ಶಿವಮೊಗ್ಗದಲ್ಲಿ ಮತ್ತೊಬ್ಬ ಯುವಕನ ಹತ್ಯೆಗೆ ಸಂಚು, ಪೊಲೀಸರ ಕಾರ್ಯಾಚರಣೆಯಿಂದ ತಪ್ಪಿತು ಅನಾಹುತ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | CRIME | 15 ಏಪ್ರಿಲ್ 2022

ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ 13 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದ ಬಳಿಕ ಉಂಟಾಗಿದ್ದ ಗಲಭೆ ಸಂಬಂಧ ಯುವಕನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಈತ ಸ್ಪೋಟಕ ಮಾಹಿತಿ ಬಾಯಿ ಬಿಟ್ಟಿದ್ದಾನೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

13 ಮಂದಿ ವಿರುದ್ಧ ಕೇಸ್

ರಾಖಿ ಎಂಬಾತನ ವಿಚಾರಣೆ ವೇಳೆ ಮುಸ್ಲಿಂ ಯುವಕನ ಹತ್ಯೆಗೆ ಸಂಚು ಕುರಿತು ಬಾಯಿ ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ರಾಖಿ ಸೇರಿದಂತೆ ಶಿವಮೊಗ್ಗದ 13 ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಖಿ ಸಿಕ್ಕಿಬಿದ್ದಿದ್ದು ಹೇಗೆ?

ಫೆ.21ರಂದು ಬೆಳಗ್ಗೆ 11.30ಕ್ಕೆ ಸೀಗೆಹಟ್ಟಿಯಲ್ಲಿ ಪತ್ರಕರ್ತ ಮೊಹಮದ್ ರಫಿ ಅವರ ಮೇಲೆ ಗುಂಪು ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ರಾಖಿ ಎಂಬಾತನ ವಿಚಾರಣೆ ನಡೆಸಲಾಗುತ್ತಿತ್ತು. ಆಗ ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿರುವುದಾಗಿ ಹೇಳಿಕೆ ನೀಡಿದ್ದಾನೆ ಎಂದು ಎಫ್ಐಆರ್ ದಾಖಲು ಮಾಡಲಾಗಿದೆ.

ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (CRIME)

Shimoga Nanjappa Hospital

ಇದನ್ನೂ ಓದಿ | ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಸಂತೋಷ್ ಪಾಟೀಲ್’ಗೆ ಶ್ರದ್ಧಾಂಜಲಿ ಫ್ಲೆಕ್ಸ್ ಪ್ರತ್ಯಕ್ಷ, ಎಷ್ಟು ಕಡೆ ಫ್ಲೆಕ್ಸ್ ಹಾಕಲಾಗಿದೆ?

ಈ ಮೇಲ್ – shivamoggalive@gmail.com

WhatsApp Number – 7411700200

Leave a Comment