SHIVAMOGGA LIVE NEWS |10 JANUARY 2023
ಶಿವಮೊಗ್ಗ : ಬೀರೂರು – ಶಿವಮೊಗ್ಗ – ತಾಳಗುಪ್ಪ ರೈಲ್ವೆ (train) ಮಾರ್ಗದ ವಿದ್ಯುದೀಕರಣ ಕಾಮಗಾರಿ ಬಿರುಸಾಗಿ ನಡೆಯುತ್ತಿದೆ. ಈಗಾಗಲೆ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ.
ತುಂಗಾ ನದಿ ರೈಲ್ವೆ (train) ಸೇತುವೆ ಮೇಲೆ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದ್ದು, ಕೇಬಲ್ ಗಳನ್ನು ಕೂಡ ಹಾಕಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಬೀರೂರು – ಶಿವಮೊಗ್ಗ – ತಾಳಗುಪ್ಪ ರೈಲ್ವೆ ಮಾರ್ಗದ ವಿದ್ಯುದೀಕರಣ ಕಾಮಗಾರಿಗಾಗಿ 2020 -21ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ 25 ಕೋಟಿ ರೂ. ಮೀಸಲಿಡಲಾಗಿತ್ತು. ರೈಲ್ವೆಯ ಸೆಂಟ್ರಲ್ ಆರ್ಗನೈಸೇಷನ್ ಫಾರ್ ರೈಲ್ವೆ ಎಲೆಕ್ಟ್ರಿಫಿಕೇಷನ್ ಸಂಸ್ಥೆ ಈ ಮಾರ್ಗದ ವಿದ್ಯುದೀಕರಣ ಕಾಮಗಾರಿ ನಡೆಸುತ್ತಿದೆ.
ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡರೆ ತಾಳಗುಪ್ಪ ಮತ್ತು ಶಿವಮೊಗ್ಗಕ್ಕೆ ವಿದ್ಯುತ್ ಇಂಜಿನ್ ಗಳು ಬರಲಿವೆ. ಇದರಿಂದ ರೈಲುಗಳ ವೇಗವು ಕೂಡ ಹೆಚ್ಚಳವಾಗಲಿದೆ.
ಇದನ್ನೂ ಓದಿ – ಶಿವಮೊಗ್ಗ – ಮೈಸೂರು ನಡುವೆ ಎಷ್ಟು ರೈಲುಗಳಿವೆ, ಎಲ್ಲೆಲ್ಲಿ ಸ್ಟಾಪ್ ಇದೆ, ಟೈಮಿಂಗ್ ಏನು?