ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 JANUARY 2023
SHIMOGA | ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಕುದುರೆಗಳ ಹಾವಳಿ ಹೆಚ್ಚಾಗಿದೆ. ಈ ಸಂಬಂಧ ದೂರುಗಳು ಬರುತ್ತಿವೆ. ಕುದುರೆಗಳ ವಾರಸುದಾರರು ಇದ್ದಲ್ಲಿ ಅವುಗಳನ್ನು ಸುಪರ್ದಿಗೆ ಪಡೆಯಬೇಕು. ಇಲ್ಲವಾದಲ್ಲಿ ಪಾಲಿಕೆಯೇ ಕುದುರೆಗಳನ್ನು ವಶಕ್ಕೆ ಪಡೆದು ಎನ್.ಜಿ.ಒ ಅಥವಾ ಇವುಗಳನ್ನು ಸಾಕುವ ಇಚ್ಛೆಯುಳ್ಳ ಸಾರ್ವಜನಿಕರಿಗೆ ಕೊಡಲಿದೆ ಎಂದು ಮಹಾನಗರ ಪಾಲಿಕೆ ಎಚ್ಚರಿಕೆ (warning) ನೀಡಿದೆ.

ಅಪಘಾತಕ್ಕೆ ಕಾರಣವಾಗುತ್ತಿವೆ ಕುದುರೆ
ಕುದುರೆಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾ ದಿಡ್ಡಿ ತಿರುಗಾಡುವುದು, ಮಲಗುವುದು, ಸಾರ್ವಜನಿಕರ ಮೇಲೆ ನುಗ್ಗುವುದು ಹಾಗೂ ವಾಹನಗಳಿಗೆ ಅಡ್ಡ ಬರುತ್ತಿರುವುದರಿಂದ ಅವಘಾತಗಳಾಗುತ್ತಿವೆ. ಈ ಬಗ್ಗೆ ಅನೇಕ ದೂರುಗಳು ಬರುತ್ತಿದೆ. ಅದ್ದರಿಂದ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿ, ಮಾಲೀಕರು ತಮ್ಮ ಕುದುರೆಗಳನ್ನು ಸುಪರ್ದಿಗೆ ತೆಗೆದುಕೊಳ್ಳಲು ತಿಳಿವಳಿಕೆ ಮೂಡಿಸಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ JOB FAIR, ಇನ್ಫೋಸಿಸ್, ಬೆಂಗಳೂರು ಏರ್ ಪೋರ್ಟ್ ಸೇರಿ 40ಕ್ಕೂ ಹೆಚ್ಚು ಕಂಪನಿ ಭಾಗಿ, ನೋಂದಣಿ ಶುರು
ಒಂದು ವೇಳೆ ಸುಪರ್ದಿಗೆ ಪಡೆಯದಿದ್ದಲ್ಲಿ ಆಸಕ್ತಿಯುಳ್ಳ ಸಂಘ ಸಂಸ್ಥೆಗಳು ಅಥವಾ ಬಿಡಾಡಿ ಕುದುರೆಗಳನ್ನು ಸಾಕಿ ಉಪಯೋಗ ಪಡೆಯುವಂತ ಆಸಕ್ತಿಯುಳ್ಳ ವಿವಿಧ ಯೋಜನೆಗಳನ್ನು ಉಳ್ಳಂತ ಸಾರ್ವಜನಿಕರು ಮುಂದೆ ಬಂದಲ್ಲಿ ಕುದುರೆಗಳನ್ನು ನೀಡುವುದಾಗಿ ಪಕಟಣೆ ಹೊರಡಿಸಲಾಗಿದೆ.
ಕುದುರೆ ಸಾಗಿಸಲು ಎನ್.ಜಿ.ಒ ಮನವಿ
ಕೆಲವು ಸ್ವಯಂ ಸೇವಾ ಸಂಸ್ಥೆ, ಏಜೆನ್ಸಿಗಳು ಈ ಬೀಡಾಡಿ ಕುದುರೆಗಳನ್ನು ಉಚಿತವಾಗಿ ತಮ್ಮ ವಶಕ್ಕೆ ತೆಗೆದುಕೊಂಡು ಸಾಗಿಸಲು ಅನುಮತಿ ಕೇಳುತ್ತಿವೆ. ಅವುಗಳನ್ನು ಬಳಸಿಕೊಂಡು ಬ್ಯಾಟರಿ ಚಾಲಿತ ಯಂತ್ರವನ್ನು ಬಳಸುವುದು, ವ್ಯವಸಾಯ ಕ್ಷೇತ್ರ, ಸಾಗಾಣಿಕೆ ಕ್ಷೇತ್ರಕ್ಕೆ ಬಳಸಿಕೊಳ್ಳುವುದಕ್ಕೆ ಮನವಿ ಸಲ್ಲಿಸಿವೆ. ಈ ಪ್ರಸ್ತಾವನೆಗೆ ಮೈಸೂರಿನಲ್ಲಿರುವ ಕೇಂದ್ರ ಆಹಾರ ಸಂಶೋಧನ ಕೇಂದ್ರ, ಬೆಂಗಳೂರಿನಲ್ಲಿರುವ ರಾಷ್ಟ್ರೀಯ ತೋಟಗಾರಿಕ ಮಿಷನ್ ಮಾರ್ಗದರ್ಶನ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
7 ದಿನ ಗಡುವು ನೀಡಿದ ಪಾಲಿಕೆ
ಈ ಪ್ರಕಟಣೆ ಹೊರಡಿಸಿದ 7 ದಿನಗಳೊಳಗೆ ವಾರಸುದಾರರು ತಮ್ಮ ಕುದುರೆಗಳನ್ನು ಸುಪರ್ದಿಗೆ ಪಡೆಯಬೇಕು. ಇಲ್ಲವಾದಲ್ಲಿ ಕಾರ್ಪೋರೇಷನ್ ಕಾಯ್ದೆ ಅನುಸಾರ ಬೀಡಾಡಿ ಕುದುರೆಗಳನ್ನು ಸೂಕ್ತ ಎನ್ಜಿಓಗಳ ವಶಕ್ಕೆ ನೀಡಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ. ಬೀಡಾಡಿ ಕುದುರೆಗಳ ಮಾಲೀಕರು ಮೊ. 9886326268 ಸಂಪರ್ಕಿಸಬಹುದು. healthcitycorporation@gmail.com ವಿಳಾಸಕ್ಕೆ ತಮ್ಮ ದೂರುಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ, ಏನದು? ಕಾರಣವೇನು?

[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















