆಯೋಜಿಸಿದ್ದ ದತ್ತ ಪಾರಾಯಣ ಮಂಗಳ – ಸಂಕ್ರಾಂತಿ ಸಂಭ್ರಮ ಮತ್ತು ಅವಧೂತರ ನಡೆ, ಭಕ್ತರ ಕಡೆ ವಿಶೇಷ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ದಾವಣಗೆರೆಯ ಶ್ರೀ ರೇಣುಕಾ ಮಾತಾಜಿ ಸಾನ್ನಿಧ್ಯ ವಹಿಸಿದ್ದರು. ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ, ಅಧ್ಯಕ್ಷೆ ಕೆ.ಎಂ.ಗಿರಿಜಾದೇವಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವರು ಉಪಸ್ಥಿತರಿದ್ದರು.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಒತ್ತಿ