ಇವತ್ತಿನಿಂದ ಶಿವಮೊಗ್ಗ ಮಹಾನಗರ ಪಾಲಿಕೆ 3 ವಲಯವಾಗಿ ವಿಂಗಡಣೆ, ಎಲ್ಲೆಲ್ಲಿ ಹೊಸ ಕಚೇರಿ ಶುರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ : ಆಡಳಿತಾತ್ಮಕ ಹಿತದೃಷ್ಟಿ ಮತ್ತು ಸಾರ್ವಜನಿಕ ಸ್ನೇಹಿಯಾಗಿ ಸೇವೆ ಒದಗಿಸಲು ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಮೂರು ವಿಭಾಗಗಳಾಗಿ (Divisions) ವಿಂಗಡಿಸಲಾಗಿದೆ. ಇವತ್ತಿನಿಂದಲೇ ವಲಯ ಕಚೇರಿಗಳು ಕಾರ್ಯಾರಂಭ ಮಾಡಲಿವೆ.

ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಉತ್ತರ, ದಕ್ಷಿಣ ಮತ್ತು ಕೇಂದ್ರ ವಲಯ ಎಂದು ವಿಂಗಡಿಸಲಾಗಿದೆ. ಮೂರು ವಿಭಾಗಕ್ಕು ಪ್ರತ್ಯೇಕವಾಗಿ ಕಚೇರಿಗಳನ್ನು ಸ್ಥಾಪಿಸಲಾಗಿದೆ.

ಎಲ್ಲೆಲ್ಲಿ ಮೂರು ಕಚೇರಿ ಸ್ಥಾಪನೆ?

ವಲಯ 1 : ವಿನೋಬನಗರದ ಶುಭಮಂಗಳ ಕಲ್ಯಾಣ ಮಂದಿರದ ಬಳಿ ಪಾಲಿಕೆ ಕಟ್ಟಡದಲ್ಲಿ ಉತ್ತರ ವಲಯ ಕಚೇರಿ.

Shimoga-Mahanagara-Palike-ambedkar-statue

ವಲಯ 2 : ಗೋಪಿ ವೃತ್ತದ ಬಳಿ ಪಾಲಿಕೆಗೆ ಸೇರಿದ ದೇವರಾಜ ಅರಸು ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯಲ್ಲಿ ಕೇಂದ್ರ ವಲಯ ಕಚೇರಿ ಸ್ಥಾಪಿಸಲಾಗಿದೆ.

ವಲಯ 3 : ಇಮಾಮ್ ಬಾಡಾ ಬಳಿ ಸ್ಮಾರ್ಟ್‌ ಸಿಟಿಯಿಂದ ಅಭಿವೃದ್ಧಿಪಡಿಸಲಾದ ಕಟ್ಟಡದಲ್ಲಿ ದಕ್ಷಿಣ ವಲಯ ಕಚೇರಿ.

ಕಚೇರಿಗಳ ವಿಂಗಡಣೆಗೆ ಕಾರಣವೇನು?

ಈವರೆಗೆ ಮಹಾನಗರ ಪಾಲಿಕೆ ಆಡಳಿತವು ಕೇಂದ್ರಿಕೃತವಾಗಿತ್ತು. ಶಿವಮೊಗ್ಗದ ಪಾಲಿಕೆ ಕಚೇರಿಯಲ್ಲಿಯೇ ಕೆಲಸ ಕಾರ್ಯ ನಡೆಯುತ್ತಿತ್ತು. ಇದರಿಂದ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚಿತ್ತು. ಅಲ್ಲದೆ ಸಾರ್ವಜನಿಕರು ಕೂಡ ದೂರದ ಬಡಾವಣೆಗಳಿಂದ ಪಾಲಿಕೆಗೆ ಬರಬೇಕಿತ್ತು. ಇದೆ ಕಾರಣಕ್ಕೆ ವಲಯ ಕಚೇರಿಗಳನ್ನು ಆರಂಭಿಸುವಂತೆ ಒತ್ತಾಯ ಕೇಳಿ ಬಂದಿತ್ತು. ಈಗ ಮೂರು ವಲಯಗಳನ್ನು (Divisions) ವಿಂಗಡಿಸಿ, ಕಚೇರಿ ಆರಂಭಿಸಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕಮಿಷನರ್‌ ನೇತೃತ್ವದಲ್ಲಿ ವಿಂಗಡಣೆ

