SHIVAMOGGA LIVE NEWS | 24 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಕೆಲಸಕ್ಕಿದ್ದ ಚಿನ್ನದ ಅಂಗಡಿಯಿಂದಲೇ ಬಂಗಾರ ಕಳ್ಳತನ ಮಾಡಿದ್ದ ಕೆಲಸಗಾರನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಕೊಲ್ಕತ್ತಾ, ಹೈದರಾಬಾದ್ ಮತ್ತು ಸಿಕಂದರಾಬಾದ್ನಲ್ಲಿ 8.45 ಲಕ್ಷ ರೂ. ಮೌಲ್ಯದ ಬಂಗಾರವನ್ನು ವಶಕ್ಕೆ ಪಡೆಯಲಾಗಿದೆ.
ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಅದಿತೋ ಮಾಜಿ ಅಲಿಯಾಸ್ ಆದಿತ್ಯಾ (37) ಬಂಧಿತ. ಈತ ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ಅನಿಸೂರ್ ಇಸ್ಲಾಂ ಅವರ ಚಿನ್ನ, ಬೆಳ್ಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಜ.4ರಂದು ಆಭರಣಗಳಿಗೆ ಪಾಲಿಶ್ ಮಾಡಿಸಿಕೊಂಡು ಬರುವುದು ತಿಳಿಸಿ 130 ಬಂಗಾರದೊಂದಿಗೆ ನಾಪತ್ತೆಯಾಗಿದ್ದ.
ಕೋಲ್ಕತ್ತಾದಲ್ಲಿ ಆರೋಪಿ ಅರೆಸ್ಟ್
ಪ್ರಕರಣದ ತನಿಖೆ ನಡೆಸಿದ ಕೋಟೆ ಠಾಣೆ ಪೊಲೀಸರು ಆರೋಪಿ ಅದಿತೋ ಮಾಜಿಯನ್ನು ಕೋಲ್ಕತ್ತಾದಲ್ಲಿ ಬಂಧಿಸಿದ್ದಾರೆ. ವಿಚಾರಣೆ ಬಳಿಕ ಕೋಲ್ಕತ್ತಾದಲ್ಲಿ 2.70 ಲಕ್ಷ ರೂ. ಮೌಲ್ಯದ 45 ಗ್ರಾಮ ಬಂಗಾರ, ಹೈದರಾಬಾದ್ ಮತ್ತು ಸಿಕಂದರಾಬಾದ್ನಲ್ಲಿ 85 ಗ್ರಾಮ ಬಂಗಾರ ವಶಪಡಿಸಿಕೊಂಡಿದ್ದಾರೆ. ಈತನ ಬಳಿಯಿಂದ ಒಟ್ಟು 8.45 ಲಕ್ಷ ರೂ. ಮೌಲ್ಯದ 130 ಗ್ರಾಂ ಬಂಗಾರವನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ವ್ಯಾಪಾರಿಗೆ ಬಂತು 2 ಕೊರಿಯರ್, ಒಂದು ರಿಜಿಸ್ಟರ್ ಪೋಸ್ಟ್, ಓಪನ್ ಮಾಡಿದಾಗ ಕಾದಿತ್ತು ಶಾಕ್
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ ಎ.ಜಿ ಮಾರ್ಗದರ್ಶದಲ್ಲಿ, ಡಿವೈಎಸ್ಪಿ ಬಾಲರಾಜ್.ಬಿ ಅವರ ಮೇಲ್ವಿಚಾರಣೆಯಲ್ಲಿ ಕೋಟೆ ಠಾಣೆ ಇನ್ಸ್ಪೆಕ್ಟರ್ ರವಿ ಪಾಟೀಲ್ ನೇತೃತ್ವದ ಕಾರ್ಯಾಚರಣೆ ನಡೆಸಲಾಯಿತು. ಪಿಎಸ್ಐ ಕುಮಾರ್, ಪಿಸ್ಐ ಸಿ.ಆರ್ ಕೊಪ್ಪದ್, ಎಎಸ್ಐ ಟಿ.ಶ್ರೀಹರ್ಷ ಮತ್ತು ಸಿಬ್ಬಂದಿ ಅಣ್ಣಪ್ಪ, ನಾಗರಾಜ, ಆಂಜಿನಪ್ಪ, ಕಿಶೋರ ಮತ್ತು ಜಯಶ್ರೀ ಅವರ ತಂಡ ಆರೋಪಿಯನ್ನು ಬಂಧಿಸಿದೆ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






