Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸ್ಮಾರ್ಟ್ ಸಿಟಿಯಿಂದ ಶಿವಮೊಗ್ಗದ ರಾಗಿಗುಡ್ಡದಲ್ಲಿ ಜೈವಿಕ ಉದ್ಯಾನ, ಹೇಗಿರುತ್ತೆ? ಎಷ್ಟು ಎಕರೆಯಲ್ಲಿ ಉದ್ಯಾನವಾಗುತ್ತೆ?

ಸ್ಮಾರ್ಟ್ ಸಿಟಿಯಿಂದ ಶಿವಮೊಗ್ಗದ ರಾಗಿಗುಡ್ಡದಲ್ಲಿ ಜೈವಿಕ ಉದ್ಯಾನ, ಹೇಗಿರುತ್ತೆ? ಎಷ್ಟು ಎಕರೆಯಲ್ಲಿ ಉದ್ಯಾನವಾಗುತ್ತೆ?

12/08/2020 2:00 PM
ನಿತಿನ್‌ ಕೈದೊಟ್ಲು

117702852 1188438618184223 2807915213080176620 n.jpg? nc cat=111& nc sid=110474& nc ohc=VE0J8XyiMG0AX 36iLB& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಆಗಸ್ಟ್ 2020

ಶಿವಮೊಗ್ಗ ನಗರದಲ್ಲಿರುವ ರಾಗಿಗುಡ್ಡದಲ್ಲಿ ಲಭ್ಯವಿರುವ ಸುಮಾರು 20 ಎಕರೆ ಕಂದಾಯ ಜಮೀನಿನಲ್ಲಿ ಜೈವಿಕ ವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಹಸಿರೀಕರಣಕ್ಕಾಗಿ 3.86 ಕೋಟಿ ರೂ. ಮೀಸಲಿರಿಸಲಾಗಿದ್ದು, ಇದನ್ನು ಬಳಸಿಕೊಂಡು ಜೈವಿಕ ವನ ಅಭಿವೃದ್ಧಿಪಡಿಲು ಉದ್ದೇಶಿಸಲಾಗಿದೆ. ಮಲೆನಾಡಿನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಉತ್ತಮ ಸಸಿಗಳನ್ನು ಬಳಸಿಕೊಂಡು ವನ ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಇದರಲ್ಲಿ ಮುಂದಿನ ಐದು ವರ್ಷಗಳ ನಿರ್ವಹಣೆಯೂ ಸೇರಿರಬೇಕು. ಒಟ್ಟು 7 ಸಾವಿರ ಸಸಿಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.

117610612 1188459351515483 1880671465935144156 o.jpg? nc cat=111& nc sid=8024bb& nc ohc=alZg5awBwgIAX KKmTR& nc ht=scontent.fblr11 1

ರಾಗಿಗುಡ್ಡದ 112ರ ಸರ್ವೆ ನಂಬರಿನಲ್ಲಿ ಒಟ್ಟು 69 ಎಕರೆ ಜಮೀನು ಇದ್ದು, ಇದರಲ್ಲಿ ವಿವಿಧ ಉದ್ದೇಶಗಳಿಗಾಗಿ ಒಟ್ಟು 43 ಎಕರೆ ಈಗಾಗಲೇ ಮಂಜೂರು ಮಾಡಲಾಗಿದೆ. ಇದರಲ್ಲಿ 5 ಎಕರೆ  ಇಎಸ್‍ಐ ಆಸ್ಪತ್ರೆ, 8 ಎಕರೆ ಪ್ರಾದೇಶೀಕ ವಿಜ್ಞಾನ ಕೇಂದ್ರ, 5 ಎಕರೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸೇರಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಇನ್ನೂ ಕೆಲವು ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇಲ್ಲಿ 18 ಎಕರೆ ಲಭ್ಯವಿದ್ದು, ಜೈವಿಕ ಉದ್ಯಾನಕ್ಕೆ ಬಳಸಿಕೊಳ್ಳಬಹುದಾಗಿದೆ. ಇನ್ನೂ 2 ಎಕರೆ ಲಭ್ಯವಿದೆ. ಇದೇ ರೀತಿ ಉದ್ದೇಶಿತ ವಾಜಪೇಯಿ ಬಡಾವಣೆಯಲ್ಲಿ 10 ಎಕರೆ ಮೀಸಲು ಅರಣ್ಯವಿದ್ದು ಇಲ್ಲಿಯೂ ಸಸಿಗಳನ್ನು ನೆಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ರಾಗಿಗುಡ್ಡದಲ್ಲಿ ಸುಮಾರು 20ಗುಂಟೆ ಜಮೀನು ಒತ್ತುವರಿ ಮಾಡಿ 22ಮನೆಗಳನ್ನು ನಿರ್ಮಿಸಲಾಗಿದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.

ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಕೆ.ಪಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | [email protected]

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 120820 BJP Yuva Morcha Protest Against DJ Halli Attack 1 ಬೆಂಗಳೂರು ಡಿಜೆ ಹಳ್ಳಿ ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ, ಅತ್ಯಾಚಾರಿ ಬಷೀರನಿಗೆ ಗಲ್ಲು ಶಿಕ್ಷೆ ವಿಧಿಸಿ
Next Article 120820 Congress Protest in Shimoga 1 ಸಂಸದ ಅನಂತ ಕುಮಾರ್ ಹೆಗಡೆ ಬಹಿರಂಗ ಕ್ಷಮೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಇದನ್ನೂ ಓದಿ

Online-Fraud-Case-image
CRIME DIARYSHIVAMOGGA CITY

ಶಿವಮೊಗ್ಗದ ಯುವಕ ₹25 ಲಕ್ಷ ಹಣ ಕಳೆದುಕೊಂಡ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/07/2025
Mukya-Pustaka-barahagarru-press-meet
SHIVAMOGGA CITY

ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
MLA-channabasappa-visit-Vidyanagara-Health-Centre.
SHIVAMOGGA CITY

ವಿದ್ಯಾನಗರ ಆರೋಗ್ಯ ಕೇಂದ್ರಕ್ಕೆ ಎಂಎಲ್‌ಎ ದಿಢೀರ್‌ ಭೇಟಿ, ಸ್ಥಳೀಯ ಬಡಾವಣೆಗಳ ನಿವಾಸಿಗಳ ಜೊತೆ ಚರ್ಚೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Sahyadri-Narayana-Multispeciality-hospital-NH-Hospital.
SHIVAMOGGA CITY

ಶಿವಮೊಗ್ಗದ NH ಆಸ್ಪತ್ರೆಯಲ್ಲಿ ಸರ್ವೈವರ್ಸ್‌ ಕ್ಲಿನಿಕ್‌, ಜು.17ರಂದು ಕ್ಯಾನ್ಸರ್‌ ಬಗ್ಗೆ ಮಹತ್ವದ ಚರ್ಚೆ, ಏನಿದು ಕ್ಲಿನಿಕ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
MP-BY-raghavendra-about-Shimoga-Airport-Flight
SHIVAMOGGA CITY

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಪಕರಣ ತರಿಸಿ 15 ದಿನವಾಯ್ತು, ಅಳವಡಿಸಿಲ್ಲ’, ರಾಘವೇಂದ್ರ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Sigandur-Launch-in-Sharavathi-River
SHIVAMOGGA CITY

ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?