SHIMOGA NEWS, 24 SEPTEMBER 2024 : ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ಗೆ ಸ್ಪೈಸ್ ಜೇಟ್ ವಿಮಾನಯಾನ (Flight) ಸಂಸ್ಥೆ ಸೇವೆ ಆರಂಭಿಸುತ್ತಿದೆ. ಇದರ ನಡುವೆ ಮತ್ತೆರಡು ಮಹಾನಗರಗಳಿಗೆ ಶಿವಮೊಗ್ಗದಿಂದ ವಿಮಾನ ಸೇವೆ ಒದಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಉಡಾನ್ ಯೋಜನೆ ಅಡಿ ದೆಹಲಿಗೆ ವಿಮಾನಯಾನಕ್ಕೆ ನಿರ್ಧಾರವಾಗಿದೆ. ಇದಕ್ಕೆ ಟೆಂಡರ್ ಆಗಿದೆ. ಸದ್ಯದಲ್ಲೇ ಈ ಮಾರ್ಗದಲ್ಲಿ ವಿಮಾನ ಹಾರಾಟ ಶುರುವಾಗಲಿದೆ. ಮುಂಬೈಗೆ ಸಂಪರ್ಕ ಕಲ್ಪಿಸುವ ಪ್ರಯತ್ನವಾಗುತ್ತಿದೆ. ಆದರೆ ಮುಂಬೈನಲ್ಲಿ ನಿತ್ಯ ಸಾವಿರ ವಿಮಾನಗಳ ಹಾರಾಟ ನಡೆಸುತ್ತಿವೆ. ಟ್ರಾಫಿಕ್ ಕ್ಲಿಯರೆನ್ಸ್ ಸಿಗುತ್ತಿಲ್ಲ. ಅದರೂ ಪ್ರಯತ್ನವಾಗುತ್ತಿದೆ ಎಂದರು.
ಇನ್ನು, ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯು ಅ.10ರಂದು ಚೆನ್ನೈ ಮತ್ತು ಹೈದರಾಬಾದ್ಗೆ ಸೇವೆ ಆರಂಭಿಸಲಿದೆ. ಇನ್ನೊಂದೆಡೆ ಶಿವಮೊಗ್ಗ – ಗೋವಾ, ತಿರುಪತಿ ಮಾರ್ಗದಲ್ಲಿ ಸ್ಥಗಿತವಾಗಿದ್ದ ವಿಮಾನಯಾನ ಸೇವೆ ಪುನಾರಂಭವಾಗಲಿದೆ. ಭವಿಷ್ಯದಲ್ಲಿ ಇದು ಮಧ್ಯ ಕರ್ನಾಟಕದಲ್ಲಿ ಪ್ರಮುಖ ವಿಮಾನ ನಿಲ್ದಾಣವಾಗಲಿದೆ. ವಾಣಿಜ್ಯೋದ್ಯಮಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗ ಏರ್ಪೋರ್ಟ್ ಲೈಸೆನ್ಸ್ ವಿಚಾರ, ಎಂಪಿ ಮಹತ್ವದ ಹೇಳಿಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200