ಮಹಾನಗರ ಪಾಲಿಕೆ ಕಮಿಷನರ್‌ ಕವಿತಾ ಯೋಗಪ್ಪನವರ್‌ ಅವರ ಆಡಳಿತಾವಧಿಯಲ್ಲಿ ಪಾಲಿಕೆ ಕಚೇರಿಯನ್ನು ವಿಂಗಡಿಸಲಾಗಿದೆ. ಹಲವು ಬಾರಿ ಒತ್ತಡ ಕೇಳಿ ಬಂದ ಹಿನ್ನೆಲೆ ಸಾಧಕ, ಬಾಧಕಗಳನ್ನು ಪರಿಶೀಲಿಸಿ ವಿಂಗಡಿಸಲು (Divisions) ಅನುಮತಿಸಿದ್ದಾರೆ.

ವಲಯವಾರು ವಿಂಗಡನೆಗೆ ಕಾನೂನಿನಲ್ಲಿ ಅವಕಾಶವಿದೆ. ಈಗಿನ ಮಹಾನಗರ ಪಾಲಿಕೆಯಲ್ಲಿ ಎಲ್ಲ ಸೇವೆಗಳು ಕೇಂದ್ರೀಕೃತವಾಗಿವೆ. ವಲಯ ವಿಂಗಡನೆಯಿಂದ ಜನರ ಅಲೆದಾಟ ತಪ್ಪಲಿದೆ.

– ಡಾ. ಕವಿತಾ ಯೋಗಪ್ಪನವರ್‌, ಮಹಾನಗರ ಪಾಲಿಕೆ ಕಮಿಷನರ್‌

ಈ ಕಚೇರಿಗಳಲ್ಲಿ ಏನೆಲ್ಲ ಸೇವೆ ಲಭ್ಯ?

ವಲಯ ಕಚೇರಿಗಳಲ್ಲಿ ಕಂದಾಯ ಪಾವತಿ, ಎಂಜಿನಿಯರಿಂಗ್ ಸೇರಿದಂತೆ ಹಲವು ವಿಭಾಗದ ಸೇವೆಗಳು ಸ್ಥಳೀಯವಾಗಿ ಸಾರ್ವಜನಿಕರಿಗೆ ಸಿಗಲಿವೆ. ಈ ಕಚೇರಿಗಳಿಗೆ ಪಾಲಿಕೆಯ ಕಂದಾಯ ಅಧಿಕಾರಿಗಳೆ ಉಸ್ತುವಾರಿಯಾಗಿ ಕೆಲಸ ಮಾಡಲಿದ್ದಾರೆ.

Web-Design-by-New-Web-techy

ಪ್ರತಿ ವಲಯಕ್ಕು ಕಂದಾಯಾಧಿಕಾರಿ, ಸಹಾಯಕ ಕಂದಾಯಾಧಿಕಾರಿ, ಶಾಖಾ ವ್ಯವಸ್ಥಾಪಕ, ರಾಜಸ್ವ ನಿರೀಕ್ಷಕರು, ವಿಷಯ ನಿರ್ವಾಹಕರು, ಕರ ವಸೂಲಿಗಾರರನ್ನು ನೇಮಿಸಲಾಗಿದೆ. ಪ್ರತಿ ವಲಯದಲ್ಲಿ ವಾರ್ಡ್‌ಗಳ ಸಂಖ್ಯೆಗೆ ಅನುಗುಣವಾಗಿ ಮಾನವ ಸಂಪನ್ಮೂಲವನ್ನು ಕೆಲಸಕ್ಕೆ ನಿಯೋಜಿಸಲಾಗಿದೆ.

ಇದನ್ನೂ ಓದಿ » ಧಗಧಗ ಹೊತ್ತಿ ಉರಿಯಲಿದೆ ಗಾಂಧಿ ಪಾರ್ಕ್‌, ಕೆಲವರಿಗಿದು ಓಪನ್‌ ಬಾರ್‌, ಹೇಗಿದೆ ಒಳಗಿನ ಸ್ಥಿತಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 17, 2025

Acting Registrar Appointed for Kuvempu University

Acting Registrar Appointed for Kuvempu University

ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವ

ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವ

ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?

ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?

ಇಂದಿನ ಪಂಚಾಂಗ, ಶುಭ ಸಮಯ ಯಾವಾಗಿದೆ?

ಇಂದಿನ ಪಂಚಾಂಗ, ಶುಭ ಸಮಯ ಯಾವಾಗಿದೆ?

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

Leave a Comment